ನವದೆಹಲಿ : ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಛತ್ರಪತಿ ಶಿವಾಜಿ ಮಹಾರಾಜರ 390ನೇ ಜನ್ಮ ದಿನಾಚರಣೆ ಅಂಗವಾಗಿ ಬುಧವಾರ ಗೌರವ ಸಲ್ಲಿಸಿ, ಶಿವಾಜಿ ಮಹಾರಾಜರ ಜೀವನವು ಲಕ್ಷಾಂತರ ಜನರಿಗೆ ಪ್ರೇರಣೆಯಾಗಿದೆ ಎಂದು ಹೇಳಿದರು.
ಮೋದಿಯವರು ತಮ್ಮ ಟ್ವಿಟರ್ನಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆಗೆ ಪುಷ್ಪಾರ್ಚನೆ ಮಾಡುತ್ತಿರುವ ಫೊಟೋವನ್ನು ಪೋಸ್ಟ್ ಮಾಡಿದ್ದು, “ಶಿವಾಜಿ ಅವರು ಧೈರ್ಯದ ಸಾಕಾರ ಮೂರ್ತಿ, ಸಹಾನುಭೂತಿ ಮತ್ತು ಉತ್ತಮ ಆಡಳಿತಗಾರ. ಭಾರತ ತಾಯಿಯ ಶ್ರೇಷ್ಠ ಪುತ್ರರಲ್ಲಿ ಒಬ್ಬರಾದ ಛತ್ರಪತಿ ಶಿವಾಜಿ ಮಹಾರಾಜ್ ಅವರಿಗೆ ಜನ್ಮವಾರ್ಷಿಕೋತ್ಸವದಂದು ನಮಿಸುತ್ತೇನೆ. ಅವರ ಜೀವನವು ಅಸಾಧಾರಣವಾಗಿದ್ದು ಅದು ಲಕ್ಷಾಂತರ ಜನರನ್ನು ಪ್ರೇರೇಪಿಸುವುದನ್ನು ಮುಂದುವರಿಸಿದೆ” ಎಂದು ಬರೆದುಕೊಂಡಿದ್ದಾರೆ.
ಹಾಗೆಯೇ ಮತ್ತೊಂದು ಟ್ವೀಟ್ನಲ್ಲಿ ಛತ್ರಪತಿ ಶಿವಾಜಿಯವರು ಓರ್ವ ಪರಾಕ್ರಮಶಾಲಿ ಯೋಧ ಮತ್ತು ಅತ್ಯುತ್ತಮ ಆಡಳಿತಗಾರನಾಗಿ ಗುರುತಿಸಿಕೊಂಡವರು. ಅವರು ಬಲಿಷ್ಠವಾದ ನೌಕಾಪಡೆ ನಿರ್ಮಿಸುವುದರಿಂದ ಹಿಡಿದು ಹಲವಾರು ಜನಪರ ನೀತಿಗಳನ್ನು ಜಾರಿಗೆ ತರುವುದರಿಂದ ಹಿಡಿದು ಎಲ್ಲಾ ಕ್ಷೇತ್ರಗಳಲ್ಲಿಯೂ ಅತ್ಯುತ್ತಮವಾಗಿದ್ದರು. ಅನ್ಯಾಯ ಹಾಗೂ ಬೆದರಿಕೆಗಳನ್ನು ವಿರೋಧ ಮಾಡಿದಕ್ಕಾಗಿ ಅವರನ್ನು ಎಂದಿಗೂ ಸ್ಮರಿಸಲಾಗುವುದು ಎಂದಿದ್ದಾರೆ.
ಮೈಸೂರು: ಕಾಲೇಜು ಕ್ಯಾಂಪಸ್ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…