Featured

ಭಾರತ್ ಮಾತಾ ಕಿ ಜೈ ಎಂದವರ ಮೇಲೆ ಕೊಲ್ಲುವ ಪ್ರಯತ್ನ ; ಹಿಂದೂ ಸಮಾಜ ಸುಮ್ಮನಿರಲ್ಲ : ಶಾಸಕ ಭರತ್ ಶೆಟ್ಟಿ ಎಚ್ಚರಿಕೆ  – vishwanews24

ಭಾರತ್ ಮಾತಾ ಕಿ ಜೈ ಎಂದವರ ಮೇಲೆ ಕೊಲ್ಲುವ ಪ್ರಯತ್ನ ; ಹಿಂದೂ ಸಮಾಜ ಸುಮ್ಮನಿರಲ್ಲ : ಶಾಸಕ ಭರತ್ ಶೆಟ್ಟಿ ಎಚ್ಚರಿಕೆ

ಮಂಗಳೂರು : ಭಾರತ್ ಮಾತಾ ಕಿ ಜೈ ಎಂದವರ ಮೇಲೆ ಕೊಲ್ಲುವ ಪ್ರಯತ್ನ ಮಾಡಿದ್ದು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಎಷ್ಟರ ಮಟ್ಟಿಗೆ ಹದಗೆಟ್ಟಿದೆ ಎಂದು ತಿಳಿಯುತ್ತದೆ. ಆದರೆ ಹಿಂದೂ ಸಮಾಜ ಸುಮ್ಮನಿರಲ್ಲ ಎಂದು ಶಾಸಕ ಭರತ್ ಶೆಟ್ಟಿ ಎಚ್ಚರಿಕೆ ನೀಡಿದ್ದಾರೆ.

ಬೋಳಿಯಾರ್ ನಲ್ಲಿ ನಡೆದ ಚೂರಿ ಇರಿತ ಪ್ರಕರಣದಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ಬಿಜೆಪಿ ಕಾರ್ಯಕರ್ತರನ್ನು ಶಾಸಕ ಭರತ್ ಶೆಟ್ಟಿ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು. ಬಳಿಕ ಮಾತನಾಡಿದ ಅವರು ಜಿಲ್ಲೆಯಲ್ಲಿ ನಡೆಯುತ್ತಿರುವ ಅನಾಹುತಗಳಿಗೆ ರಾಜ್ಯ ಸರ್ಕಾರ ಮತ್ತು ಪೊಲೀಸ್ ಇಲಾಖೆಯೇ ಹೊಣೆ ಇನ್ನು ಸರಿಪಡಿಸುತ್ತರೋ ಗೊತ್ತಿಲ್ಲ ಆದರೆ ಹಿಂದೂ ಸಮಾಜ ಸುಮ್ಮನಿರಲ್ಲ ಎಂದು ಎಚ್ಚರಿಕೆ ನೀಡಿದರು. ಈ ವಿಚಾರವನ್ನು ಗಮನಿಸಿದರೆ ಹಿಂದೂಗಳಿಗೆ ಕಾನೂನನ್ನು ನೀವೆ ಕೈಗೆತ್ತಿಕೊಳ್ಳಿ ಎಂಬ ಸೂಚನೆಯನ್ನು ಸರಕಾರವೇ ನೀಡಿದಂತೆ ಕಾಣುತ್ತಿದೆ ಎಂದರು.

ಇನ್ನು ಬಿಜೆಪಿ ಕಾಯಕರ್ತರ ಮೇಲೆ ನೀಡಲಾದ ಪ್ರತಿ ದೂರಿನ ಬಗ್ಗೆ ಮಾತನಾಡಿದ ಅವರು ಕಾಂಗ್ರೆಸ್ ನವರ ಪ್ರೇರಣೆಯಿಂದ ಕಾರ್ಯಕರ್ತರ ಮೇಲೆ ಕೇಸ್ ಹಾಕಿರುವ ವಿಚಾರ ನಮ್ಮ ಅರಿವಿಗೆ ಬಂದಿದೆ. ವಿಜಯೋತ್ಸವ ಮುಗಿದ ನಂತರ ಮೂರು ಮಂದಿ ಯುವಕರು ಭಾರತ್ ಮಾತಾ ಕೀ ಜೈ ಎಂದು ಘೋಷಣೆ ಕೂಗಿದ್ದಾರೆ. ಹೊರತಾಗಿ ಪ್ರಚೋದನಾಕಾರಿ ಘೋಷಣೆ ಕೂಗಿಲ್ಲ. ಪ್ರಚೋದನಕಾರಿ ಘೋಷಣೆ ಕೂಗಿದ್ದಾರೆಂದು ಪೊಲೀಸರು ಹೇಳುತ್ತಿದ್ದಾರೆ. ಭಾರತ್ ಮಾತಾ ಕೀ ಜೈ ಎನ್ನುವುದು ಪ್ರಚೋದನಕಾರಿ ಘೋಷಣೆ ಎಂದಾದರೆ ನಾವು ಪಾಕಿಸ್ತಾನದಲ್ಲಿ ಇದ್ದೇವಾ ಅಥವಾ ಭಾರತದಲ್ಲಿ ಇದ್ದೇವಾ ಎಂಬ ಪ್ರಶ್ನೆ ಮೂಡುತ್ತದೆ. ಪಾಕಿಸ್ತಾನ್ ಜಿಂದಾಬಾದ್ ಎಂದವರ ಮೇಲೆ ಪ್ರಕರಣ ದಾಖಲಿಸಲು ಮೀನಾಮೇಷ ಎಣಿಸುವವರು ಭಾರತ್ ಮಾತಕೀ ಜೈ ಎಂದವರಿಗೆ ಹಲ್ಲೆಯಾದಾಗ ಪ್ರೋತ್ಸಾಹ ನೀಡುವ ಸರ್ಕಾರದ ವಿರುದ್ಧ ಕಿಡಿಕಾರಿದರು.

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

10 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

10 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

11 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

14 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

14 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

14 hours ago