ಬೆಂಗಳೂರು: ರಾಹುಲ್ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷ ದೇಶಾದ್ಯಂತ ನಡೆಸುತ್ತಿರುವ ‘ಭಾರತ್ ಜೋಡೋ ಯಾತ್ರೆ’ ನಾಳೆ ಕರ್ನಾಟಕ ರಾಜ್ಯವನ್ನು ಪ್ರವೇಶಿಸಲಿದೆ. ಈ ಯಾತ್ರೆ ರಾಜ್ಯದಲ್ಲಿ 21 ದಿನಗಳ ಕಾಲ ಸುಮಾರು ಎಂಟು ಜಿಲ್ಲೆಗಳ ಮೂಲಕ 511 ಕಿ.ಮೀ. ದೂರ ಯಾತ್ರೆ ಸಂಚರಿಸಲಿದೆ.
ಭಾರತ್ ಜೋಡೋ ಯಾತ್ರೆಯು ಸೆ.30ರಂದು ಚಾಮರಾಜನಗರ ಜಿಲ್ಲೆಯ ಮೂಲಕ ರಾಜ್ಯ ಪ್ರವೇಶಿಸಿ, ಅ.19ರಂದು ರಾಯಚೂರು ಮೂಲಕ ತೆಲಂಗಾಣಕ್ಕೆ ತೆರಳಲಿದೆ.ಯಾತ್ರೆ ರಾಜ್ಯ ಪ್ರವೇಶಿಸುತ್ತಿದ್ದಂತೆ ರಾಹುಲ್ ಗಾಂಧಿ ಅವರನ್ನು ಅದ್ಧೂರಿ ಸ್ವಾಗತದೊಂದಿಗೆ ಎದುರುಗೊಳ್ಳಲು ಈಗಾಗಲೇ ಅಗತ್ಯ ಸಿದ್ಧತೆ ಆರಂಭವಾಗಿದೆ. ರಾಹುಲ್ ಗಾಂಧಿ ಅವರ ಜೊತೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿದಂತೆ ರಾಜ್ಯದ ಹಲವು ನಾಯಕರು ಹೆಜ್ಜೆ ಹಾಕಲಿದ್ದಾರೆ.
ಇದನ್ನೂ ಓದಿ: ಮಂಗಳ ಕಾರ್ಯಗಳಿಂದ ಶುಭ..ನೋಡಿ ಇಂದಿನ ದಿನ ಭವಿಷ್ಯ..ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564
ಸುಮಾರು 25 ರಿಂದ 30 ಸಾವಿರಕ್ಕೂ ಅಧಿಕ ಮಂದಿ ಗುಂಡ್ಲುಪೇಟೆಯಲ್ಲಿ ನಡೆಯಲಿರುವ ಈ ಯಾತ್ರೆಯಲ್ಲಿ ಪಾಲ್ಗೊಳ್ಳುವ ನಿರೀಕ್ಷೆ ಇದೆ.
ಚಾಮರಾಜನಗರ ಜಿಲ್ಲೆಯ ಬಳಿಕ ಮೈಸೂರು, ಮಂಡ್ಯ, ತುಮಕೂರು, ಚಿತ್ರದುರ್ಗ, ದಾವಣಗೆರೆ, ರಾಯಚೂರು, ಬಳ್ಳಾರಿ ಜಿಲ್ಲೆಗಳ ವಿವಿಧ ವಿಧಾನಸಭಾ ಕ್ಷೇತ್ರ, ಲೋಕಸಭಾ ಕ್ಷೇತ್ರಗಳ ಮೂಲಕ ಯಾತ್ರೆ ಸಂಚರಿಸಲಿದೆ. ಆಯಾ ಜಿಲ್ಲೆಗಳಲ್ಲಿ ಯಾತ್ರೆ ಸಂಚರಿಸುವಾಗ ಸುತ್ತಮುತ್ತಲ ಕ್ಷೇತ್ರಗಳ ಪಕ್ಷದ ಶಾಸಕರು, ನಾಯಕರು, ಮುಖಂಡರು, ಕಾರ್ಯಕರ್ತರು ಭಾಗಿಯಾಗುವಂತೆ ಕೆಪಿಸಿಸಿ ಈಗಾಗಲೇ ಸ್ಪಷ್ಟ ಸೂಚನೆ ನೀಡಿದೆ.
ಕೇರಳ : ಕಾಲು ಜಾರಿ ರೈಲಿನಿಂದ ಹೊರಗೆ ಎಸೆಯಲ್ಪಟ್ಟು ವಿಟ್ಲದ ಯುವಕ ಮೃತ್ಯು – Vishwanews24
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…