Featured

ಭಾರತ ಅನೇಕ ಶ್ರೇಷ್ಠ ನೇತಾರರನ್ನು ಕಂಡಿದೆ , ಆದರೆ ತಾಯಿ ಪ್ರತೀಕವಾಗಿದ್ದ ಸುಷ್ಮಾಜೀ ಅವರಿಗೆ ಸರಿಸಾಟಿಯಾಗಬಲ್ಲವರು ಯಾರೂ ಇಲ್ಲ : ಶಾಸಕ ಶ್ರೀರಾಮುಲು -Vishwanews24

ಬೆಂಗಳೂರು : ಹಿರಿಯ ಬಿಜೆಪಿ ನಾಯಕಿ, ಕೇಂದ್ರದ ಮಾಜಿ ಸಚಿವೆ ಸುಷ್ಮಾ ಸ್ವರಾಜ್ ನಿಧನಕ್ಕೆ ಮೊಳಕಾಲ್ಮೂರು ಶಾಸಕ ಶ್ರೀರಾಮುಲು ಕಂಬನಿ ಮಿಡಿದಿದ್ದಾರೆ.

ಸುಷ್ಮಾ ಸ್ವರಾಜ್ ನಿಧನಕ್ಕೆ ಟ್ವೀಟರ್ ನಲ್ಲಿ ಸಂತಾಪ ಸೂಚಿಸಿರುವ ಶ್ರೀರಾಮುಲು, ಭಾರತ ಅನೇಕ ಶ್ರೇಷ್ಠ ನೇತಾರರನ್ನು ಕಂಡಿದೆ, ಆದರೆ ಮಾತೃಹೃದಯದ, ಮಮತೆಯ ವ್ಯಕ್ತಿರೂಪವಾಗಿದ್ದ, ತಾಯಿ ಪ್ರತೀಕವಾಗಿದ್ದ ಸುಷ್ಮಾಜೀ ಅವರಿಗೆ ಸರಿಸಾಟಿಯಾಗಬಲ್ಲವರು ಯಾರೂ ಇಲ್ಲ. ಇಂದು ಸುಷ್ಮಾಜೀ ಅವರನ್ನು ಕಳೆದುಕೊಂಡು ನಾನು ಮಾತ್ರವಲ್ಲ, ನನ್ನಂಥ ಲಕ್ಷಾಂತರ ಬಿಜೆಪಿ ಕಾರ್ಯಕರ್ತರು ಮಾತೃಶೋಕದಲ್ಲಿದ್ದೇವೆ, ಅನಾಥರಾಗಿದ್ದೇವೆ ಎಂದು ಬರೆದುಕೊಂಡಿದ್ದಾರೆ.

ನಾವು ರಾಜಕಾರಣಿಗಳ ಮಕ್ಕಳಲ್ಲ, ನಾವು ರಾಜಕೀಯ ಪ್ರವೇಶಕ್ಕೆ ಸುಷ್ಮಾ ಸ್ವರಾಜ್ ಅವರೇ ಕಾರಣ, ನಮ್ಮ ಸೇವೆ ಸಮಾಜಕ್ಕೆ ಬಹಳ ಇದೆ ಎಂದು ಅರಿವು ಮೂಡಿಸಿ, ರಾಜಕಾರಣಕ್ಕೆ ನಮ್ಮನ್ನು ತಂದವರು. ಹಾಗಾಗಿ ಸಾಮಾನ್ಯ ಕುಟುಂಬದಲ್ಲಿ ಬೆಳೆದ ನಾವು ಇಂದು ಅವರ ಆಶೀರ್ವಾದದಿಂದ ಈ ಮಟ್ಟಕ್ಕೆ ಬೆಳೆದೆವು. ಅವರ ಪ್ರೀತಿ, ವಾತ್ಸಾಲ್ಯವನ್ನು ಉಸಿರು ಇರುವ ತನಕ ಮರೆಯುವ ಹಾಗಿಲ್ಲ .

ನನ್ನನ್ನು ಸದಾ ಆಶೀರ್ವದಿಸುತ್ತಾ, ಕೈಹಿಡಿದು ನಡೆಸಿದ ತಾಯಿ ಸ್ವರೂಪರು ಇಂದು ನಮ್ಮೊಂದಿಗೆ ಇಲ್ಲ. ದುಃಖವನ್ನು ಹೇಳಲು ಪದಗಳು ಸಿಗುತ್ತಿಲ್ಲ. ಇತಿಹಾಸದಲ್ಲಿ ಮರೆಯಲಾಗದ ಸಾಧನೆ, ವ್ಯಕ್ತಿತ್ವ ಮತ್ತು ನೆನಪುಗಳನ್ನು ಬಿಟ್ಟು ಹೋಗಿರುವ ತಾಯಿ ಸುಷ್ಮಾಜೀಗೆ ನನ್ನ ಕೋಟಿಕೋಟಿ ನಮನಗಳು. ಅಮ್ಮ, ದೇವರು ನಿಮಗೆ ಸದ್ಗತಿಯನ್ನು ಕೊಡುವುದು ಖಂಡಿತ. ಓಂ ಶಾಂತಿ ಎಂದು ಬರೆದುಕೊಂಡಿದ್ದಾರೆ.

Vishwa News 24

Recent Posts

ಕಾಪು : ಭಾರತ್ ಜೋಡೋ ಮತ್ತು ಗ್ಯಾರಂಟಿ ಯೋಜನೆಗಳ ಮಾಹಿತಿ ಕಾರ್ಯಾಗಾರ – vishwanews24

ಕಾಪು : ಭಾರತ್ ಜೋಡೋ ಮತ್ತು ಗ್ಯಾರಂಟಿ ಯೋಜನೆಗಳ ಮಾಹಿತಿ ಕಾರ್ಯಾಗಾರ ಕರ್ನಾಟಕ ಸರ್ಕಾರದ ಯೋಜನೆಗಳಾದ ಭಾರತ್ ಜೋಡೋ ಮತ್ತು…

8 hours ago

ದೇಶ ವಿರೋಧಿ ಚಟುವಟಿಕೆ ಮಾಡಿದಾಗ ಆರ್‌ಎಸ್‌ಎಸ್ ವಿರುದ್ಧ ಮಾತನಾಡಬೇಕಾಗುತ್ತೆ : ಬಿ.ಕೆ. ಹರಿಪ್ರಸಾದ್‌ – vishwanews24

ದೇಶ ವಿರೋಧಿ ಚಟುವಟಿಕೆ ಮಾಡಿದಾಗ ಆರ್‌ಎಸ್‌ಎಸ್ ವಿರುದ್ಧ ಮಾತನಾಡಬೇಕಾಗುತ್ತೆ : ಬಿ.ಕೆ. ಹರಿಪ್ರಸಾದ್‌ ಬೀದರ್‌: ‘ದೇಶ ವಿರೋಧಿ ಚಟುವಟಿಕೆ ಮಾಡಿದಾಗ…

8 hours ago

ಬಿಜೆಪಿಯಿಂದ ಅಧಿವೇಶನಕ್ಕೆ ಅಡ್ಡಿ ಹಿಂದೆ ಹಿಡನ್ ಅಜೆಂಡಾ: ಯು.ಟಿ.ಖಾದರ್ ಆರೋಪ – vishwanews24

ವಿಧಾನಸಭೆ ಅಧಿವೇಶನ ರಾಜಕೀಯ ಮಾಡುವ ಸಭಾಂಗಣ ಆಗಬಾರದು .. ಪರಿಹಾರ ಕಂಡುಕೊಳ್ಳಲು ಇರುವ ವೇದಿಕೆಗೆ ಅಡ್ಡಿ ಪಡಿಸಿರುವ ಬಿಜೆಪಿಯನ್ನು ಜನತೆ…

8 hours ago

ಕುಂದಾಪುರ: ಸಮುದ್ರ ಮಧ್ಯದಲ್ಲಿ ಸಿಲುಕಿಕೊಂಡಿದ್ದ ದೋಣಿ – ನಾಲ್ವರು ಮೀನುಗಾರರ ರಕ್ಷಣೆ – vishwanews24

ಕುಂದಾಪುರ: ಸಮುದ್ರ ಮಧ್ಯದಲ್ಲಿ ಸಿಲುಕಿಕೊಂಡಿದ್ದ ದೋಣಿ - ನಾಲ್ವರು ಮೀನುಗಾರರ ರಕ್ಷಣೆ ಕುಂದಾಪುರ :ಮೀನುಗಾರಿಕಾ ದೋಣಿಯ ಎಂಜಿನ್ ದೋಷದಿಂದ ಸಮುದ್ರದ…

9 hours ago

ಮಂಗಳೂರು: ಆಹಾರ ಸುರಕ್ಷತೆ ತಪಾಸಣೆಗೆ ತಾಲೂಕು ಮಟ್ಟದಲ್ಲಿ ವಾಚ್‌ಟೀಮ್ : ಸಚಿವ ಯು.ಟಿ.ಖಾದರ್ – vishwanews24

ಮಂಗಳೂರು: ಕೃತಕ ಪನ್ನೀರ್, ಫುಡ್ ಕಲರ್‌, ಅಜಿನಮೊಟೊ ವಿರುದ್ಧ ಕ್ರಮ ಆಹಾರ ಸುರಕ್ಷತೆ ತಪಾಸಣೆಗೆ ತಾಲೂಕು ಮಟ್ಟದಲ್ಲಿ ವಾಚ್‌ಟೀಮ್ :…

12 hours ago

ವಂದೇ ಭಾರತ್ ಪ್ರಾಯೋಗಿಕ ಸಂಚಾರ ಪೂರ್ಣ ; ಸುಬ್ರಹ್ಮಣ್ಯ ರೋಡ್ ನಿಂದ ಮಂಗಳೂರಿಗೆ ಯಶಸ್ವಿಯಾಗಿ ತೆರಳಿದ ರೈಲು  – vishwanews24

ವಂದೇ ಭಾರತ್ ಪ್ರಾಯೋಗಿಕ ಸಂಚಾರ ಪೂರ್ಣ ; ಸುಬ್ರಹ್ಮಣ್ಯ ರೋಡ್ ನಿಂದ ಮಂಗಳೂರಿಗೆ ಯಶಸ್ವಿಯಾಗಿ ತೆರಳಿದ ರೈಲು  ಪುತ್ತೂರು: ಹಲವು…

12 hours ago