Featured

ಭಾರತ ಎಂದಿಗೂ ಹಿಂದೂ ರಾಷ್ಟ್ರ ಹಿಂದೂಗಳೆಲ್ಲರೂ ಒಗ್ಗಟ್ಟಾಗಬೇಕು ಮತ್ತು ಅವರ ಕೈಯಲ್ಲಿ ಅಧಿಕಾರ ಇರಬೇಕು’ : ಮೋಹನ್ ಭಾಗವತ್ -Vishwanews24

ನಾಗಪುರ/ಮುಂಬೈ: ‘ಹಿಂದೂ ಸಮುದಾಯ ಮತ್ತು ಭಾರತಕ್ಕೆ ಕೆಟ್ಟ ಹೆಸರು ತರುವ ಉದ್ದೇಶದಿಂದ ಕೆಲವು ಪಟ್ಟಭದ್ರ ಹಿತಾಸಕ್ತಿಗಳು ‘ಗುಂಪುಹಲ್ಲೆ ಮತ್ತು ಗುಂಪುಹತ್ಯೆ’ (ಲಿಂಚಿಂಗ್‌) ಎಂಬ ಪದಗಳನ್ನು ಬಳಸುತ್ತಿವೆ. ಹಿಂದೂ ಸಮಾಜಕ್ಕೆ ಕಳಂಕ ತರುವ ಉದ್ದೇಶದಿಂದ ಸಂಚು ರೂಪಿಸಲಾಗುತ್ತಿದೆ’ ಎಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ಆರೋಪಿಸಿದ್ದಾರೆ.

ನಾಗಪುರದಲ್ಲಿನ ಆರ್‌ಎಸ್‌ಎಸ್‌ ಕೇಂದ್ರ ಕಚೇರಿಯಲ್ಲಿ ಮಂಗಳವಾರ ಆಯೋಜಿಸಿದ್ದ ವಿಜಯದಶಮಿ ಕಾರ್ಯಕ್ರಮದಲ್ಲಿ ಅವರು ಈ ಮಾತು ಹೇಳಿದ್ದಾರೆ. ‘ನಮ್ಮ ಸ್ವಯಂಸೇವಕರು ಇಂತಹ ಹಲ್ಲೆ–ಹತ್ಯೆಗಳಲ್ಲಿ ಭಾಗಿಯಾಗಿಲ್ಲ’ ಎಂದೂ ಅವರು ಹೇಳಿದ್ದಾರೆ.

‘ಗುಂಪುಹಲ್ಲೆ–ಹತ್ಯೆಗಳನ್ನು ಯಾವುದೋ ಒಂದು ಧರ್ಮದ ಜನರ ವಿರುದ್ಧ ಮಾತ್ರ ನಡೆಸಲಾಗುತ್ತಿದೆ ಎಂದು ಬಿಂಬಿಸಲಾಗುತ್ತಿದೆ. ಒಂದು ಧಾರ್ಮಿಕ ಅಲ್ಪಸಂಖ್ಯಾತ ಸಮುದಾಯದ ಜನರಲ್ಲಿ ಇದಕ್ಕೆ ಸಂಬಂಧಿಸಿ ಭಯ ಹುಟ್ಟಿಸಲಾಗುತ್ತಿದೆ. ಇದು ಒಂದು ಸಂಚು. ಈ ಮೂಲಕ ಹಿಂದೂಗಳನ್ನು ಗುಂಪುಹತ್ಯೆಯ ಬ್ರ್ಯಾಂಡ್ ಮಾಡಲಾಗುತ್ತಿದೆ’ ಎಂದು ಅವರು ಆರೋಪಿಸಿದ್ದಾರೆ.

‘ಎರಡೂ ಧರ್ಮದವರು ಈ ರೀತಿಯ ಹಲ್ಲೆ ಮತ್ತು ಹತ್ಯೆಗಳನ್ನು ನಡೆಸಿದ್ದಾರೆ. ಆದರೆ, ಒಂದು ಧರ್ಮದ ಜನರನ್ನೇ ಇಂತಹ ದಾಳಿಗಳಿಗೆ ಗುರಿ ಮಾಡಲಾಗುತ್ತಿದೆ ಎಂಬಂತಹ ವರದಿಗಳನ್ನು ಉದ್ದೇಶಪೂರ್ವಕವಾಗಿ ಸೃಷ್ಟಿಸಲಾಗುತ್ತಿದೆ. ಇದು ಸಂಚು ಎಂಬುದನ್ನು ನಾವು ಅರ್ಥಮಾಡಿಕೊಳ್ಳಬೇಕು’ ಎಂದು ಅವರು ಆರ್‌ಎಸ್‌ಎಸ್‌ ಸ್ವಯಂಸೇವಕರಿಗೆ ಕರೆ ನೀಡಿದ್ದಾರೆ.

‘ಗುಂಪುಹತ್ಯೆ–ಹಲ್ಲೆ ಎಂಬುದು ಭಾರತದ ಸಂಸ್ಕೃತಿಯಲ್ಲಿ ಇಲ್ಲ, ನಮ್ಮ ಸಂವಿಧಾನದಲ್ಲೂ ಅದಕ್ಕೆ ಅವಕಾಶವಿಲ್ಲ. ಇದು ಪಶ್ಚಿಮದ ದೇಶಗಳಲ್ಲಿ ಇರುವಂತಹುದು. ಅಲ್ಲಿ ಒಂದು ಧರ್ಮದವರು ಇಂತಹ ಹಲ್ಲೆ–ಹತ್ಯೆ ನಡೆಸುತ್ತಾರೆ. ಭಾರತಕ್ಕೆ ಗುಂಪುಹತ್ಯೆಯ ಹಣೆಪಟ್ಟಿಯನ್ನು ಹಚ್ಚುವ ಕೆಲಸ ಆಗಬಾರದು’ ಎಂದು ಅವರು ಕರೆ ನೀಡಿದ್ದಾರೆ.

‘ಭಾರತ ಮತ್ತು ಭಾರತೀಯತೆಯ ಅಸ್ಮಿತೆಗೆ ಸಂಬಂಧಿಸಿದಂತೆ ನಮ್ಮ ನಿಲುವು ಸ್ಪಷ್ಟವಾಗಿದೆ. ಭಾರತವು ಹಿಂದುಸ್ಥಾನ ಮತ್ತು ಹಿಂದೂ ರಾಷ್ಟ್ರ ಎಂಬ ನಿಲುವಿಗೆ ಆರ್‌ಎಸ್‌ಎಸ್‌ ಬದ್ಧವಾಗಿದೆ’ ಎಂದು ಮೋಹನ್ ಭಾಗವತ್ ಹೇಳಿದ್ದಾರೆ.

‘ಹಿಂದುತ್ವವು ಬಹುತ್ವವನ್ನು ಒಪ್ಪುತ್ತದೆ ಎಂಬ ಮಾತು ಕೇಳಲು ಮಾತ್ರ ಚೆನ್ನಾಗಿರುತ್ತದೆ. ಆದರೆ ಜಗತ್ತು ಶಕ್ತಿವಂತರ ಮಾತನ್ನು ಮಾತ್ರ ಪಾಲಿಸುತ್ತದೆ. ಹಿಂದೂಗಳು ಒಗ್ಗಟ್ಟಾದಾಗ ಮತ್ತು ಹಿಂದೂಗಳ ಕೈಯಲ್ಲಿ ಅಧಿಕಾರವಿದ್ದಾಗ ಮಾತ್ರ ಜಗತ್ತು ಅವರ ಮಾತನ್ನು ಕೇಳುತ್ತದೆ. ಹೀಗಾಗಿ ಹಿಂದೂಗಳೆಲ್ಲರೂ ಒಗ್ಗಟ್ಟಾಗಬೇಕು ಮತ್ತು ಅವರ ಕೈಯಲ್ಲಿ ಅಧಿಕಾರ ಇರಬೇಕು’ ಎಂದು ಅವರು ಹೇಳಿದ್ದಾರೆ.

 

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

23 hours ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

2 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

2 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

2 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

2 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

2 days ago