Featured

ಭಾರತ್ ಮಾತಾ ಕಿ ಜೈ ಎಂದವರ ಮೇಲೆ ಕೊಲ್ಲುವ ಪ್ರಯತ್ನ ; ಹಿಂದೂ ಸಮಾಜ ಸುಮ್ಮನಿರಲ್ಲ : ಶಾಸಕ ಭರತ್ ಶೆಟ್ಟಿ ಎಚ್ಚರಿಕೆ  – vishwanews24

ಭಾರತ್ ಮಾತಾ ಕಿ ಜೈ ಎಂದವರ ಮೇಲೆ ಕೊಲ್ಲುವ ಪ್ರಯತ್ನ ; ಹಿಂದೂ ಸಮಾಜ ಸುಮ್ಮನಿರಲ್ಲ : ಶಾಸಕ ಭರತ್ ಶೆಟ್ಟಿ ಎಚ್ಚರಿಕೆ

ಮಂಗಳೂರು : ಭಾರತ್ ಮಾತಾ ಕಿ ಜೈ ಎಂದವರ ಮೇಲೆ ಕೊಲ್ಲುವ ಪ್ರಯತ್ನ ಮಾಡಿದ್ದು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಎಷ್ಟರ ಮಟ್ಟಿಗೆ ಹದಗೆಟ್ಟಿದೆ ಎಂದು ತಿಳಿಯುತ್ತದೆ. ಆದರೆ ಹಿಂದೂ ಸಮಾಜ ಸುಮ್ಮನಿರಲ್ಲ ಎಂದು ಶಾಸಕ ಭರತ್ ಶೆಟ್ಟಿ ಎಚ್ಚರಿಕೆ ನೀಡಿದ್ದಾರೆ.

ಬೋಳಿಯಾರ್ ನಲ್ಲಿ ನಡೆದ ಚೂರಿ ಇರಿತ ಪ್ರಕರಣದಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ಬಿಜೆಪಿ ಕಾರ್ಯಕರ್ತರನ್ನು ಶಾಸಕ ಭರತ್ ಶೆಟ್ಟಿ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು. ಬಳಿಕ ಮಾತನಾಡಿದ ಅವರು ಜಿಲ್ಲೆಯಲ್ಲಿ ನಡೆಯುತ್ತಿರುವ ಅನಾಹುತಗಳಿಗೆ ರಾಜ್ಯ ಸರ್ಕಾರ ಮತ್ತು ಪೊಲೀಸ್ ಇಲಾಖೆಯೇ ಹೊಣೆ ಇನ್ನು ಸರಿಪಡಿಸುತ್ತರೋ ಗೊತ್ತಿಲ್ಲ ಆದರೆ ಹಿಂದೂ ಸಮಾಜ ಸುಮ್ಮನಿರಲ್ಲ ಎಂದು ಎಚ್ಚರಿಕೆ ನೀಡಿದರು. ಈ ವಿಚಾರವನ್ನು ಗಮನಿಸಿದರೆ ಹಿಂದೂಗಳಿಗೆ ಕಾನೂನನ್ನು ನೀವೆ ಕೈಗೆತ್ತಿಕೊಳ್ಳಿ ಎಂಬ ಸೂಚನೆಯನ್ನು ಸರಕಾರವೇ ನೀಡಿದಂತೆ ಕಾಣುತ್ತಿದೆ ಎಂದರು.

ಇನ್ನು ಬಿಜೆಪಿ ಕಾಯಕರ್ತರ ಮೇಲೆ ನೀಡಲಾದ ಪ್ರತಿ ದೂರಿನ ಬಗ್ಗೆ ಮಾತನಾಡಿದ ಅವರು ಕಾಂಗ್ರೆಸ್ ನವರ ಪ್ರೇರಣೆಯಿಂದ ಕಾರ್ಯಕರ್ತರ ಮೇಲೆ ಕೇಸ್ ಹಾಕಿರುವ ವಿಚಾರ ನಮ್ಮ ಅರಿವಿಗೆ ಬಂದಿದೆ. ವಿಜಯೋತ್ಸವ ಮುಗಿದ ನಂತರ ಮೂರು ಮಂದಿ ಯುವಕರು ಭಾರತ್ ಮಾತಾ ಕೀ ಜೈ ಎಂದು ಘೋಷಣೆ ಕೂಗಿದ್ದಾರೆ. ಹೊರತಾಗಿ ಪ್ರಚೋದನಾಕಾರಿ ಘೋಷಣೆ ಕೂಗಿಲ್ಲ. ಪ್ರಚೋದನಕಾರಿ ಘೋಷಣೆ ಕೂಗಿದ್ದಾರೆಂದು ಪೊಲೀಸರು ಹೇಳುತ್ತಿದ್ದಾರೆ. ಭಾರತ್ ಮಾತಾ ಕೀ ಜೈ ಎನ್ನುವುದು ಪ್ರಚೋದನಕಾರಿ ಘೋಷಣೆ ಎಂದಾದರೆ ನಾವು ಪಾಕಿಸ್ತಾನದಲ್ಲಿ ಇದ್ದೇವಾ ಅಥವಾ ಭಾರತದಲ್ಲಿ ಇದ್ದೇವಾ ಎಂಬ ಪ್ರಶ್ನೆ ಮೂಡುತ್ತದೆ. ಪಾಕಿಸ್ತಾನ್ ಜಿಂದಾಬಾದ್ ಎಂದವರ ಮೇಲೆ ಪ್ರಕರಣ ದಾಖಲಿಸಲು ಮೀನಾಮೇಷ ಎಣಿಸುವವರು ಭಾರತ್ ಮಾತಕೀ ಜೈ ಎಂದವರಿಗೆ ಹಲ್ಲೆಯಾದಾಗ ಪ್ರೋತ್ಸಾಹ ನೀಡುವ ಸರ್ಕಾರದ ವಿರುದ್ಧ ಕಿಡಿಕಾರಿದರು.

Vishwa News 24

Recent Posts

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ -vishwanews24

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…

3 hours ago

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ -vishwanews24

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…

3 hours ago

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು -vishwanews24

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…

3 hours ago

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ:ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ ಬಹಿರಂಗ! -vishwanews24

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ…

4 hours ago

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

1 day ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

1 day ago