ಭಾರತ ತಾಯಿಯ ಶ್ರೇಷ್ಠ ಪುತ್ರರಲ್ಲಿ ಒಬ್ಬರಾದ ಛತ್ರಪತಿ ಶಿವಾಜಿ ಮಹಾರಾಜ್ ಅವರಿಗೆ ಜನ್ಮದಿನದ ಶುಭಾಷಯಗಳು : ಪ್ರಧಾನಿ ಮೋದಿ -Vishwanews24

Featured, ರಾಷ್ಟ್ರ ನ್ಯೂಸ್

ಭಾರತ ತಾಯಿಯ ಶ್ರೇಷ್ಠ ಪುತ್ರರಲ್ಲಿ ಒಬ್ಬರಾದ ಛತ್ರಪತಿ ಶಿವಾಜಿ ಮಹಾರಾಜ್ ಅವರಿಗೆ ಜನ್ಮದಿನದ ಶುಭಾಷಯಗಳು : ಪ್ರಧಾನಿ ಮೋದಿ

ಛತ್ರಪತಿ ಶಿವಾಜಿಯವರು ಓರ್ವ ಪರಾಕ್ರಮಶಾಲಿ ಯೋಧ ಮತ್ತು ಅತ್ಯುತ್ತಮ ಆಡಳಿತಗಾರನಾಗಿ ಗುರುತಿಸಿಕೊಂಡವರು..

ನವದೆಹಲಿ : ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಛತ್ರಪತಿ ಶಿವಾಜಿ ಮಹಾರಾಜರ 390ನೇ ಜನ್ಮ ದಿನಾಚರಣೆ ಅಂಗವಾಗಿ ಬುಧವಾರ ಗೌರವ ಸಲ್ಲಿಸಿ, ಶಿವಾಜಿ ಮಹಾರಾಜರ ಜೀವನವು ಲಕ್ಷಾಂತರ ಜನರಿಗೆ ಪ್ರೇರಣೆಯಾಗಿದೆ ಎಂದು ಹೇಳಿದರು.

 

ಮೋದಿಯವರು ತಮ್ಮ ಟ್ವಿಟರ್‌ನಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆಗೆ ಪುಷ್ಪಾರ್ಚನೆ ಮಾಡುತ್ತಿರುವ ಫೊಟೋವನ್ನು ಪೋಸ್ಟ್‌ ಮಾಡಿದ್ದು, “ಶಿವಾಜಿ ಅವರು ಧೈರ್ಯದ ಸಾಕಾರ ಮೂರ್ತಿ, ಸಹಾನುಭೂತಿ ಮತ್ತು ಉತ್ತಮ ಆಡಳಿತಗಾರ. ಭಾರತ ತಾಯಿಯ ಶ್ರೇಷ್ಠ ಪುತ್ರರಲ್ಲಿ ಒಬ್ಬರಾದ ಛತ್ರಪತಿ ಶಿವಾಜಿ ಮಹಾರಾಜ್ ಅವರಿಗೆ ಜನ್ಮವಾರ್ಷಿಕೋತ್ಸವದಂದು ನಮಿಸುತ್ತೇನೆ. ಅವರ ಜೀವನವು ಅಸಾಧಾರಣವಾಗಿದ್ದು ಅದು ಲಕ್ಷಾಂತರ ಜನರನ್ನು ಪ್ರೇರೇಪಿಸುವುದನ್ನು ಮುಂದುವರಿಸಿದೆ” ಎಂದು ಬರೆದುಕೊಂಡಿದ್ದಾರೆ.

ಹಾಗೆಯೇ ಮತ್ತೊಂದು ಟ್ವೀಟ್‌ನಲ್ಲಿ ಛತ್ರಪತಿ ಶಿವಾಜಿಯವರು ಓರ್ವ ಪರಾಕ್ರಮಶಾಲಿ ಯೋಧ ಮತ್ತು ಅತ್ಯುತ್ತಮ ಆಡಳಿತಗಾರನಾಗಿ ಗುರುತಿಸಿಕೊಂಡವರು. ಅವರು ಬಲಿಷ್ಠವಾದ ನೌಕಾಪಡೆ ನಿರ್ಮಿಸುವುದರಿಂದ ಹಿಡಿದು ಹಲವಾರು ಜನಪರ ನೀತಿಗಳನ್ನು ಜಾರಿಗೆ ತರುವುದರಿಂದ ಹಿಡಿದು ಎಲ್ಲಾ ಕ್ಷೇತ್ರಗಳಲ್ಲಿಯೂ ಅತ್ಯುತ್ತಮವಾಗಿದ್ದರು. ಅನ್ಯಾಯ ಹಾಗೂ ಬೆದರಿಕೆಗಳನ್ನು ವಿರೋಧ ಮಾಡಿದಕ್ಕಾಗಿ ಅವರನ್ನು ಎಂದಿಗೂ ಸ್ಮರಿಸಲಾಗುವುದು ಎಂದಿದ್ದಾರೆ.