Featured

ಭಾರತ – ಆಸ್ಟ್ರೇಲಿಯಾ ಏಕದಿನ ಸರಣಿ : ಭಾರತಕ್ಕೆ 375 ರನ್ ಗಳ ಬೃಹತ್ ಗುರಿ -Vishwanews24

ಭಾರತ – ಆಸ್ಟ್ರೇಲಿಯಾ ಏಕದಿನ ಸರಣಿ : ಭಾರತಕ್ಕೆ 375 ರನ್ ಗಳ ಬೃಹತ್ ಗುರಿ -Vishwanews24

ಸಿಡ್ನಿ : ಭಾರತ – ಆಸ್ಟ್ರೇಲಿಯಾ ಏಕದಿನ ಸರಣಿಯ ಮೊದಲಿನ ಪಂದ್ಯ ಇಂದು ಆರಂಭವಾಗಿದ್ದು, ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಫಿಂಚ್ ಪಡೆ ಕೊಹ್ಲಿ ತಂಡಕ್ಕೆ ಗೆ 375 ರ ಬೃಹತ್ ಗುರಿ ನೀಡಿದೆ.

ಕ್ರೀಸಿಗಿಳಿದ ವಾರ್ನರ್ ಹಾಗೂ ನಾಯಕ ಫಿಂಚ್ ಜೊತೆಯಾಟ ಆರಂಭಿಕ ಚೇತರಿಕೆ ನೀಡಿತು. 6 ಬೌಂಡರಿ ಸಹಿತ 69 ರನ್ ಗಳಿಸಿದ ವಾರ್ನರ್ ಶಮಿ ಎಸೆತದಲ್ಲಿ ರಾಹುಲ್ ಕೈಗೆ ಕ್ಯಾಚ್ ಕೊಟ್ಟು ನಿರ್ಗಮಿಸಿದರು. ನಾಯಕ ಆರೋನ್ ಫಿಂಚ್ 9 ಬೌಂಡರಿ 2 ಸಿಕ್ಸರ್ ನೊಂದಿಗೆ 114 ರನ್ ಗಳಿಸಿ ಬುಮ್ರ ಎಸೆತದಲ್ಲಿ ರಾಹುಲ್ ಕೈಗೆ ಕ್ಯಾಚ್ ಕೊಟ್ಟು ಪೆವಿಲಿಯನ್ ಕಡೆ ಹೆಜ್ಜೆ ಹಾಕಿದರು.

ಸ್ಟೀವನ್ ಸ್ಮಿತ್ ಅಮೋಘ 105 ರನ್ ಸಿಡಿಸಿದರೆ , ಮ್ಯಾಕ್ಸ್ ವೆಲ್ 45 ರನ್ ಗಳಿಸಿದರು. ಆಸ್ಟ್ರೇಲಿಯಾ ನಿಗದಿತ 50 ಓವರ್ ನಲ್ಲಿ 6 ವಿಕೆಟ್ ನಷ್ಟಕ್ಕೆ 374 ರನ್ ಪೇರಿಸಿ ಭಾರತಕ್ಕೆ 375 ರ ಸವಾಲನ್ನು ನೀಡಿದೆ.

ಟೀಮ್ ಇಂಡಿಯಾ ಪರ ಮೊಹಮ್ಮದ್ ಶಮಿ 3 ವಿಕೆಟ್ ಪಡೆದರು ,ಬುಮ್ರ, ಯಜುವೇಂದ್ರ ಚಹಲ್, ನವದೀಪ್ ಸೈನಿ ದುಬಾರಿಯಾದರೂ ತಲಾ 1 ವಿಕೆಟ್ ಪಡೆದರು. ಕೀಪರ್ ಕೆ.ಎಲ್.ರಾಹುಲ್ 3 ಕ್ಯಾಚ್ ಪಡೆದರು.

Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

2 days ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

2 days ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

2 days ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

2 days ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

2 days ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

2 days ago