Featured

‘ಭಾರತ್ ಮಾತಾಕಿ ಜೈ’ ಘೋಷಣೆ ಮೂಲಕ ದಕ್ಷಿಣ ಕೊರಿಯಾದಲ್ಲಿ ಪ್ರಧಾನಿ ಮೋದಿಗೆ ಅದ್ಧೂರಿ ಸ್ವಾಗತ – Vishwanews24

ನವದಹೆಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಎರಡು ದಿನಗಳ ಭೇಟಿಗಾಗಿ ದಕ್ಷಿಣ ಕೊರಿಯಾ ತಲುಪಿದ್ದಾರೆ. ಗುರುವಾರ ಬೆಳಗಿನ ಜಾವ ಪ್ರಧಾನಿ ಮೋದಿ ದಕ್ಷಿಣ ಕೊರಿಯಾದ ಸಿಯೋಲ್ ತಲುಪುತ್ತಿದ್ದಂತೆ ಭಾರತೀಯ ಸಮುದಾಯ ಅವರನ್ನು ಭವ್ಯವಾಗಿ ಸ್ವಾಗತಿಸಿತು.

ಈ ಸಂದರ್ಭದಲ್ಲಿ, ವಂದೇ ಮಾತರಂ ಮತ್ತು ಭಾರತ್ ಮಾತಾ ಕಿ ಜೈ ಎಂಬ ಘೋಷಣೆಗಳು ಕೇಳಿಬಂದವು. ಜೊತೆಗೆ ಹೋಟೆಲ್ ನಲ್ಲಿ ಹರ ಹರ ಮಹಾದೇವ್ ಜಯ ಘೋಷ ಕೂಡ ಕೇಳಿಬಂದಿತು.

ದಕ್ಷಿಣ ಕೊರಿಯಾ ಜತೆಗಿನ ರಾಜತಾಂತ್ರಿಕ ಸಂಬಂಧ ವೃದ್ಧಿ ಹಾಗೂ ತಾಂತ್ರಿಕ ಕುಶಲತೆ ಪಾಲುದಾರಿಕೆ ಬಲಗೊಳಿಸುವ ನಿಟ್ಟಿನಲ್ಲಿ ಈ ಭೇಟಿ ಸಹಕಾರಿಯಾಗಲಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರವೀಶ್‌ ಕುಮಾರ್‌ ಅಭಿಪ್ರಾಯ ಪಟ್ಟಿದ್ದಾರೆ.

ಮೇಕ್‌ ಇನ್‌ ಇಂಡಿಯಾದಂತಹ ಕಾರ್ಯಕ್ರಮಗಳಲ್ಲಿ ದಕ್ಷಿಣ ಕೊರಿಯಾ ಪ್ರಮುಖ ಪಾಲುದಾರ ರಾಷ್ಟ್ರವಾಗಿದೆ. ಉಭಯ ರಾಷ್ಟ್ರಗಳು ಪ್ರಾದೇಶಿಕ ಹಾಗೂ ಜಾಗತಿಕ ಶಾಂತಿಗಾಗಿ ಯೋಜನೆಗಳು, ಮೌಲ್ಯಗಳನ್ನು ಹಂಚಿಕೊಳ್ಳುತ್ತಿವೆ ಎಂದು ಪ್ರಧಾನಿ ಮೋದಿ ದಕ್ಷಿಣ ಕೊರಿಯಾ ಭೇಟಿಗೂ ಮುನ್ನ ತಿಳಿಸಿದರು..

ಆರ್ಥಿಕ ಮಾರುಕಟ್ಟೆಯ ಪಾಲುದಾರನಾಗಿರುವ ದಕ್ಷಿಣ ಕೊರಿಯಾ ನಮ್ಮ ಅವಶ್ಯಕತೆಗಳು ಮತ್ತು ಸಾಮರ್ಥ್ಯವು ಪರಸ್ಪರ ಪೂರಕವಾಗಿದೆ. ದಕ್ಷಿಣ ಕೊರಿಯಾ ಭಾರತದಲ್ಲಿ ಮೇಕ್, ಕ್ಲೀನ್ ಇಂಡಿಯಾ ಮತ್ತು ಸ್ಟಾರ್ಟ್ ಅಪ್ ಇಂಡಿಯಾ ಪ್ರಮುಖ ಪಾಲುದಾರ. ಈ ಭೇಟಿಯ ಸಮಯದಲ್ಲಿ, ಪ್ರಧಾನಿ ಮೋದಿ ದ್ವಿಪಕ್ಷೀಯ ಸಂಬಂಧಗಳ ವೈವಿಧ್ಯಮಯ ಆಯಾಮಗಳನ್ನು ಚರ್ಚಿಸುತ್ತಾರೆ ಎಂದು ಮೂಲಗಳು ತಿಳಿಸಿವೆ.

ಈ ಭೇಟಿಯ ಸಮಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ 2018 ರ ಸಿಯೋಲ್ ಶಾಂತಿ ಗೌರವ ನೀಡಲಾಗುವುದು. ಸಿಯೋಲ್ ಪೀಸ್ ಆನರ್ ಕಲ್ಚರಲ್ ಫೌಂಡೇಶನ್ ಫೆಬ್ರವರಿ 22 ರಂದು ಸಮಾರಂಭವನ್ನು ಆಯೋಜಿಸಿದೆ. ಶ್ರೀಮಂತರು ಮತ್ತು ಬಡವರ ನಡುವಣ ಆರ್ಥಿಕ ಹಾಗೂ ಸಾಮಾಜಿಕ ಅಂತರ ತಗ್ಗಿಸಲು ಭಾರತ ಮತ್ತು ಜಾಗತಿಕ ಆರ್ಥಿಕ ಅಭಿವೃದ್ಧಿಗೆ ನೀಡಿದ ಕೊಡುಗೆಗಳಿಗಾಗಿ ಮೋದಿ ಈ ಪುರಸ್ಕಾರಕ್ಕೆ ಪಾತ್ರವಾಗಿದ್ದಾರೆ. ಸಿಯೋಲ್ ಶಾಂತಿ ಪ್ರಶಸ್ತಿಗೆ ಆಯ್ಕೆಯಾದ 14ನೇ ಜಾಗತಿಕ ನಾಯಕ ಎಂಬ ಹಿರಿಮೆಯೂ ಮೋದಿ ಅವರಿಗೆ ಸಲ್ಲಿಕೆಯಾಗಿದೆ.

Vishwa News 24

Recent Posts

ಪಡುಬಿದ್ರಿ : ವ್ಯಕ್ತಿ ನಾಪತ್ತೆ ; ಪತ್ತೆಗೆ ಮನವಿ -vishwanews24

ಪಡುಬಿದ್ರಿ : ವ್ಯಕ್ತಿ ನಾಪತ್ತೆ ; ಪತ್ತೆಗೆ ಮನವಿ ಪಡುಬಿದ್ರಿ : ಕಂಚಿನಡ್ಕದ ನಿವಾಸಿ ರವೀಂದ್ರ (35) ಪಡುಬಿದ್ರಿ ಪೇಟೆಗೆ…

1 day ago

ಪಡುಬಿದ್ರಿ ಪೊಲೀಸರ ವಿಶೇಷ ಕಾರ್ಯಾಚರಣೆ :ರಸ್ತೆ ಅಪಘಾತ ಪ್ರಕರಣದಲ್ಲಿ 23 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಲಾರಿ ಚಾಲಕ ಅರೆಸ್ಟ್ -vishwanews24

ಪಡುಬಿದ್ರಿ ಪೊಲೀಸರ ವಿಶೇಷ ಕಾರ್ಯಾಚರಣೆ :ರಸ್ತೆ ಅಪಘಾತ ಪ್ರಕರಣದಲ್ಲಿ 23 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಲಾರಿ ಚಾಲಕ ಅರೆಸ್ಟ್ ಉಡುಪಿ: 2002ರಲ್ಲಿ…

2 days ago

ಬೆಂಗಳೂರು : ಸ್ವಾಮೀಜಿ ವೇಷದಲ್ಲಿ ಬಂದು ಕೈಚಳಕ; ಮನೆಯಲ್ಲಿ ದೋಷ, ಸಾವಿನ ಕಂಟಕ ಎಂದು ಹೆದರಿಸಿ ಚಿನ್ನಾಭರಣ ದೋಚಿ ಪರಾರಿ -vishwanews24

ಬೆಂಗಳೂರು : ಸ್ವಾಮೀಜಿ ವೇಷದಲ್ಲಿ ಬಂದು ಕೈಚಳಕ; ಮನೆಯಲ್ಲಿ ದೋಷ, ಸಾವಿನ ಕಂಟಕ ಎಂದು ಹೆದರಿಸಿ ಚಿನ್ನಾಭರಣ ದೋಚಿ ಪರಾರಿ…

2 days ago

ಬೆಳ್ತಂಗಡಿ: ಅಪ್ರಾಪ್ತ ಬಾಲಕಿ ಅತ್ಯಾಚಾರ ಪ್ರಕರಣ ; ಆರೋಪಿ ಅರೆಸ್ಟ್ -vishwanews24

ಬೆಳ್ತಂಗಡಿ: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ ; ಆರೋಪಿ ಅರೆಸ್ಟ್ ಬೆಳ್ತಂಗಡಿ : ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ಮಾಡಿ ಬಾಲಕಿ…

2 days ago

ಮಂತ್ರಾಲಯ ಬಳಿ ಅಪಘಾತ: ಮಂಗಳೂರಿನ ಹಾಪ್‌ಕಾಮ್ಸ್ ನ ಪ್ರಧಾನ ವ್ಯವಸ್ಥಾಪಕ ರವಿ ಶೆಟ್ಟಿ ನಿಧನ -vishwanews24

ಮಂತ್ರಾಲಯ ಬಳಿ ಅಪಘಾತ: ಮಂಗಳೂರಿನ ಹಾಪ್‌ಕಾಮ್ಸ್ ನ ಪ್ರಧಾನ ವ್ಯವಸ್ಥಾಪಕ ರವಿ ಶೆಟ್ಟಿ ನಿಧನ ಕರ್ನೂಲು: ಕರ್ನೂಲು ಜಿಲ್ಲೆಯ ಮಂತ್ರಾಲಯದ…

2 days ago

ಉಡುಪಿ ಬಡಗುಬೆಟ್ಟು ಕಂಬಳಕ್ಕೆ ತಡೆ: ಆದೇಶ ತಕ್ಷಣ ಹಿಂಪಡೆಯಲು ಶಾಸಕ ಗುರ್ಮೆ ಆಗ್ರಹ -Vishwanews24

ಉಡುಪಿ ಬಡಗುಬೆಟ್ಟು ಕಂಬಳಕ್ಕೆ ತಡೆ: ಆದೇಶ ತಕ್ಷಣ ಹಿಂಪಡೆಯಲು ಶಾಸಕ ಗುರ್ಮೆ ಆಗ್ರಹ ಉಡುಪಿ: ಉಡುಪಿ ಬಡಗುಬೆಟ್ಟು ಕೋಟಿ–ಚೆನ್ನಯ ಕಂಬಳಕ್ಕೆ…

2 days ago