ನವದೆಹಲಿ: ಪುಲ್ವಾಮಾ ದಾಳಿ ನಂತರದಲ್ಲಿ ಭಾರತ ಹಾಗೂ ಪಾಕಿಸ್ತಾನ ನಡುವಿನ ಸಂಬಂಧ ಮತ್ತಷ್ಟು ಹದಗೆಟ್ಟಿದೆ. ಪಾಕಿಸ್ತಾನ ಸಲಹುತ್ತಿರುವ ಉಗ್ರರ ವಿರುದ್ಧ ಮತ್ತೊಂದು ಸರ್ಜಿಕಲ್ ಸ್ಟ್ರೈಕ್ ನಡೆಸಬೇಕು ಎನ್ನುವ ಒತ್ತಾಯ ಕೇಳಿ ಬಂದಿದೆ. ಈ ಬೆಳವಣಿಗೆ ನಂತರದಲ್ಲಿ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಭಾರತಕ್ಕೆ ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ. ಭಾರತ ದಾಳಿ ನಡೆಸಿದರೆ ಅದಕ್ಕೆ ನಾವು ಪ್ರತ್ಯುತ್ತರ ನೀಡುತ್ತೇವೆ ಎಂದಿದ್ದಾರೆ.
ಪುಲ್ವಾಮಾ ದಾಳಿ ನಂತರ ಇದೇ ಮೊದಲ ಬಾರಿಗೆ ಮೌನ ಮುರಿದಿರುವ ಇಮ್ರಾನ್ ಖಾನ್, “ಯುದ್ಧವನ್ನು ಆರಂಭಿಸುವುದು ತುಂಬಾ ಸುಲಭ. ಆದರೆ, ಈ ಯುದ್ಧ ಹೇಗೆ ಅಂತ್ಯಗೊಳ್ಳುತ್ತದೆ ಎಂಬುದನ್ನು ದೇವರು ಮಾತ್ರ ಅರಿಯಲು ಸಾಧ್ಯ. ಸಮಸ್ಯೆಗಳನ್ನು ಬಗೆಹರಿಸಲು ಅಹಿಂಸೆ ಮಾರ್ಗವಲ್ಲ. ಮಾತುಕತೆ ಮೂಲಕ ಎಲ್ಲದಕ್ಕೂ ನಾವು ಪರಿಹಾರ ಕಂಡುಕೊಳ್ಳಬಹುದು,” ಎಂದಿದ್ದಾರೆ.
ಪುಲ್ವಾಮಾ ದಾಳಿಯ ಹಿಂದೆ ಪಾಕ್ ಕೈವಾಡವಿದೆ ಎಂದು ಭಾರತ ಆರೋಪಿಸಿದೆ. ಆದರೆ, ಈ ಆರೋಪವನ್ನು ಇಮ್ರಾನ್ ಖಾನ್ ತಿರಸ್ಕರಿಸಿದ್ದಾರೆ. “ಭಾರತ ಯಾವುದೇ ಸಾಕ್ಷ್ಯವಿಲ್ಲದೆ ಪಾಕಿಸ್ತಾನದ ವಿರುದ್ಧ ಸುಖಾಸುಮ್ಮನೆ ಆರೋಪ ಮಾಡುತ್ತಿದೆ. ಶಾಂತಿ ಕಾಪಾಡಲು ಲಕ್ಷಾಂತರ ಮಂದಿ ನಮ್ಮವರು ಪ್ರಾಣ ಬಿಟ್ಟಿದ್ದಾರೆ. ಹೀಗಿರುವಾಗ ನಾವೇಕೆ ಈ ರೀತಿ ದಾಳಿಗಳಿಗೆ ಕುಮ್ಮಕ್ಕು ನೀಡುತ್ತೇವೆ? ಪುಲ್ವಾಮಾ ದಾಳಿಗೆ ಸಂಬಂಧಿಸಿದಂತೆ ನಡೆಯುವ ತನಿಖೆಗೆ ಪಾಕಿಸ್ತಾನ ಸಂಪೂರ್ಣ ಬೆಂಬಲ ನೀಡಲಿದೆ,” ಎಂದು ಅವರು ಆಶ್ವಾಸನೆ ನೀಡಿದ್ದಾರೆ.
ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…
ಉಡುಪಿ : ಮಲಬಾರ್ ಗೋಲ್ಡ್ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ ಉಡುಪಿ : ಮಲಬಾರ್…
ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…
ಪ್ರಧಾನಿ ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…
ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…
ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…