ನವದೆಹಲಿ : ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಛತ್ರಪತಿ ಶಿವಾಜಿ ಮಹಾರಾಜರ 390ನೇ ಜನ್ಮ ದಿನಾಚರಣೆ ಅಂಗವಾಗಿ ಬುಧವಾರ ಗೌರವ ಸಲ್ಲಿಸಿ, ಶಿವಾಜಿ ಮಹಾರಾಜರ ಜೀವನವು ಲಕ್ಷಾಂತರ ಜನರಿಗೆ ಪ್ರೇರಣೆಯಾಗಿದೆ ಎಂದು ಹೇಳಿದರು.
ಮೋದಿಯವರು ತಮ್ಮ ಟ್ವಿಟರ್ನಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆಗೆ ಪುಷ್ಪಾರ್ಚನೆ ಮಾಡುತ್ತಿರುವ ಫೊಟೋವನ್ನು ಪೋಸ್ಟ್ ಮಾಡಿದ್ದು, “ಶಿವಾಜಿ ಅವರು ಧೈರ್ಯದ ಸಾಕಾರ ಮೂರ್ತಿ, ಸಹಾನುಭೂತಿ ಮತ್ತು ಉತ್ತಮ ಆಡಳಿತಗಾರ. ಭಾರತ ತಾಯಿಯ ಶ್ರೇಷ್ಠ ಪುತ್ರರಲ್ಲಿ ಒಬ್ಬರಾದ ಛತ್ರಪತಿ ಶಿವಾಜಿ ಮಹಾರಾಜ್ ಅವರಿಗೆ ಜನ್ಮವಾರ್ಷಿಕೋತ್ಸವದಂದು ನಮಿಸುತ್ತೇನೆ. ಅವರ ಜೀವನವು ಅಸಾಧಾರಣವಾಗಿದ್ದು ಅದು ಲಕ್ಷಾಂತರ ಜನರನ್ನು ಪ್ರೇರೇಪಿಸುವುದನ್ನು ಮುಂದುವರಿಸಿದೆ” ಎಂದು ಬರೆದುಕೊಂಡಿದ್ದಾರೆ.
ಹಾಗೆಯೇ ಮತ್ತೊಂದು ಟ್ವೀಟ್ನಲ್ಲಿ ಛತ್ರಪತಿ ಶಿವಾಜಿಯವರು ಓರ್ವ ಪರಾಕ್ರಮಶಾಲಿ ಯೋಧ ಮತ್ತು ಅತ್ಯುತ್ತಮ ಆಡಳಿತಗಾರನಾಗಿ ಗುರುತಿಸಿಕೊಂಡವರು. ಅವರು ಬಲಿಷ್ಠವಾದ ನೌಕಾಪಡೆ ನಿರ್ಮಿಸುವುದರಿಂದ ಹಿಡಿದು ಹಲವಾರು ಜನಪರ ನೀತಿಗಳನ್ನು ಜಾರಿಗೆ ತರುವುದರಿಂದ ಹಿಡಿದು ಎಲ್ಲಾ ಕ್ಷೇತ್ರಗಳಲ್ಲಿಯೂ ಅತ್ಯುತ್ತಮವಾಗಿದ್ದರು. ಅನ್ಯಾಯ ಹಾಗೂ ಬೆದರಿಕೆಗಳನ್ನು ವಿರೋಧ ಮಾಡಿದಕ್ಕಾಗಿ ಅವರನ್ನು ಎಂದಿಗೂ ಸ್ಮರಿಸಲಾಗುವುದು ಎಂದಿದ್ದಾರೆ.
ಚಿತ್ರದುರ್ಗ: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಖಾಸಗಿ ಬಸ್ ; ಮೂವರು ದುರ್ಮರಣ 15ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ…
ಕಡಬ: ದ್ವಿಚಕ್ರ ವಾಹನದ ಮೇಲೆ ಬಿದ್ದ ಮರ ; ಹಿಂಬದಿ ಸವಾರನಿಗೆ ಗಂಭೀರ ಗಾಯ ಕಡಬ : ಗುಂಡ್ಯ-ಸುಳ್ಯ ರಾಜ್ಯ…
ಉಡುಪಿ: ಡೇವಿಡ್ ಡಿಸೋಜಾ ಕೊಲೆ ಪ್ರಕರಣ: ಉತ್ತರಾಖಂಡದಲ್ಲಿ ಮತ್ತೊಬ್ಬ ಆರೋಪಿ ಬಂಧನ ಉಡುಪಿ : ಕಾಪು ಜಿಲ್ಲೆಯ ಮುದರಂಗಡಿಯ ಸೇಂಟ್…
ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…
ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…
ಸಕಲೇಶಪುರ–ಸುಬ್ರಹ್ಮಣ್ಯ ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…