ಬೆಂಗಳೂರು: ರಾಹುಲ್ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷ ದೇಶಾದ್ಯಂತ ನಡೆಸುತ್ತಿರುವ ‘ಭಾರತ್ ಜೋಡೋ ಯಾತ್ರೆ’ ನಾಳೆ ಕರ್ನಾಟಕ ರಾಜ್ಯವನ್ನು ಪ್ರವೇಶಿಸಲಿದೆ. ಈ ಯಾತ್ರೆ ರಾಜ್ಯದಲ್ಲಿ 21 ದಿನಗಳ ಕಾಲ ಸುಮಾರು ಎಂಟು ಜಿಲ್ಲೆಗಳ ಮೂಲಕ 511 ಕಿ.ಮೀ. ದೂರ ಯಾತ್ರೆ ಸಂಚರಿಸಲಿದೆ.
ಭಾರತ್ ಜೋಡೋ ಯಾತ್ರೆಯು ಸೆ.30ರಂದು ಚಾಮರಾಜನಗರ ಜಿಲ್ಲೆಯ ಮೂಲಕ ರಾಜ್ಯ ಪ್ರವೇಶಿಸಿ, ಅ.19ರಂದು ರಾಯಚೂರು ಮೂಲಕ ತೆಲಂಗಾಣಕ್ಕೆ ತೆರಳಲಿದೆ.ಯಾತ್ರೆ ರಾಜ್ಯ ಪ್ರವೇಶಿಸುತ್ತಿದ್ದಂತೆ ರಾಹುಲ್ ಗಾಂಧಿ ಅವರನ್ನು ಅದ್ಧೂರಿ ಸ್ವಾಗತದೊಂದಿಗೆ ಎದುರುಗೊಳ್ಳಲು ಈಗಾಗಲೇ ಅಗತ್ಯ ಸಿದ್ಧತೆ ಆರಂಭವಾಗಿದೆ. ರಾಹುಲ್ ಗಾಂಧಿ ಅವರ ಜೊತೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿದಂತೆ ರಾಜ್ಯದ ಹಲವು ನಾಯಕರು ಹೆಜ್ಜೆ ಹಾಕಲಿದ್ದಾರೆ.
ಇದನ್ನೂ ಓದಿ: ಮಂಗಳ ಕಾರ್ಯಗಳಿಂದ ಶುಭ..ನೋಡಿ ಇಂದಿನ ದಿನ ಭವಿಷ್ಯ..ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564
ಸುಮಾರು 25 ರಿಂದ 30 ಸಾವಿರಕ್ಕೂ ಅಧಿಕ ಮಂದಿ ಗುಂಡ್ಲುಪೇಟೆಯಲ್ಲಿ ನಡೆಯಲಿರುವ ಈ ಯಾತ್ರೆಯಲ್ಲಿ ಪಾಲ್ಗೊಳ್ಳುವ ನಿರೀಕ್ಷೆ ಇದೆ.
ಚಾಮರಾಜನಗರ ಜಿಲ್ಲೆಯ ಬಳಿಕ ಮೈಸೂರು, ಮಂಡ್ಯ, ತುಮಕೂರು, ಚಿತ್ರದುರ್ಗ, ದಾವಣಗೆರೆ, ರಾಯಚೂರು, ಬಳ್ಳಾರಿ ಜಿಲ್ಲೆಗಳ ವಿವಿಧ ವಿಧಾನಸಭಾ ಕ್ಷೇತ್ರ, ಲೋಕಸಭಾ ಕ್ಷೇತ್ರಗಳ ಮೂಲಕ ಯಾತ್ರೆ ಸಂಚರಿಸಲಿದೆ. ಆಯಾ ಜಿಲ್ಲೆಗಳಲ್ಲಿ ಯಾತ್ರೆ ಸಂಚರಿಸುವಾಗ ಸುತ್ತಮುತ್ತಲ ಕ್ಷೇತ್ರಗಳ ಪಕ್ಷದ ಶಾಸಕರು, ನಾಯಕರು, ಮುಖಂಡರು, ಕಾರ್ಯಕರ್ತರು ಭಾಗಿಯಾಗುವಂತೆ ಕೆಪಿಸಿಸಿ ಈಗಾಗಲೇ ಸ್ಪಷ್ಟ ಸೂಚನೆ ನೀಡಿದೆ.
ಕೇರಳ : ಕಾಲು ಜಾರಿ ರೈಲಿನಿಂದ ಹೊರಗೆ ಎಸೆಯಲ್ಪಟ್ಟು ವಿಟ್ಲದ ಯುವಕ ಮೃತ್ಯು – Vishwanews24
ಉಡುಪಿ :ಸಂಚಾರ ನಿಯಮ ಉಲ್ಲಂಘನೆ ಹಾಗೂ ಅತಿ ವೇಗದ ಚಾಲನೆಗೆ ಕಡಿವಾಣ ಹಾಕಲು ಜಿಲ್ಲೆಯಾದ್ಯಂತ ಹೈಟೆಕ್ ಸ್ಪೀಡ್ ರಾಡಾರ್ ಕ್ಯಾಮೆರಾ…
ಪೆಟ್ರೋಲ್, ಡಿಸೇಲ್ ಮೇಲಿನ ತೆರಿಗೆ ಕಡಿತ ಮಾಡಲ್ಲ : ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರು : ಪೆಟ್ರೋಲ್, ಡಿಸೇಲ್ ಮೇಲಿನ ತೆರಿಗೆಯನ್ನು…
ಕರಾವಳಿಯಲ್ಲಿ ಜೂನ್ 1 ರಿಂದ ಜುಲೈ 31 ರವರೆಗೆ ಯಾಂತ್ರೀಕೃತ ಮೀನುಗಾರಿಕೆ ನಿಷೇಧ ಮಂಗಳೂರು/ಉಡುಪಿ :ಕರ್ನಾಟಕ ಸಮುದ್ರ ಮೀನುಗಾರಿಕೆ ನಿಯಂತ್ರಣ…
ಶಿವಮೊಗ್ಗ : ಮೇ 22ರಿಂದ ಸಕ್ರೆಬೈಲು ಆನೆ ಬಿಡಾರಕ್ಕೆ ಪ್ರವಾಸಿಗರ ಪ್ರವೇಶ ನಿಷೇಧ ಶಿವಮೊಗ್ಗ: ದುಬಾರೆ ಆನೆ ಬಿಡಾರದಲ್ಲಿ ಎರಡು…
ಬೆಳ್ತಂಗಡಿ : ಜಲಪಾತ ವೀಕ್ಷಣೆಗೆ ತೆರಳಿದ್ದ ಯುವತಿಯರಿಗೆ ಲೈಂಗಿಕ ಕಿರುಕುಳ; ಕಾಸರಗೋಡಿನ ಮೂವರು ಪೊಲೀಸ್ ವಶಕ್ಕೆ ಬೆಳ್ತಂಗಡಿ : ಮಂಗಳೂರಿನಲ್ಲಿ…
ರಾಜ್ಯಾದ್ಯಂತ ಇಂದಿನಿಂದ 4 ದಿನ ಭಾರೀ ಮಳೆ ಮುನ್ಸೂಚನೆ ; ಮುಂದಿನ 3 ದಿನ ಯೆಲ್ಲೋ ಅಲರ್ಟ್ ಘೋಷಣೆ ಬೆಂಗಳೂರು…