Featured

ಭಾರತ ಅಮೋಘ ಫಾರ್ಮ್ನಲ್ಲಿದೆ, ಅವರೆದುರು ಅತ್ಯುತ್ತಮ ಪ್ರದರ್ಶನ ನೀಡಬಲ್ಲೆವೆಂಬ ವಿಶ್ವಾಸ ನಮ್ಮದು’ : ಇಂಗ್ಲೆಂಡ್‌ ಕ್ರಿಕೆಟಿಗ ಬೆನ್‌ ಸ್ಟೋಕ್ಸ್‌. -Vishwanews24

ಲಂಡನ್‌: “ಇದು ನಮ್ಮ ವಿಶ್ವಕಪ್‌. ಕಳೆದ 4 ವರ್ಷಗಳಿಂದ ನಮಗೆ ಎಲ್ಲ ಕಡೆಗಳಿಂದಲೂ ಅಮೋಘ ಬೆಂಬಲ. ಪ್ರೋತ್ಸಾಹ ಲಭಿಸುತ್ತಿದೆ. ಯಾವ ಕಾರಣಕ್ಕೂ ನಾವು ಹಿಂದಡಿ ಇಡಲಾರೆವು. ನಾವು ಹೇಗೆ ಎಣಿಸಿದ್ದೇವೋ ಅದೇ ರೀತಿ ಮುಂದೆ ಸಾಗಲಿದ್ದೇವೆ’ ಎಂದಿದ್ದಾರೆ ಇಂಗ್ಲೆಂಡ್‌ ಕ್ರಿಕೆಟಿಗ ಬೆನ್‌ ಸ್ಟೋಕ್ಸ್‌.

ಮಂಗಳವಾರ ಸಾಂಪ್ರದಾಯಿಕ ಎದುರಾಳಿ, ಹಾಲಿ ಚಾಂಪಿಯನ್‌ ಆಸ್ಟ್ರೇಲಿಯಕ್ಕೆ ಶರಣಾದ ಬಳಿಕ ಸ್ಟೋಕ್ಸ್‌ ಈ ಪ್ರತಿಕ್ರಿಯೆ ನೀಡಿದ್ದಾರೆ. 64 ರನ್‌ ಜಯದೊಂದಿಗೆ ಆಸ್ಟ್ರೇಲಿಯ ಸೆಮಿಫೈನಲ್‌ ತಲುಪಿದರೆ, ಇಂಗ್ಲೆಂಡ್‌ ಮೇಲೀಗ ತೀವ್ರ ಒತ್ತಡ ಬಿದ್ದಿದೆ.

ಇದು ಇಂಗ್ಲೆಂಡಿಗೆ ಎದುರಾದ ಸತತ ಎರಡನೇ ಸೋಲು. ಇದಕ್ಕೂ ಹಿಂದಿನ ಪಂದ್ಯದಲ್ಲಿ ಅದು ಸಾಮಾನ್ಯ ತಂಡವೆನಿಸಿದ ಶ್ರೀಲಂಕಾಕ್ಕೆ ಶರಣಾಗಿತ್ತು. ಈ ಎರಡೂ ಪಂದ್ಯಗಳಲ್ಲಿ ಸ್ಟೋಕ್ಸ್‌ 82 ಹಾಗೂ 89 ರನ್‌ ಮಾಡುವ ಮೂಲಕ ದಿಟ್ಟ ಬ್ಯಾಟಿಂಗ್‌ ಪ್ರದರ್ಶನ ನೀಡಿದ್ದರು.

“ನಿಜ, ಸೋಲಿನಿಂದ ನಿರಾಸೆಯಾಗಿದೆ. ಗೆಲುವಿಗಾಗಿ ಎಲ್ಲರೂ ಗರಿಷ್ಠ ಪ್ರಯತ್ನ ಮಾಡಿದ್ದಾರೆ. ನನ್ನ ಬ್ಯಾಟಿನಿಂದ ರನ್‌ ಬರುತ್ತಿದೆ ನಿಜ, ಆದರೆ ಇದು ಗೆಲುವಾಗಿ ಪರಿವರ್ತನೆ ಆಗುವುದು ಮುಖ್ಯ’ ಎಂದು ಸ್ಟೋಕ್ಸ್‌ ಹೇಳಿದರು.

“ನಮ್ಮ ಮುಂದೆ ಇನ್ನೆರಡು ಪಂದ್ಯಗಳಿವೆ. ಸಂಪೂರ್ಣ ಭಿನ್ನ ವಾತಾವರಣದಲ್ಲಿ ನಾವಿದನ್ನು ಆಡಬೇಕಿದೆ. ನಮ್ಮ ಯೋಜನೆಯಂತೆಯೇ ಇದನ್ನು ಆಡಲಿದ್ದೇವೆ. ಭಾರತದೆದುರು ನಾವು ಉತ್ತಮ ತವರಿನ ದಾಖಲೆ ಹೊಂದಿದ್ದೇವೆ. ಆದರೆ ಭಾರತ ಅಮೋಘ ಫಾರ್ಮ್ನಲ್ಲಿದೆ. ಅವರೆದುರು ಅತ್ಯುತ್ತಮ ಪ್ರದರ್ಶನ ನೀಡಬಲ್ಲೆವೆಂಬ ವಿಶ್ವಾಸ ನಮ್ಮದು’ ಎಂದರು ಸ್ಟೋಕ್ಸ್‌.

Vishwa News 24

Recent Posts

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ -vishwanews24

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…

17 hours ago

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  -vishwanews24

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  ಉಡುಪಿ : ಮಲಬಾರ್…

1 day ago

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ – vishwanews24

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ  ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…

2 days ago

ಭಸ್ಮಾಸುರ ಆಗಿರುವ ನರೇಂದ್ರ ಮೋದಿ ಅವರು ಪ್ರಜಾಪ್ರಭುತ್ವ ಸಂವಿಧಾನದ ಮೇಲೆ ಕೈ ಇಡದಿದ್ದರೆ ಸಾಕು : ಬಿ.ಕೆ ಹರಿಪ್ರಸಾದ್ ವಾಗ್ದಾಳಿ – vishwanews24

ಪ್ರಧಾನಿ  ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ  .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…

2 days ago

ಮಂಗಳೂರು : ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ – vishwanews24

ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…

2 days ago

ಮೂಳೂರು ಪರಿಸರದಲ್ಲಿ ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಿಸದಂತೆ ಅಧಿಕಾರಿಗಳಿಗೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮನವಿ – vishwanews24

ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…

2 days ago