Featured

ಭಾರತ ಅಮೋಘ ಫಾರ್ಮ್ನಲ್ಲಿದೆ, ಅವರೆದುರು ಅತ್ಯುತ್ತಮ ಪ್ರದರ್ಶನ ನೀಡಬಲ್ಲೆವೆಂಬ ವಿಶ್ವಾಸ ನಮ್ಮದು’ : ಇಂಗ್ಲೆಂಡ್‌ ಕ್ರಿಕೆಟಿಗ ಬೆನ್‌ ಸ್ಟೋಕ್ಸ್‌. -Vishwanews24

ಲಂಡನ್‌: “ಇದು ನಮ್ಮ ವಿಶ್ವಕಪ್‌. ಕಳೆದ 4 ವರ್ಷಗಳಿಂದ ನಮಗೆ ಎಲ್ಲ ಕಡೆಗಳಿಂದಲೂ ಅಮೋಘ ಬೆಂಬಲ. ಪ್ರೋತ್ಸಾಹ ಲಭಿಸುತ್ತಿದೆ. ಯಾವ ಕಾರಣಕ್ಕೂ ನಾವು ಹಿಂದಡಿ ಇಡಲಾರೆವು. ನಾವು ಹೇಗೆ ಎಣಿಸಿದ್ದೇವೋ ಅದೇ ರೀತಿ ಮುಂದೆ ಸಾಗಲಿದ್ದೇವೆ’ ಎಂದಿದ್ದಾರೆ ಇಂಗ್ಲೆಂಡ್‌ ಕ್ರಿಕೆಟಿಗ ಬೆನ್‌ ಸ್ಟೋಕ್ಸ್‌.

ಮಂಗಳವಾರ ಸಾಂಪ್ರದಾಯಿಕ ಎದುರಾಳಿ, ಹಾಲಿ ಚಾಂಪಿಯನ್‌ ಆಸ್ಟ್ರೇಲಿಯಕ್ಕೆ ಶರಣಾದ ಬಳಿಕ ಸ್ಟೋಕ್ಸ್‌ ಈ ಪ್ರತಿಕ್ರಿಯೆ ನೀಡಿದ್ದಾರೆ. 64 ರನ್‌ ಜಯದೊಂದಿಗೆ ಆಸ್ಟ್ರೇಲಿಯ ಸೆಮಿಫೈನಲ್‌ ತಲುಪಿದರೆ, ಇಂಗ್ಲೆಂಡ್‌ ಮೇಲೀಗ ತೀವ್ರ ಒತ್ತಡ ಬಿದ್ದಿದೆ.

ಇದು ಇಂಗ್ಲೆಂಡಿಗೆ ಎದುರಾದ ಸತತ ಎರಡನೇ ಸೋಲು. ಇದಕ್ಕೂ ಹಿಂದಿನ ಪಂದ್ಯದಲ್ಲಿ ಅದು ಸಾಮಾನ್ಯ ತಂಡವೆನಿಸಿದ ಶ್ರೀಲಂಕಾಕ್ಕೆ ಶರಣಾಗಿತ್ತು. ಈ ಎರಡೂ ಪಂದ್ಯಗಳಲ್ಲಿ ಸ್ಟೋಕ್ಸ್‌ 82 ಹಾಗೂ 89 ರನ್‌ ಮಾಡುವ ಮೂಲಕ ದಿಟ್ಟ ಬ್ಯಾಟಿಂಗ್‌ ಪ್ರದರ್ಶನ ನೀಡಿದ್ದರು.

“ನಿಜ, ಸೋಲಿನಿಂದ ನಿರಾಸೆಯಾಗಿದೆ. ಗೆಲುವಿಗಾಗಿ ಎಲ್ಲರೂ ಗರಿಷ್ಠ ಪ್ರಯತ್ನ ಮಾಡಿದ್ದಾರೆ. ನನ್ನ ಬ್ಯಾಟಿನಿಂದ ರನ್‌ ಬರುತ್ತಿದೆ ನಿಜ, ಆದರೆ ಇದು ಗೆಲುವಾಗಿ ಪರಿವರ್ತನೆ ಆಗುವುದು ಮುಖ್ಯ’ ಎಂದು ಸ್ಟೋಕ್ಸ್‌ ಹೇಳಿದರು.

“ನಮ್ಮ ಮುಂದೆ ಇನ್ನೆರಡು ಪಂದ್ಯಗಳಿವೆ. ಸಂಪೂರ್ಣ ಭಿನ್ನ ವಾತಾವರಣದಲ್ಲಿ ನಾವಿದನ್ನು ಆಡಬೇಕಿದೆ. ನಮ್ಮ ಯೋಜನೆಯಂತೆಯೇ ಇದನ್ನು ಆಡಲಿದ್ದೇವೆ. ಭಾರತದೆದುರು ನಾವು ಉತ್ತಮ ತವರಿನ ದಾಖಲೆ ಹೊಂದಿದ್ದೇವೆ. ಆದರೆ ಭಾರತ ಅಮೋಘ ಫಾರ್ಮ್ನಲ್ಲಿದೆ. ಅವರೆದುರು ಅತ್ಯುತ್ತಮ ಪ್ರದರ್ಶನ ನೀಡಬಲ್ಲೆವೆಂಬ ವಿಶ್ವಾಸ ನಮ್ಮದು’ ಎಂದರು ಸ್ಟೋಕ್ಸ್‌.

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

2 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

2 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

2 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

3 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

3 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

4 hours ago