ಬೆಂಗಳೂರು : ಹಿರಿಯ ಬಿಜೆಪಿ ನಾಯಕಿ, ಕೇಂದ್ರದ ಮಾಜಿ ಸಚಿವೆ ಸುಷ್ಮಾ ಸ್ವರಾಜ್ ನಿಧನಕ್ಕೆ ಮೊಳಕಾಲ್ಮೂರು ಶಾಸಕ ಶ್ರೀರಾಮುಲು ಕಂಬನಿ ಮಿಡಿದಿದ್ದಾರೆ.
ಸುಷ್ಮಾ ಸ್ವರಾಜ್ ನಿಧನಕ್ಕೆ ಟ್ವೀಟರ್ ನಲ್ಲಿ ಸಂತಾಪ ಸೂಚಿಸಿರುವ ಶ್ರೀರಾಮುಲು, ಭಾರತ ಅನೇಕ ಶ್ರೇಷ್ಠ ನೇತಾರರನ್ನು ಕಂಡಿದೆ, ಆದರೆ ಮಾತೃಹೃದಯದ, ಮಮತೆಯ ವ್ಯಕ್ತಿರೂಪವಾಗಿದ್ದ, ತಾಯಿ ಪ್ರತೀಕವಾಗಿದ್ದ ಸುಷ್ಮಾಜೀ ಅವರಿಗೆ ಸರಿಸಾಟಿಯಾಗಬಲ್ಲವರು ಯಾರೂ ಇಲ್ಲ. ಇಂದು ಸುಷ್ಮಾಜೀ ಅವರನ್ನು ಕಳೆದುಕೊಂಡು ನಾನು ಮಾತ್ರವಲ್ಲ, ನನ್ನಂಥ ಲಕ್ಷಾಂತರ ಬಿಜೆಪಿ ಕಾರ್ಯಕರ್ತರು ಮಾತೃಶೋಕದಲ್ಲಿದ್ದೇವೆ, ಅನಾಥರಾಗಿದ್ದೇವೆ ಎಂದು ಬರೆದುಕೊಂಡಿದ್ದಾರೆ.
ನಾವು ರಾಜಕಾರಣಿಗಳ ಮಕ್ಕಳಲ್ಲ, ನಾವು ರಾಜಕೀಯ ಪ್ರವೇಶಕ್ಕೆ ಸುಷ್ಮಾ ಸ್ವರಾಜ್ ಅವರೇ ಕಾರಣ, ನಮ್ಮ ಸೇವೆ ಸಮಾಜಕ್ಕೆ ಬಹಳ ಇದೆ ಎಂದು ಅರಿವು ಮೂಡಿಸಿ, ರಾಜಕಾರಣಕ್ಕೆ ನಮ್ಮನ್ನು ತಂದವರು. ಹಾಗಾಗಿ ಸಾಮಾನ್ಯ ಕುಟುಂಬದಲ್ಲಿ ಬೆಳೆದ ನಾವು ಇಂದು ಅವರ ಆಶೀರ್ವಾದದಿಂದ ಈ ಮಟ್ಟಕ್ಕೆ ಬೆಳೆದೆವು. ಅವರ ಪ್ರೀತಿ, ವಾತ್ಸಾಲ್ಯವನ್ನು ಉಸಿರು ಇರುವ ತನಕ ಮರೆಯುವ ಹಾಗಿಲ್ಲ .
ನನ್ನನ್ನು ಸದಾ ಆಶೀರ್ವದಿಸುತ್ತಾ, ಕೈಹಿಡಿದು ನಡೆಸಿದ ತಾಯಿ ಸ್ವರೂಪರು ಇಂದು ನಮ್ಮೊಂದಿಗೆ ಇಲ್ಲ. ದುಃಖವನ್ನು ಹೇಳಲು ಪದಗಳು ಸಿಗುತ್ತಿಲ್ಲ. ಇತಿಹಾಸದಲ್ಲಿ ಮರೆಯಲಾಗದ ಸಾಧನೆ, ವ್ಯಕ್ತಿತ್ವ ಮತ್ತು ನೆನಪುಗಳನ್ನು ಬಿಟ್ಟು ಹೋಗಿರುವ ತಾಯಿ ಸುಷ್ಮಾಜೀಗೆ ನನ್ನ ಕೋಟಿಕೋಟಿ ನಮನಗಳು. ಅಮ್ಮ, ದೇವರು ನಿಮಗೆ ಸದ್ಗತಿಯನ್ನು ಕೊಡುವುದು ಖಂಡಿತ. ಓಂ ಶಾಂತಿ ಎಂದು ಬರೆದುಕೊಂಡಿದ್ದಾರೆ.
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್ನಲ್ಲಿ ಅಗ್ನಿ ಅವಘಡ : ಶಾಕ್ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…