ನವದೆಹಲಿ: ದೇಶಾದ್ಯಂತ ದೀಪಾವಳಿ ಸಂಭ್ರಮ ಮನೆ ಮಾಡಿದ್ದು ಪ್ರಧಾನಿ ಮೋದಿ ಭಾರತೀಯ ಸೇನೆ ಮತ್ತು ಇಂಡೋ-ಟಿಬೆಟಿಯನ್ ಗಡಿ ಪೊಲೀಸ್ ಸಿಬ್ಬಂದಿಯೊಂದಿಗೆ ಬೆಳಕಿನ ಹಬ್ಬ ಆಚರಿಸಿದರು.
ಉತ್ತರಾಖಂಡದ ಹರ್ಸಿಲ್ ಗ್ರಾಮಕ್ಕೆ ಭೇಟಿ ನೀಡಿ ಯೋಧರಿಗೆ ದೀಪಾವಳಿ ಹಬ್ಬದ ಶುಭಾಶಯ ತಿಳಿಸಿ, ಅತಿ ಎತ್ತರದ ಹಿಮಾವೃತ ಪ್ರದೇಶಗಳಲ್ಲಿ ತಮ್ಮ ಕರ್ತವ್ಯವನ್ನು ಭಕ್ತಿಯಿಂದ ಮಾಡುವ ಇವರಿಂದಲೇ ದೇಶದ ಶಕ್ತಿ ಹೆಚ್ಚುತ್ತಿದೆ ಮತ್ತು 125 ಕೋಟಿ ಭಾರತೀಯರ ಕನಸುಗಳ ಭದ್ರವಾಗಿದೆ ಎಂದರು..
ಬೆಳಕಿನ ಹಬ್ಬ ದೀಪಾವಳಿ ಭಯವನ್ನು ಹೋಗಲಾಡಿಸಿ ಒಳ್ಳೆಯ ಬೆಳಕು ನೀಡಲಿ. ಸೈನಿಕರ ಶಿಸ್ತು ಜನತೆಯಲ್ಲಿ ಭಯವನ್ನು ಹೋಗಲಾಡಿಸಿ ಭದ್ರತೆಯನ್ನು ಮೂಡಿಸುವಲ್ಲಿ ನೆರವಾಗಲಿ ಎಂದು ನರೇಂದ್ರ ಮೋದಿ ಹೇಳಿದ್ದಾರೆ.
ದೀಪಾವಳಿ ದೀಪಗಳ ಹಬ್ಬವಾಗಿದ್ದು ನಾವು ಒಳ್ಳೆತನವನ್ನು ಹಂಚಿ ಭಯವನ್ನು ದೂರ ಮಾಡಬೇಕು ಎಂದ ಅವರು, ಯೋಧರು ತಮ್ಮ ಕರ್ತವ್ಯದಿಂದ ಜನರಲ್ಲಿ ಭದ್ರತೆ ನೀಡುವುತ್ತಿರುವುದರ ಜತೆ ನಿರ್ಭಯದಿಂದ ಜೀವನ ಮಾಡುವಂತಾಗಿದೆ ಎಂದರು.
ನಾನು ಗುಜರಾತಿನ ಮುಖ್ಯಮಂತ್ರಿಯಾದಾಗಿನಿಂದಲೂ ದೀಪಾವಳಿ ಹಬ್ಬದ ದಿನ ಯೋಧರನ್ನು ಭೇಟಿ ಮಾಡುತ್ತಿದ್ದೇನೆ ಎಂದು ಕಳೆದ ವರ್ಷದ ದೀಪಾವಳಿ ಸಂಭ್ರಮವನ್ನು ಹಂಚಿಕೊಂಡರು. ಯೋಧರ ಭೇಟಿ ವೇಳೆ ಮೋದಿ ಅವರಿಗೆ ಸಿಹಿ ವಿತರಿಸಿದರು.
ಸೈನಿಕರಿಗೆ ಸಿಹಿ ಹಂಚಿ ಸಂವಾದ ನಡೆಸಿದ ಪ್ರಧಾನಿ, ಮಾಜಿ ಯೋಧರ ಕಲ್ಯಾಣಕ್ಕಾಗಿ ಅನೇಕ ಕ್ರಮಗಳನ್ನು ಕೈಗೊಂಡಿರುವುದಾಗಿ ತಿಳಿಸಿದರು.
ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…
ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…
ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…
ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…
25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ಆಫ್ ವರ್ಲ್ಡ್ ರೆಕಾರ್ಡ್ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…
ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]