Featured

ಭಾರತ ಎಂದಿಗೂ ಹಿಂದೂ ರಾಷ್ಟ್ರ ಹಿಂದೂಗಳೆಲ್ಲರೂ ಒಗ್ಗಟ್ಟಾಗಬೇಕು ಮತ್ತು ಅವರ ಕೈಯಲ್ಲಿ ಅಧಿಕಾರ ಇರಬೇಕು’ : ಮೋಹನ್ ಭಾಗವತ್ -Vishwanews24

ನಾಗಪುರ/ಮುಂಬೈ: ‘ಹಿಂದೂ ಸಮುದಾಯ ಮತ್ತು ಭಾರತಕ್ಕೆ ಕೆಟ್ಟ ಹೆಸರು ತರುವ ಉದ್ದೇಶದಿಂದ ಕೆಲವು ಪಟ್ಟಭದ್ರ ಹಿತಾಸಕ್ತಿಗಳು ‘ಗುಂಪುಹಲ್ಲೆ ಮತ್ತು ಗುಂಪುಹತ್ಯೆ’ (ಲಿಂಚಿಂಗ್‌) ಎಂಬ ಪದಗಳನ್ನು ಬಳಸುತ್ತಿವೆ. ಹಿಂದೂ ಸಮಾಜಕ್ಕೆ ಕಳಂಕ ತರುವ ಉದ್ದೇಶದಿಂದ ಸಂಚು ರೂಪಿಸಲಾಗುತ್ತಿದೆ’ ಎಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ಆರೋಪಿಸಿದ್ದಾರೆ.

ನಾಗಪುರದಲ್ಲಿನ ಆರ್‌ಎಸ್‌ಎಸ್‌ ಕೇಂದ್ರ ಕಚೇರಿಯಲ್ಲಿ ಮಂಗಳವಾರ ಆಯೋಜಿಸಿದ್ದ ವಿಜಯದಶಮಿ ಕಾರ್ಯಕ್ರಮದಲ್ಲಿ ಅವರು ಈ ಮಾತು ಹೇಳಿದ್ದಾರೆ. ‘ನಮ್ಮ ಸ್ವಯಂಸೇವಕರು ಇಂತಹ ಹಲ್ಲೆ–ಹತ್ಯೆಗಳಲ್ಲಿ ಭಾಗಿಯಾಗಿಲ್ಲ’ ಎಂದೂ ಅವರು ಹೇಳಿದ್ದಾರೆ.

‘ಗುಂಪುಹಲ್ಲೆ–ಹತ್ಯೆಗಳನ್ನು ಯಾವುದೋ ಒಂದು ಧರ್ಮದ ಜನರ ವಿರುದ್ಧ ಮಾತ್ರ ನಡೆಸಲಾಗುತ್ತಿದೆ ಎಂದು ಬಿಂಬಿಸಲಾಗುತ್ತಿದೆ. ಒಂದು ಧಾರ್ಮಿಕ ಅಲ್ಪಸಂಖ್ಯಾತ ಸಮುದಾಯದ ಜನರಲ್ಲಿ ಇದಕ್ಕೆ ಸಂಬಂಧಿಸಿ ಭಯ ಹುಟ್ಟಿಸಲಾಗುತ್ತಿದೆ. ಇದು ಒಂದು ಸಂಚು. ಈ ಮೂಲಕ ಹಿಂದೂಗಳನ್ನು ಗುಂಪುಹತ್ಯೆಯ ಬ್ರ್ಯಾಂಡ್ ಮಾಡಲಾಗುತ್ತಿದೆ’ ಎಂದು ಅವರು ಆರೋಪಿಸಿದ್ದಾರೆ.

‘ಎರಡೂ ಧರ್ಮದವರು ಈ ರೀತಿಯ ಹಲ್ಲೆ ಮತ್ತು ಹತ್ಯೆಗಳನ್ನು ನಡೆಸಿದ್ದಾರೆ. ಆದರೆ, ಒಂದು ಧರ್ಮದ ಜನರನ್ನೇ ಇಂತಹ ದಾಳಿಗಳಿಗೆ ಗುರಿ ಮಾಡಲಾಗುತ್ತಿದೆ ಎಂಬಂತಹ ವರದಿಗಳನ್ನು ಉದ್ದೇಶಪೂರ್ವಕವಾಗಿ ಸೃಷ್ಟಿಸಲಾಗುತ್ತಿದೆ. ಇದು ಸಂಚು ಎಂಬುದನ್ನು ನಾವು ಅರ್ಥಮಾಡಿಕೊಳ್ಳಬೇಕು’ ಎಂದು ಅವರು ಆರ್‌ಎಸ್‌ಎಸ್‌ ಸ್ವಯಂಸೇವಕರಿಗೆ ಕರೆ ನೀಡಿದ್ದಾರೆ.

‘ಗುಂಪುಹತ್ಯೆ–ಹಲ್ಲೆ ಎಂಬುದು ಭಾರತದ ಸಂಸ್ಕೃತಿಯಲ್ಲಿ ಇಲ್ಲ, ನಮ್ಮ ಸಂವಿಧಾನದಲ್ಲೂ ಅದಕ್ಕೆ ಅವಕಾಶವಿಲ್ಲ. ಇದು ಪಶ್ಚಿಮದ ದೇಶಗಳಲ್ಲಿ ಇರುವಂತಹುದು. ಅಲ್ಲಿ ಒಂದು ಧರ್ಮದವರು ಇಂತಹ ಹಲ್ಲೆ–ಹತ್ಯೆ ನಡೆಸುತ್ತಾರೆ. ಭಾರತಕ್ಕೆ ಗುಂಪುಹತ್ಯೆಯ ಹಣೆಪಟ್ಟಿಯನ್ನು ಹಚ್ಚುವ ಕೆಲಸ ಆಗಬಾರದು’ ಎಂದು ಅವರು ಕರೆ ನೀಡಿದ್ದಾರೆ.

‘ಭಾರತ ಮತ್ತು ಭಾರತೀಯತೆಯ ಅಸ್ಮಿತೆಗೆ ಸಂಬಂಧಿಸಿದಂತೆ ನಮ್ಮ ನಿಲುವು ಸ್ಪಷ್ಟವಾಗಿದೆ. ಭಾರತವು ಹಿಂದುಸ್ಥಾನ ಮತ್ತು ಹಿಂದೂ ರಾಷ್ಟ್ರ ಎಂಬ ನಿಲುವಿಗೆ ಆರ್‌ಎಸ್‌ಎಸ್‌ ಬದ್ಧವಾಗಿದೆ’ ಎಂದು ಮೋಹನ್ ಭಾಗವತ್ ಹೇಳಿದ್ದಾರೆ.

‘ಹಿಂದುತ್ವವು ಬಹುತ್ವವನ್ನು ಒಪ್ಪುತ್ತದೆ ಎಂಬ ಮಾತು ಕೇಳಲು ಮಾತ್ರ ಚೆನ್ನಾಗಿರುತ್ತದೆ. ಆದರೆ ಜಗತ್ತು ಶಕ್ತಿವಂತರ ಮಾತನ್ನು ಮಾತ್ರ ಪಾಲಿಸುತ್ತದೆ. ಹಿಂದೂಗಳು ಒಗ್ಗಟ್ಟಾದಾಗ ಮತ್ತು ಹಿಂದೂಗಳ ಕೈಯಲ್ಲಿ ಅಧಿಕಾರವಿದ್ದಾಗ ಮಾತ್ರ ಜಗತ್ತು ಅವರ ಮಾತನ್ನು ಕೇಳುತ್ತದೆ. ಹೀಗಾಗಿ ಹಿಂದೂಗಳೆಲ್ಲರೂ ಒಗ್ಗಟ್ಟಾಗಬೇಕು ಮತ್ತು ಅವರ ಕೈಯಲ್ಲಿ ಅಧಿಕಾರ ಇರಬೇಕು’ ಎಂದು ಅವರು ಹೇಳಿದ್ದಾರೆ.

 

Vishwa News 24

Recent Posts

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ – vishwanews24

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…

7 hours ago

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ – vishwanews24

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…

8 hours ago

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ: ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಉಸ್ತುವಾರಿಯಾಗಿ ಯು.ಟಿ ಖಾದರ್ – vishwanews24

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…

8 hours ago

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ – vishwanews24

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…

8 hours ago

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ – vishwanews24

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…

8 hours ago

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ – vishwanews24

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್‌ಸಿಇಆರ್‌ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…

9 hours ago