ನವದಹೆಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಎರಡು ದಿನಗಳ ಭೇಟಿಗಾಗಿ ದಕ್ಷಿಣ ಕೊರಿಯಾ ತಲುಪಿದ್ದಾರೆ. ಗುರುವಾರ ಬೆಳಗಿನ ಜಾವ ಪ್ರಧಾನಿ ಮೋದಿ ದಕ್ಷಿಣ ಕೊರಿಯಾದ ಸಿಯೋಲ್ ತಲುಪುತ್ತಿದ್ದಂತೆ ಭಾರತೀಯ ಸಮುದಾಯ ಅವರನ್ನು ಭವ್ಯವಾಗಿ ಸ್ವಾಗತಿಸಿತು.
ಈ ಸಂದರ್ಭದಲ್ಲಿ, ವಂದೇ ಮಾತರಂ ಮತ್ತು ಭಾರತ್ ಮಾತಾ ಕಿ ಜೈ ಎಂಬ ಘೋಷಣೆಗಳು ಕೇಳಿಬಂದವು. ಜೊತೆಗೆ ಹೋಟೆಲ್ ನಲ್ಲಿ ಹರ ಹರ ಮಹಾದೇವ್ ಜಯ ಘೋಷ ಕೂಡ ಕೇಳಿಬಂದಿತು.
ದಕ್ಷಿಣ ಕೊರಿಯಾ ಜತೆಗಿನ ರಾಜತಾಂತ್ರಿಕ ಸಂಬಂಧ ವೃದ್ಧಿ ಹಾಗೂ ತಾಂತ್ರಿಕ ಕುಶಲತೆ ಪಾಲುದಾರಿಕೆ ಬಲಗೊಳಿಸುವ ನಿಟ್ಟಿನಲ್ಲಿ ಈ ಭೇಟಿ ಸಹಕಾರಿಯಾಗಲಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರವೀಶ್ ಕುಮಾರ್ ಅಭಿಪ್ರಾಯ ಪಟ್ಟಿದ್ದಾರೆ.
ಮೇಕ್ ಇನ್ ಇಂಡಿಯಾದಂತಹ ಕಾರ್ಯಕ್ರಮಗಳಲ್ಲಿ ದಕ್ಷಿಣ ಕೊರಿಯಾ ಪ್ರಮುಖ ಪಾಲುದಾರ ರಾಷ್ಟ್ರವಾಗಿದೆ. ಉಭಯ ರಾಷ್ಟ್ರಗಳು ಪ್ರಾದೇಶಿಕ ಹಾಗೂ ಜಾಗತಿಕ ಶಾಂತಿಗಾಗಿ ಯೋಜನೆಗಳು, ಮೌಲ್ಯಗಳನ್ನು ಹಂಚಿಕೊಳ್ಳುತ್ತಿವೆ ಎಂದು ಪ್ರಧಾನಿ ಮೋದಿ ದಕ್ಷಿಣ ಕೊರಿಯಾ ಭೇಟಿಗೂ ಮುನ್ನ ತಿಳಿಸಿದರು..
ಆರ್ಥಿಕ ಮಾರುಕಟ್ಟೆಯ ಪಾಲುದಾರನಾಗಿರುವ ದಕ್ಷಿಣ ಕೊರಿಯಾ ನಮ್ಮ ಅವಶ್ಯಕತೆಗಳು ಮತ್ತು ಸಾಮರ್ಥ್ಯವು ಪರಸ್ಪರ ಪೂರಕವಾಗಿದೆ. ದಕ್ಷಿಣ ಕೊರಿಯಾ ಭಾರತದಲ್ಲಿ ಮೇಕ್, ಕ್ಲೀನ್ ಇಂಡಿಯಾ ಮತ್ತು ಸ್ಟಾರ್ಟ್ ಅಪ್ ಇಂಡಿಯಾ ಪ್ರಮುಖ ಪಾಲುದಾರ. ಈ ಭೇಟಿಯ ಸಮಯದಲ್ಲಿ, ಪ್ರಧಾನಿ ಮೋದಿ ದ್ವಿಪಕ್ಷೀಯ ಸಂಬಂಧಗಳ ವೈವಿಧ್ಯಮಯ ಆಯಾಮಗಳನ್ನು ಚರ್ಚಿಸುತ್ತಾರೆ ಎಂದು ಮೂಲಗಳು ತಿಳಿಸಿವೆ.
ಈ ಭೇಟಿಯ ಸಮಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ 2018 ರ ಸಿಯೋಲ್ ಶಾಂತಿ ಗೌರವ ನೀಡಲಾಗುವುದು. ಸಿಯೋಲ್ ಪೀಸ್ ಆನರ್ ಕಲ್ಚರಲ್ ಫೌಂಡೇಶನ್ ಫೆಬ್ರವರಿ 22 ರಂದು ಸಮಾರಂಭವನ್ನು ಆಯೋಜಿಸಿದೆ. ಶ್ರೀಮಂತರು ಮತ್ತು ಬಡವರ ನಡುವಣ ಆರ್ಥಿಕ ಹಾಗೂ ಸಾಮಾಜಿಕ ಅಂತರ ತಗ್ಗಿಸಲು ಭಾರತ ಮತ್ತು ಜಾಗತಿಕ ಆರ್ಥಿಕ ಅಭಿವೃದ್ಧಿಗೆ ನೀಡಿದ ಕೊಡುಗೆಗಳಿಗಾಗಿ ಮೋದಿ ಈ ಪುರಸ್ಕಾರಕ್ಕೆ ಪಾತ್ರವಾಗಿದ್ದಾರೆ. ಸಿಯೋಲ್ ಶಾಂತಿ ಪ್ರಶಸ್ತಿಗೆ ಆಯ್ಕೆಯಾದ 14ನೇ ಜಾಗತಿಕ ನಾಯಕ ಎಂಬ ಹಿರಿಮೆಯೂ ಮೋದಿ ಅವರಿಗೆ ಸಲ್ಲಿಕೆಯಾಗಿದೆ.
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…
ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ ನವದೆಹಲಿ: ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆಯನ್ನು ನಿಯಂತ್ರಿಸಲು ಮತ್ತು…
ಹಿಜಬ್ ಬಗ್ಗೆ ಮಾತಾಡುವ ಬಿಜೆಪಿಯವರು ನೀಟ್ ಬಗ್ಗೆ ಮಾತಾಡಲಿ : ಮಧು ಬಂಗಾರಪ್ಪ ಆಕ್ರೋಶ ಬೆಂಗಳೂರು: ಹಿಜಬ್ ಬಗ್ಗೆ ಮಾತಾಡುವ…