Featured

ಭಾರತ್ ಜೋಡೋ ಯುವ ಸಂಘಕ್ಕೆ ನೋಂದಣಿ – vishwanews24

ಭಾರತ್ ಜೋಡೋ ಯುವ ಸಂಘಕ್ಕೆ ನೋಂದಣಿ

ಮಂಗಳೂರು,: ಯುವಜನರಲ್ಲಿ ಕ್ರೀಡೆ, ಸಂಸ್ಕøತಿ, ವೈಜ್ಞಾನಿಕ ಮನೋಭಾವ ಹಾಗೂ ಸಾಮುದಾಯಿಕ ಸಾಮಾಜಿಕ ಸಾಮರಸ್ಯವನ್ನು ಉತ್ತೇಜಿಸಲು ಪ್ರತಿ ನಗರ ವಾರ್ಡ್‍ಗಳ ವ್ಯಾಪ್ತಿಯಲ್ಲಿ ‘ಭಾರತ್ ಜೋಡೋ ಯುವ ಸಂಘ’ಗಳನ್ನು ಸ್ಥಾಪಿಸಲು ಸರ್ಕಾರ ಉದ್ದೇಶಿಸಿದೆ. ಇದು ಯುವಜನರ ಬದಲಾವಣೆಯ ಭಾಗವಾಗಿ ಯುವ ಶಕ್ತಿ, ಕನಸುಗಳು ಮತ್ತು ಕರ್ನಾಟಕ ರಾಜ್ಯದ ಉತ್ತಮ ಭವಿಷ್ಯಕ್ಕಾಗಿ ಈ ಯೋಜನೆಯನ್ನು ಹಮ್ಮಿಕೊಂಡಿದ್ದು, ಇದರಲ್ಲಿ ರಾಜ್ಯದ ಎಲ್ಲ ವರ್ಗ, ಧರ್ಮ, ಜಾತಿ, ಮತ, ಪಂಗಡಕ್ಕೆ ಸೇರಿದ 16 ರಿಂದ 35 ವರ್ಷ ವಯೋಮಿತಿಯೊಳಗಿನ ಯುವಕ ಹಾಗೂ ಯುವತಿಯರು ಆನ್‍ಲೈನ್ ಆ್ಯಪ್ ಮೂಲಕ ನೋಂದಾಯಿಸಬಹುದು.

ಈ ಯೋಜನೆಯು ಕರ್ನಾಟಕ ಸರ್ಕಾರದ ಒಂದು ಮಹತ್ವಾಕಾಂಕ್ಷೆ ಮತ್ತು ಹೊಸ ಧೈಯೋದೇಶ ಹೊಂದಿರುವ ವಿನೂತನ ಯೋಜನೆಯಾಗಿದ್ದು, ಯೋಜನೆಯಲ್ಲಿ ಸಾಮಾಜಿಕ, ಸಾಂಸ್ಕøತಿಕ, ಕ್ರೀಡೆ, ಕೌಶಲ್ಯ, ಆರೋಗ್ಯ, ಪರಿಸರ ಹೀಗೆ ಇನ್ನೂ ಮುಂತಾದ ಕಾರ್ಯಚಟುವಟಿಕೆಗಳನ್ನು ಯುವ ಸಂಘಟನೆಗಳ ಮೂಲಕ ಕೈಗೊಂಡು ರಾಜ್ಯದ ಯುವಕರು ಸಮಾಜಮುಖಿ ಕಾರ್ಯಗಳಲ್ಲಿ ಸಕ್ರಿಯವಾಗಿ ಭಾಗವಹಿಸುವ ಸಲುವಾಗಿ ಸರ್ಕಾರದ ವತಿಯಿಂದ ಪ್ರತಿ ಸಂಘಕ್ಕೆ ರೂ. 10 ಲಕ್ಷಗಳ ಅನುದಾನ ನೀಡಿ ಪೆÇ್ರೀತ್ಸಾಹ ನೀಡಲಾಗುತ್ತದೆ.

ಆದುದರಿಂದ ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯ 16 ರಿಂದ 35 ರ ವಯೋಮಾನದ ಯುವಕ/ಯುವತಿಯರು ಹೆಚ್ಚಿನ ಸಂಖ್ಯೆಯಲ್ಲಿ ಸದರಿ ಯೋಜನೆಯಲ್ಲಿ ಆನ್‍ಲೈನ್ ಅಧಿಕೃತ ವೆಬ್‍ಸೈಟ್ https://bjys.karnataka.gov.in  ಮೂಲಕ ನೋಂದಾಯಿಸಿಕೊಂಡು ಸಂಘಗಳ ರಚನೆ ಮೂಲಕ ಸಾಮಾಜಿಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಯುವ ಕರ್ನಾಟಕ ಮತ್ತು ನವ ಭಾರತದ ನಿರ್ಮಾಣವನ್ನು ಜೊತೆಯಾಗಿ ನಿರ್ಮಿಸಲು ಸಹಕರಿಸಬೇಕು.

ಹೆಚ್ಚಿನ ಮಾಹಿತಿಗೆ ಮಂಗಳೂರು ಮಹಾನಗರಪಾಲಿಕೆ ಕಛೇರಿ ಅಥವಾ ವಲಯಗಳ ಆಯುಕ್ತರ ಕಛೇರಿ (ಸಹಾಯವಾಣಿ ಸಂಖ್ಯೆ 6364265566 ಸಂಪರ್ಕಿಸಬಹುದು ಎಂದು ಮಹಾನಗರಪಾಲಿಕೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ನೇಪಾಳ ಭೀಕರ ಪ್ರವಾಹ : 5 ಲಕ್ಷ ಡಾಲರ್‌ಗಳ ತುರ್ತು ನೆರವು ಘೋಷಿಸಿದ ಅಮೆರಿಕ – vishwanews24

ನೇಪಾಳ ಭೀಕರ ಪ್ರವಾಹ : 5 ಲಕ್ಷ ಡಾಲರ್‌ಗಳ ತುರ್ತು ನೆರವು ಘೋಷಿಸಿದ ಅಮೆರಿಕ ಕಠ್ಮಂಡು: ನೇಪಾಳದ ಭೋಟೆ ಕೋಶಿ…

17 minutes ago

ಮಂಗಳೂರು ನೈಋತ್ಯ ವಲಯ ಸೇರ್ಪಡೆ ; ಶೀಘ್ರ ಸಂಭ್ರಮೋತ್ಸವ: ಸತೀಶ್‌ ಕುಂಪಲ – vishwanews24

ಮಂಗಳೂರು ನೈಋತ್ಯ ವಲಯ ಸೇರ್ಪಡೆ ; ಶೀಘ್ರ ಸಂಭ್ರಮೋತ್ಸವ: ಸತೀಶ್‌ ಕುಂಪಲ ಮಂಗಳೂರು : ರೈಲ್ವೇ ಪ್ರದೇಶವನ್ನು ನೈಋತ್ಯ ವಲಯಕ್ಕೆ…

24 minutes ago

ಶಿರ್ವ : ಹುಚ್ಚುನಾಯಿ ಹಾವಳಿ ; ಹಲವರಿಗೆ ಕಡಿತ , ಸ್ಥಳೀಯರಲ್ಲಿ ಆತಂಕ – vishwanews24

ಶಿರ್ವ : ಹುಚ್ಚುನಾಯಿ ಹಾವಳಿ ; ಹಲವರಿಗೆ ಕಡಿತ , ಸ್ಥಳೀಯರಲ್ಲಿ ಆತಂಕ ಶಿರ್ವ: ಶಿರ್ವ ಮತ್ತು ಕುತ್ಯಾರು ಗ್ರಾ.ಪಂ.…

44 minutes ago

ಗ್ಯಾಸ್ ಏಜೆನ್ಸಿಗಳಿಂದ ಎಲ್‌ಪಿಜಿ ಪೂರೈಕೆ: ನೆಟ್‌ವರ್ಕ್ ಇಲ್ಲದ ಕಡೆ ಒಟಿಪಿ ರಿಯಾಯಿತಿ : ಕೋಟ ಶ್ರೀನಿವಾಸ ಪೂಜಾರಿ – vishwanews24

ಗ್ಯಾಸ್ ಏಜೆನ್ಸಿಗಳಿಂದ ಎಲ್‌ಪಿಜಿ ಪೂರೈಕೆ: ನೆಟ್‌ವರ್ಕ್ ಇಲ್ಲದ ಕಡೆ ಒಟಿಪಿ ರಿಯಾಯಿತಿ : ಕೋಟ ಶ್ರೀನಿವಾಸ ಪೂಜಾರಿ ಮಣಿಪಾಲ: ನೆಟ್‌ವರ್ಕ್‌…

53 minutes ago

ಕಟಪಾಡಿ:  ಮಟ್ಟು ಬೀಚ್‌ನಲ್ಲಿ ತೀವ್ರಗೊಂಡ ಕಡಲ್ಕೊರೆತ : ತುರ್ತು  ಸುರಕ್ಷ ಕಾಮಗಾರಿ ಆರಂಭ – vishwanews24

ಕಟಪಾಡಿ:  ಮಟ್ಟು ಬೀಚ್‌ನಲ್ಲಿ ತೀವ್ರಗೊಂಡ ಕಡಲ್ಕೊರೆತ : ತುರ್ತು  ಸುರಕ್ಷ ಕಾಮಗಾರಿ ಆರಂಭ ಕಟಪಾಡಿ: ಕಾಪು ತಾಲೂಕು ಕೋಟೆ ಗ್ರಾ.…

1 hour ago

ನೇಪಾಳ ಪ್ರವಾಹ: ನಾಪತ್ತೆಯಾದ ಕನ್ನಡಿಗರ ಮಾಹಿತಿ ನೀಡಲು ಸರ್ಕಾರ ಮನವಿ – vishwanews24

ನೇಪಾಳ ಪ್ರವಾಹ: ನಾಪತ್ತೆಯಾದ ಕನ್ನಡಿಗರ ಮಾಹಿತಿ ನೀಡಲು ಸರ್ಕಾರ ಮನವಿ ಬೆಂಗಳೂರು: ನೇಪಾಳದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪ ಹಾಗೂ ದಿಢೀರ್…

1 hour ago