Featured

‘ಭಾರತ್ ಮಾತಾಕಿ ಜೈ’ ಘೋಷಣೆ ಮೂಲಕ ದಕ್ಷಿಣ ಕೊರಿಯಾದಲ್ಲಿ ಪ್ರಧಾನಿ ಮೋದಿಗೆ ಅದ್ಧೂರಿ ಸ್ವಾಗತ – Vishwanews24

ನವದಹೆಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಎರಡು ದಿನಗಳ ಭೇಟಿಗಾಗಿ ದಕ್ಷಿಣ ಕೊರಿಯಾ ತಲುಪಿದ್ದಾರೆ. ಗುರುವಾರ ಬೆಳಗಿನ ಜಾವ ಪ್ರಧಾನಿ ಮೋದಿ ದಕ್ಷಿಣ ಕೊರಿಯಾದ ಸಿಯೋಲ್ ತಲುಪುತ್ತಿದ್ದಂತೆ ಭಾರತೀಯ ಸಮುದಾಯ ಅವರನ್ನು ಭವ್ಯವಾಗಿ ಸ್ವಾಗತಿಸಿತು.

ಈ ಸಂದರ್ಭದಲ್ಲಿ, ವಂದೇ ಮಾತರಂ ಮತ್ತು ಭಾರತ್ ಮಾತಾ ಕಿ ಜೈ ಎಂಬ ಘೋಷಣೆಗಳು ಕೇಳಿಬಂದವು. ಜೊತೆಗೆ ಹೋಟೆಲ್ ನಲ್ಲಿ ಹರ ಹರ ಮಹಾದೇವ್ ಜಯ ಘೋಷ ಕೂಡ ಕೇಳಿಬಂದಿತು.

ದಕ್ಷಿಣ ಕೊರಿಯಾ ಜತೆಗಿನ ರಾಜತಾಂತ್ರಿಕ ಸಂಬಂಧ ವೃದ್ಧಿ ಹಾಗೂ ತಾಂತ್ರಿಕ ಕುಶಲತೆ ಪಾಲುದಾರಿಕೆ ಬಲಗೊಳಿಸುವ ನಿಟ್ಟಿನಲ್ಲಿ ಈ ಭೇಟಿ ಸಹಕಾರಿಯಾಗಲಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರವೀಶ್‌ ಕುಮಾರ್‌ ಅಭಿಪ್ರಾಯ ಪಟ್ಟಿದ್ದಾರೆ.

ಮೇಕ್‌ ಇನ್‌ ಇಂಡಿಯಾದಂತಹ ಕಾರ್ಯಕ್ರಮಗಳಲ್ಲಿ ದಕ್ಷಿಣ ಕೊರಿಯಾ ಪ್ರಮುಖ ಪಾಲುದಾರ ರಾಷ್ಟ್ರವಾಗಿದೆ. ಉಭಯ ರಾಷ್ಟ್ರಗಳು ಪ್ರಾದೇಶಿಕ ಹಾಗೂ ಜಾಗತಿಕ ಶಾಂತಿಗಾಗಿ ಯೋಜನೆಗಳು, ಮೌಲ್ಯಗಳನ್ನು ಹಂಚಿಕೊಳ್ಳುತ್ತಿವೆ ಎಂದು ಪ್ರಧಾನಿ ಮೋದಿ ದಕ್ಷಿಣ ಕೊರಿಯಾ ಭೇಟಿಗೂ ಮುನ್ನ ತಿಳಿಸಿದರು..

ಆರ್ಥಿಕ ಮಾರುಕಟ್ಟೆಯ ಪಾಲುದಾರನಾಗಿರುವ ದಕ್ಷಿಣ ಕೊರಿಯಾ ನಮ್ಮ ಅವಶ್ಯಕತೆಗಳು ಮತ್ತು ಸಾಮರ್ಥ್ಯವು ಪರಸ್ಪರ ಪೂರಕವಾಗಿದೆ. ದಕ್ಷಿಣ ಕೊರಿಯಾ ಭಾರತದಲ್ಲಿ ಮೇಕ್, ಕ್ಲೀನ್ ಇಂಡಿಯಾ ಮತ್ತು ಸ್ಟಾರ್ಟ್ ಅಪ್ ಇಂಡಿಯಾ ಪ್ರಮುಖ ಪಾಲುದಾರ. ಈ ಭೇಟಿಯ ಸಮಯದಲ್ಲಿ, ಪ್ರಧಾನಿ ಮೋದಿ ದ್ವಿಪಕ್ಷೀಯ ಸಂಬಂಧಗಳ ವೈವಿಧ್ಯಮಯ ಆಯಾಮಗಳನ್ನು ಚರ್ಚಿಸುತ್ತಾರೆ ಎಂದು ಮೂಲಗಳು ತಿಳಿಸಿವೆ.

ಈ ಭೇಟಿಯ ಸಮಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ 2018 ರ ಸಿಯೋಲ್ ಶಾಂತಿ ಗೌರವ ನೀಡಲಾಗುವುದು. ಸಿಯೋಲ್ ಪೀಸ್ ಆನರ್ ಕಲ್ಚರಲ್ ಫೌಂಡೇಶನ್ ಫೆಬ್ರವರಿ 22 ರಂದು ಸಮಾರಂಭವನ್ನು ಆಯೋಜಿಸಿದೆ. ಶ್ರೀಮಂತರು ಮತ್ತು ಬಡವರ ನಡುವಣ ಆರ್ಥಿಕ ಹಾಗೂ ಸಾಮಾಜಿಕ ಅಂತರ ತಗ್ಗಿಸಲು ಭಾರತ ಮತ್ತು ಜಾಗತಿಕ ಆರ್ಥಿಕ ಅಭಿವೃದ್ಧಿಗೆ ನೀಡಿದ ಕೊಡುಗೆಗಳಿಗಾಗಿ ಮೋದಿ ಈ ಪುರಸ್ಕಾರಕ್ಕೆ ಪಾತ್ರವಾಗಿದ್ದಾರೆ. ಸಿಯೋಲ್ ಶಾಂತಿ ಪ್ರಶಸ್ತಿಗೆ ಆಯ್ಕೆಯಾದ 14ನೇ ಜಾಗತಿಕ ನಾಯಕ ಎಂಬ ಹಿರಿಮೆಯೂ ಮೋದಿ ಅವರಿಗೆ ಸಲ್ಲಿಕೆಯಾಗಿದೆ.

Vishwa News 24

Recent Posts

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

21 hours ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

22 hours ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

22 hours ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

22 hours ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

24 hours ago

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ – vishwanews24

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…

24 hours ago