Featured

ಭಾರತ ದಾಳಿ ನಡೆಸಿದರೆ ಅದಕ್ಕೆ ನಾವು ಪ್ರತ್ಯುತ್ತರ ನೀಡುತ್ತೇವೆ : ಪಾಕ್ ಪ್ರಧಾನಿ ಇಮ್ರಾನ್​ ಖಾನ್ – Vishwanews24

ನವದೆಹಲಿ: ಪುಲ್ವಾಮಾ ದಾಳಿ ನಂತರದಲ್ಲಿ ಭಾರತ ಹಾಗೂ ಪಾಕಿಸ್ತಾನ ನಡುವಿನ ಸಂಬಂಧ ಮತ್ತಷ್ಟು ಹದಗೆಟ್ಟಿದೆ. ಪಾಕಿಸ್ತಾನ ಸಲಹುತ್ತಿರುವ ಉಗ್ರರ ವಿರುದ್ಧ ಮತ್ತೊಂದು ಸರ್ಜಿಕಲ್​ ಸ್ಟ್ರೈಕ್​ ನಡೆಸಬೇಕು ಎನ್ನುವ ಒತ್ತಾಯ ಕೇಳಿ ಬಂದಿದೆ. ಈ ಬೆಳವಣಿಗೆ ನಂತರದಲ್ಲಿ ಪಾಕಿಸ್ತಾನ ಪ್ರಧಾನಿ ಇಮ್ರಾನ್​ ಖಾನ್​ ಭಾರತಕ್ಕೆ ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ. ಭಾರತ ದಾಳಿ ನಡೆಸಿದರೆ ಅದಕ್ಕೆ ನಾವು ಪ್ರತ್ಯುತ್ತರ ನೀಡುತ್ತೇವೆ ಎಂದಿದ್ದಾರೆ.

ಪುಲ್ವಾಮಾ ದಾಳಿ ನಂತರ ಇದೇ ಮೊದಲ ಬಾರಿಗೆ ಮೌನ ಮುರಿದಿರುವ ಇಮ್ರಾನ್​ ಖಾನ್​, “ಯುದ್ಧವನ್ನು ಆರಂಭಿಸುವುದು ತುಂಬಾ ಸುಲಭ. ಆದರೆ, ಈ ಯುದ್ಧ ಹೇಗೆ ಅಂತ್ಯಗೊಳ್ಳುತ್ತದೆ ಎಂಬುದನ್ನು ದೇವರು ಮಾತ್ರ ಅರಿಯಲು ಸಾಧ್ಯ. ಸಮಸ್ಯೆಗಳನ್ನು ಬಗೆಹರಿಸಲು ಅಹಿಂಸೆ ಮಾರ್ಗವಲ್ಲ. ಮಾತುಕತೆ ಮೂಲಕ ಎಲ್ಲದಕ್ಕೂ ನಾವು ಪರಿಹಾರ ಕಂಡುಕೊಳ್ಳಬಹುದು,” ಎಂದಿದ್ದಾರೆ.

ಪುಲ್ವಾಮಾ ದಾಳಿಯ ಹಿಂದೆ ಪಾಕ್​ ಕೈವಾಡವಿದೆ ಎಂದು ಭಾರತ ಆರೋಪಿಸಿದೆ. ಆದರೆ, ಈ ಆರೋಪವನ್ನು ಇಮ್ರಾನ್​ ಖಾನ್​ ತಿರಸ್ಕರಿಸಿದ್ದಾರೆ. “ಭಾರತ ಯಾವುದೇ ಸಾಕ್ಷ್ಯವಿಲ್ಲದೆ ಪಾಕಿಸ್ತಾನದ ವಿರುದ್ಧ ಸುಖಾಸುಮ್ಮನೆ ಆರೋಪ ಮಾಡುತ್ತಿದೆ. ಶಾಂತಿ ಕಾಪಾಡಲು ಲಕ್ಷಾಂತರ ಮಂದಿ ನಮ್ಮವರು ಪ್ರಾಣ ಬಿಟ್ಟಿದ್ದಾರೆ. ಹೀಗಿರುವಾಗ ನಾವೇಕೆ ಈ ರೀತಿ ದಾಳಿಗಳಿಗೆ ಕುಮ್ಮಕ್ಕು ನೀಡುತ್ತೇವೆ? ಪುಲ್ವಾಮಾ ದಾಳಿಗೆ ಸಂಬಂಧಿಸಿದಂತೆ ನಡೆಯುವ ತನಿಖೆಗೆ ಪಾಕಿಸ್ತಾನ ಸಂಪೂರ್ಣ ಬೆಂಬಲ ನೀಡಲಿದೆ,” ಎಂದು ಅವರು ಆಶ್ವಾಸನೆ ನೀಡಿದ್ದಾರೆ.

Vishwa News 24

Recent Posts

ಕಾಪು : ಭಾರತ್ ಜೋಡೋ ಮತ್ತು ಗ್ಯಾರಂಟಿ ಯೋಜನೆಗಳ ಮಾಹಿತಿ ಕಾರ್ಯಾಗಾರ – vishwanews24

ಕಾಪು : ಭಾರತ್ ಜೋಡೋ ಮತ್ತು ಗ್ಯಾರಂಟಿ ಯೋಜನೆಗಳ ಮಾಹಿತಿ ಕಾರ್ಯಾಗಾರ ಕರ್ನಾಟಕ ಸರ್ಕಾರದ ಯೋಜನೆಗಳಾದ ಭಾರತ್ ಜೋಡೋ ಮತ್ತು…

1 day ago

ದೇಶ ವಿರೋಧಿ ಚಟುವಟಿಕೆ ಮಾಡಿದಾಗ ಆರ್‌ಎಸ್‌ಎಸ್ ವಿರುದ್ಧ ಮಾತನಾಡಬೇಕಾಗುತ್ತೆ : ಬಿ.ಕೆ. ಹರಿಪ್ರಸಾದ್‌ – vishwanews24

ದೇಶ ವಿರೋಧಿ ಚಟುವಟಿಕೆ ಮಾಡಿದಾಗ ಆರ್‌ಎಸ್‌ಎಸ್ ವಿರುದ್ಧ ಮಾತನಾಡಬೇಕಾಗುತ್ತೆ : ಬಿ.ಕೆ. ಹರಿಪ್ರಸಾದ್‌ ಬೀದರ್‌: ‘ದೇಶ ವಿರೋಧಿ ಚಟುವಟಿಕೆ ಮಾಡಿದಾಗ…

1 day ago

ಬಿಜೆಪಿಯಿಂದ ಅಧಿವೇಶನಕ್ಕೆ ಅಡ್ಡಿ ಹಿಂದೆ ಹಿಡನ್ ಅಜೆಂಡಾ: ಯು.ಟಿ.ಖಾದರ್ ಆರೋಪ – vishwanews24

ವಿಧಾನಸಭೆ ಅಧಿವೇಶನ ರಾಜಕೀಯ ಮಾಡುವ ಸಭಾಂಗಣ ಆಗಬಾರದು .. ಪರಿಹಾರ ಕಂಡುಕೊಳ್ಳಲು ಇರುವ ವೇದಿಕೆಗೆ ಅಡ್ಡಿ ಪಡಿಸಿರುವ ಬಿಜೆಪಿಯನ್ನು ಜನತೆ…

1 day ago

ಕುಂದಾಪುರ: ಸಮುದ್ರ ಮಧ್ಯದಲ್ಲಿ ಸಿಲುಕಿಕೊಂಡಿದ್ದ ದೋಣಿ – ನಾಲ್ವರು ಮೀನುಗಾರರ ರಕ್ಷಣೆ – vishwanews24

ಕುಂದಾಪುರ: ಸಮುದ್ರ ಮಧ್ಯದಲ್ಲಿ ಸಿಲುಕಿಕೊಂಡಿದ್ದ ದೋಣಿ - ನಾಲ್ವರು ಮೀನುಗಾರರ ರಕ್ಷಣೆ ಕುಂದಾಪುರ :ಮೀನುಗಾರಿಕಾ ದೋಣಿಯ ಎಂಜಿನ್ ದೋಷದಿಂದ ಸಮುದ್ರದ…

1 day ago

ಮಂಗಳೂರು: ಆಹಾರ ಸುರಕ್ಷತೆ ತಪಾಸಣೆಗೆ ತಾಲೂಕು ಮಟ್ಟದಲ್ಲಿ ವಾಚ್‌ಟೀಮ್ : ಸಚಿವ ಯು.ಟಿ.ಖಾದರ್ – vishwanews24

ಮಂಗಳೂರು: ಕೃತಕ ಪನ್ನೀರ್, ಫುಡ್ ಕಲರ್‌, ಅಜಿನಮೊಟೊ ವಿರುದ್ಧ ಕ್ರಮ ಆಹಾರ ಸುರಕ್ಷತೆ ತಪಾಸಣೆಗೆ ತಾಲೂಕು ಮಟ್ಟದಲ್ಲಿ ವಾಚ್‌ಟೀಮ್ :…

1 day ago

ವಂದೇ ಭಾರತ್ ಪ್ರಾಯೋಗಿಕ ಸಂಚಾರ ಪೂರ್ಣ ; ಸುಬ್ರಹ್ಮಣ್ಯ ರೋಡ್ ನಿಂದ ಮಂಗಳೂರಿಗೆ ಯಶಸ್ವಿಯಾಗಿ ತೆರಳಿದ ರೈಲು  – vishwanews24

ವಂದೇ ಭಾರತ್ ಪ್ರಾಯೋಗಿಕ ಸಂಚಾರ ಪೂರ್ಣ ; ಸುಬ್ರಹ್ಮಣ್ಯ ರೋಡ್ ನಿಂದ ಮಂಗಳೂರಿಗೆ ಯಶಸ್ವಿಯಾಗಿ ತೆರಳಿದ ರೈಲು  ಪುತ್ತೂರು: ಹಲವು…

1 day ago