Featured

ಭಾರತ ಎಂದಿಗೂ ಹಿಂದೂ ರಾಷ್ಟ್ರ ಹಿಂದೂಗಳೆಲ್ಲರೂ ಒಗ್ಗಟ್ಟಾಗಬೇಕು ಮತ್ತು ಅವರ ಕೈಯಲ್ಲಿ ಅಧಿಕಾರ ಇರಬೇಕು’ : ಮೋಹನ್ ಭಾಗವತ್ -Vishwanews24

ನಾಗಪುರ/ಮುಂಬೈ: ‘ಹಿಂದೂ ಸಮುದಾಯ ಮತ್ತು ಭಾರತಕ್ಕೆ ಕೆಟ್ಟ ಹೆಸರು ತರುವ ಉದ್ದೇಶದಿಂದ ಕೆಲವು ಪಟ್ಟಭದ್ರ ಹಿತಾಸಕ್ತಿಗಳು ‘ಗುಂಪುಹಲ್ಲೆ ಮತ್ತು ಗುಂಪುಹತ್ಯೆ’ (ಲಿಂಚಿಂಗ್‌) ಎಂಬ ಪದಗಳನ್ನು ಬಳಸುತ್ತಿವೆ. ಹಿಂದೂ ಸಮಾಜಕ್ಕೆ ಕಳಂಕ ತರುವ ಉದ್ದೇಶದಿಂದ ಸಂಚು ರೂಪಿಸಲಾಗುತ್ತಿದೆ’ ಎಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ಆರೋಪಿಸಿದ್ದಾರೆ.

ನಾಗಪುರದಲ್ಲಿನ ಆರ್‌ಎಸ್‌ಎಸ್‌ ಕೇಂದ್ರ ಕಚೇರಿಯಲ್ಲಿ ಮಂಗಳವಾರ ಆಯೋಜಿಸಿದ್ದ ವಿಜಯದಶಮಿ ಕಾರ್ಯಕ್ರಮದಲ್ಲಿ ಅವರು ಈ ಮಾತು ಹೇಳಿದ್ದಾರೆ. ‘ನಮ್ಮ ಸ್ವಯಂಸೇವಕರು ಇಂತಹ ಹಲ್ಲೆ–ಹತ್ಯೆಗಳಲ್ಲಿ ಭಾಗಿಯಾಗಿಲ್ಲ’ ಎಂದೂ ಅವರು ಹೇಳಿದ್ದಾರೆ.

‘ಗುಂಪುಹಲ್ಲೆ–ಹತ್ಯೆಗಳನ್ನು ಯಾವುದೋ ಒಂದು ಧರ್ಮದ ಜನರ ವಿರುದ್ಧ ಮಾತ್ರ ನಡೆಸಲಾಗುತ್ತಿದೆ ಎಂದು ಬಿಂಬಿಸಲಾಗುತ್ತಿದೆ. ಒಂದು ಧಾರ್ಮಿಕ ಅಲ್ಪಸಂಖ್ಯಾತ ಸಮುದಾಯದ ಜನರಲ್ಲಿ ಇದಕ್ಕೆ ಸಂಬಂಧಿಸಿ ಭಯ ಹುಟ್ಟಿಸಲಾಗುತ್ತಿದೆ. ಇದು ಒಂದು ಸಂಚು. ಈ ಮೂಲಕ ಹಿಂದೂಗಳನ್ನು ಗುಂಪುಹತ್ಯೆಯ ಬ್ರ್ಯಾಂಡ್ ಮಾಡಲಾಗುತ್ತಿದೆ’ ಎಂದು ಅವರು ಆರೋಪಿಸಿದ್ದಾರೆ.

‘ಎರಡೂ ಧರ್ಮದವರು ಈ ರೀತಿಯ ಹಲ್ಲೆ ಮತ್ತು ಹತ್ಯೆಗಳನ್ನು ನಡೆಸಿದ್ದಾರೆ. ಆದರೆ, ಒಂದು ಧರ್ಮದ ಜನರನ್ನೇ ಇಂತಹ ದಾಳಿಗಳಿಗೆ ಗುರಿ ಮಾಡಲಾಗುತ್ತಿದೆ ಎಂಬಂತಹ ವರದಿಗಳನ್ನು ಉದ್ದೇಶಪೂರ್ವಕವಾಗಿ ಸೃಷ್ಟಿಸಲಾಗುತ್ತಿದೆ. ಇದು ಸಂಚು ಎಂಬುದನ್ನು ನಾವು ಅರ್ಥಮಾಡಿಕೊಳ್ಳಬೇಕು’ ಎಂದು ಅವರು ಆರ್‌ಎಸ್‌ಎಸ್‌ ಸ್ವಯಂಸೇವಕರಿಗೆ ಕರೆ ನೀಡಿದ್ದಾರೆ.

‘ಗುಂಪುಹತ್ಯೆ–ಹಲ್ಲೆ ಎಂಬುದು ಭಾರತದ ಸಂಸ್ಕೃತಿಯಲ್ಲಿ ಇಲ್ಲ, ನಮ್ಮ ಸಂವಿಧಾನದಲ್ಲೂ ಅದಕ್ಕೆ ಅವಕಾಶವಿಲ್ಲ. ಇದು ಪಶ್ಚಿಮದ ದೇಶಗಳಲ್ಲಿ ಇರುವಂತಹುದು. ಅಲ್ಲಿ ಒಂದು ಧರ್ಮದವರು ಇಂತಹ ಹಲ್ಲೆ–ಹತ್ಯೆ ನಡೆಸುತ್ತಾರೆ. ಭಾರತಕ್ಕೆ ಗುಂಪುಹತ್ಯೆಯ ಹಣೆಪಟ್ಟಿಯನ್ನು ಹಚ್ಚುವ ಕೆಲಸ ಆಗಬಾರದು’ ಎಂದು ಅವರು ಕರೆ ನೀಡಿದ್ದಾರೆ.

‘ಭಾರತ ಮತ್ತು ಭಾರತೀಯತೆಯ ಅಸ್ಮಿತೆಗೆ ಸಂಬಂಧಿಸಿದಂತೆ ನಮ್ಮ ನಿಲುವು ಸ್ಪಷ್ಟವಾಗಿದೆ. ಭಾರತವು ಹಿಂದುಸ್ಥಾನ ಮತ್ತು ಹಿಂದೂ ರಾಷ್ಟ್ರ ಎಂಬ ನಿಲುವಿಗೆ ಆರ್‌ಎಸ್‌ಎಸ್‌ ಬದ್ಧವಾಗಿದೆ’ ಎಂದು ಮೋಹನ್ ಭಾಗವತ್ ಹೇಳಿದ್ದಾರೆ.

‘ಹಿಂದುತ್ವವು ಬಹುತ್ವವನ್ನು ಒಪ್ಪುತ್ತದೆ ಎಂಬ ಮಾತು ಕೇಳಲು ಮಾತ್ರ ಚೆನ್ನಾಗಿರುತ್ತದೆ. ಆದರೆ ಜಗತ್ತು ಶಕ್ತಿವಂತರ ಮಾತನ್ನು ಮಾತ್ರ ಪಾಲಿಸುತ್ತದೆ. ಹಿಂದೂಗಳು ಒಗ್ಗಟ್ಟಾದಾಗ ಮತ್ತು ಹಿಂದೂಗಳ ಕೈಯಲ್ಲಿ ಅಧಿಕಾರವಿದ್ದಾಗ ಮಾತ್ರ ಜಗತ್ತು ಅವರ ಮಾತನ್ನು ಕೇಳುತ್ತದೆ. ಹೀಗಾಗಿ ಹಿಂದೂಗಳೆಲ್ಲರೂ ಒಗ್ಗಟ್ಟಾಗಬೇಕು ಮತ್ತು ಅವರ ಕೈಯಲ್ಲಿ ಅಧಿಕಾರ ಇರಬೇಕು’ ಎಂದು ಅವರು ಹೇಳಿದ್ದಾರೆ.

 

Vishwa News 24

Recent Posts

ಶಿರ್ವ ಡೇವಿಡ್‌ ಡಿ’ಸೋಜಾ ಕೊಲೆ ಪ್ರಕರಣಕ್ಕೆ ಶೀಘ್ರವೇ ತಾರ್ಕಿಕ ಅಂತ್ಯ – vishwanews24

ತಾರ್ಕಿಕ ಅಂತ್ಯ ಕಾಣಲಿರುವ ಶಿರ್ವ ಡೇವಿಡ್‌ ಡಿ'ಸೋಜಾ ಕೊಲೆ ಪ್ರಕರಣ ಹೊರ ರಾಜ್ಯದಲ್ಲಿ ಮಧ್ಯವರ್ತಿಯ ಹುಡುಕಾಟ ..  ಪೊಲೀಸರಿಂದ ಆರೋಪಿಗಳ…

10 minutes ago

ಬಿ.ಪಿ.ಎಲ್. ಪಡಿತರ ಚೀಟಿ ಆದಾಯ ಮಿತಿ ರೂ. 3 ಲಕ್ಷಕ್ಕೆ ಹೆಚ್ಚಿಸುವಂತೆ ಮುಖ್ಯಮಂತ್ರಿಗಳಿಗೆ ಶಾಸಕ ಯಶ್ಪಾಲ್ ಸುವರ್ಣ ಮನವಿ – vishwanews24

ಬಿ.ಪಿ.ಎಲ್. ಪಡಿತರ ಚೀಟಿ ಆದಾಯ ಮಿತಿ ರೂ. 3 ಲಕ್ಷಕ್ಕೆ ಹೆಚ್ಚಿಸುವಂತೆ ಮುಖ್ಯಮಂತ್ರಿಗಳಿಗೆ ಶಾಸಕ ಯಶ್ಪಾಲ್ ಸುವರ್ಣ ಮನವಿ ಉಡುಪಿ:…

22 minutes ago

ಪ್ರೇಯಸಿ ಆತ್ಮಹತ್ಯೆ ಸುದ್ದಿ ತಿಳಿದು ನೇಣಿಗೆ ಶರಣಾದ ಪ್ರಿಯಕರ – vishwanews24

ಮೊಬೈಲ್ ಬಳಸಬೇಡ ಎಂದಿದ್ದಕ್ಕೆ ವಿಷ ಸೇವಿಸಿದ್ದ ಯುವತಿ.. ಪ್ರೇಯಸಿ ಆತ್ಮಹತ್ಯೆ ಸುದ್ದಿ ತಿಳಿದು ನೇಣಿಗೆ ಶರಣಾದ ಪ್ರಿಯಕರ ಧಾರವಾಡ: ಪ್ರೇಯಸಿ…

27 minutes ago

ಬಂಟ್ವಾಳ: ಗಾಂಜಾ ಸಹಿತ ಮೂವರ ಬಂಧನ ; 4.90 ಲಕ್ಷ ಮೌಲ್ಯದ ಎಂಡಿಎಂಎ ವಶಕ್ಕೆ – vishwanews24

ಬಂಟ್ವಾಳ: ಗಾಂಜಾ ಸಹಿತ ಮೂವರ ಬಂಧನ ; 4.90 ಲಕ್ಷ ಮೌಲ್ಯದ ಎಂಡಿಎಂಎ ವಶಕ್ಕೆ ಬಂಟ್ವಾಳ : ನಿಷೇಧಿತ ಎಂಡಿಎಂಎ,…

33 minutes ago

ಬೈಕಂಪಾಡಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ – vishwanews24

ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…

18 hours ago

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  – vishwanews24

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…

19 hours ago