Featured

ಭಾರತ ದಾಳಿ ನಡೆಸಿದರೆ ಅದಕ್ಕೆ ನಾವು ಪ್ರತ್ಯುತ್ತರ ನೀಡುತ್ತೇವೆ : ಪಾಕ್ ಪ್ರಧಾನಿ ಇಮ್ರಾನ್​ ಖಾನ್ – Vishwanews24

ನವದೆಹಲಿ: ಪುಲ್ವಾಮಾ ದಾಳಿ ನಂತರದಲ್ಲಿ ಭಾರತ ಹಾಗೂ ಪಾಕಿಸ್ತಾನ ನಡುವಿನ ಸಂಬಂಧ ಮತ್ತಷ್ಟು ಹದಗೆಟ್ಟಿದೆ. ಪಾಕಿಸ್ತಾನ ಸಲಹುತ್ತಿರುವ ಉಗ್ರರ ವಿರುದ್ಧ ಮತ್ತೊಂದು ಸರ್ಜಿಕಲ್​ ಸ್ಟ್ರೈಕ್​ ನಡೆಸಬೇಕು ಎನ್ನುವ ಒತ್ತಾಯ ಕೇಳಿ ಬಂದಿದೆ. ಈ ಬೆಳವಣಿಗೆ ನಂತರದಲ್ಲಿ ಪಾಕಿಸ್ತಾನ ಪ್ರಧಾನಿ ಇಮ್ರಾನ್​ ಖಾನ್​ ಭಾರತಕ್ಕೆ ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ. ಭಾರತ ದಾಳಿ ನಡೆಸಿದರೆ ಅದಕ್ಕೆ ನಾವು ಪ್ರತ್ಯುತ್ತರ ನೀಡುತ್ತೇವೆ ಎಂದಿದ್ದಾರೆ.

ಪುಲ್ವಾಮಾ ದಾಳಿ ನಂತರ ಇದೇ ಮೊದಲ ಬಾರಿಗೆ ಮೌನ ಮುರಿದಿರುವ ಇಮ್ರಾನ್​ ಖಾನ್​, “ಯುದ್ಧವನ್ನು ಆರಂಭಿಸುವುದು ತುಂಬಾ ಸುಲಭ. ಆದರೆ, ಈ ಯುದ್ಧ ಹೇಗೆ ಅಂತ್ಯಗೊಳ್ಳುತ್ತದೆ ಎಂಬುದನ್ನು ದೇವರು ಮಾತ್ರ ಅರಿಯಲು ಸಾಧ್ಯ. ಸಮಸ್ಯೆಗಳನ್ನು ಬಗೆಹರಿಸಲು ಅಹಿಂಸೆ ಮಾರ್ಗವಲ್ಲ. ಮಾತುಕತೆ ಮೂಲಕ ಎಲ್ಲದಕ್ಕೂ ನಾವು ಪರಿಹಾರ ಕಂಡುಕೊಳ್ಳಬಹುದು,” ಎಂದಿದ್ದಾರೆ.

ಪುಲ್ವಾಮಾ ದಾಳಿಯ ಹಿಂದೆ ಪಾಕ್​ ಕೈವಾಡವಿದೆ ಎಂದು ಭಾರತ ಆರೋಪಿಸಿದೆ. ಆದರೆ, ಈ ಆರೋಪವನ್ನು ಇಮ್ರಾನ್​ ಖಾನ್​ ತಿರಸ್ಕರಿಸಿದ್ದಾರೆ. “ಭಾರತ ಯಾವುದೇ ಸಾಕ್ಷ್ಯವಿಲ್ಲದೆ ಪಾಕಿಸ್ತಾನದ ವಿರುದ್ಧ ಸುಖಾಸುಮ್ಮನೆ ಆರೋಪ ಮಾಡುತ್ತಿದೆ. ಶಾಂತಿ ಕಾಪಾಡಲು ಲಕ್ಷಾಂತರ ಮಂದಿ ನಮ್ಮವರು ಪ್ರಾಣ ಬಿಟ್ಟಿದ್ದಾರೆ. ಹೀಗಿರುವಾಗ ನಾವೇಕೆ ಈ ರೀತಿ ದಾಳಿಗಳಿಗೆ ಕುಮ್ಮಕ್ಕು ನೀಡುತ್ತೇವೆ? ಪುಲ್ವಾಮಾ ದಾಳಿಗೆ ಸಂಬಂಧಿಸಿದಂತೆ ನಡೆಯುವ ತನಿಖೆಗೆ ಪಾಕಿಸ್ತಾನ ಸಂಪೂರ್ಣ ಬೆಂಬಲ ನೀಡಲಿದೆ,” ಎಂದು ಅವರು ಆಶ್ವಾಸನೆ ನೀಡಿದ್ದಾರೆ.

Vishwa News 24

Recent Posts

ರೀಲ್ಸ್ ಮಾಡಲು ಹೋಗಿ ಸಮುದ್ರಪಾಲಾದ  ಐಟಿ ಉದ್ಯೋಗಿ – vishwanews24

ರೀಲ್ಸ್ ಮಾಡಲು ಹೋಗಿ ಸಮುದ್ರಪಾಲಾದ  ಐಟಿ ಉದ್ಯೋಗಿ ಕಾರವಾರ: ರೀಲ್ಸ್ ಮಾಡಲು ಹೋಗಿ ಐಟಿ ಉದ್ಯೋಗಿಯೊಬ್ಬ  ಸಮುದ್ರಪಾಲಾದ ಘಟನೆ ಉತ್ತರ…

4 hours ago

ತಮಿಳುನಾಡು ಸಿಎಂ ವಿಜಯ್ ವಿಚ್ಛೇದನ ಪ್ರಕರಣ: ಆಗಸ್ಟ್ 7ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್ – vishwanews24

ತಮಿಳುನಾಡು ಸಿಎಂ ವಿಜಯ್ ವಿಚ್ಛೇದನ ಪ್ರಕರಣ: ಆಗಸ್ಟ್ 7ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್ ಚೆನ್ನೈ :ತಮಿಳುನಾಡು ಮುಖ್ಯಮಂತ್ರಿ, ನಟ ದಳಪತಿ…

4 hours ago

ಕೊಡವೂರು: ಶಂಕರನಾರಾಯಣ ದೇವಸ್ಥಾನದ ತಾತ್ಕಾಲಿಕ ಮೇಲುಸ್ತುವಾರಿ ವೆಂಕಟಕೃಷ್ಣ ನಾಪತ್ತೆ – vishwanews24

ಕೊಡವೂರು: ಶಂಕರನಾರಾಯಣ ದೇವಸ್ಥಾನದ ತಾತ್ಕಾಲಿಕ ಮೇಲುಸ್ತುವಾರಿ ವೆಂಕಟಕೃಷ್ಣ ನಾಪತ್ತೆ ಮಲ್ಪೆ :ಉಡುಪಿ ತಾಲೂಕಿನ ಕೊಡವೂರು ಗ್ರಾಮದ ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ…

5 hours ago

ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಅರ್ಜಿ ಸಲ್ಲಿಕೆ ಕಡ್ಡಾಯ – vishwanews24

ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಅರ್ಜಿ ಸಲ್ಲಿಕೆ ಕಡ್ಡಾಯ ಬೆಂಗಳೂರು: ಗೃಹಲಕ್ಷ್ಮಿ, ಗೃಹಜ್ಯೋತಿ ಯೊಜನೆಗಳಲ್ಲಿ ನಕಲಿ…

5 hours ago

ಕಾಸರಗೋಡು: ಬೇಕಲ ಕಡಲತೀರದಲ್ಲಿ ಸಮುದ್ರಪಾಲಾದ ಕೊಟ್ಟಾಯಂನ ಇಬ್ಬರು ವಿದ್ಯಾರ್ಥಿಗಳು; ಮತ್ತಿಬ್ಬರ ರಕ್ಷಣೆ – vishwanews24

ಕಾಸರಗೋಡು: ಬೇಕಲ ಕಡಲತೀರದಲ್ಲಿ ಸಮುದ್ರಪಾಲಾದ ಕೊಟ್ಟಾಯಂನ ಇಬ್ಬರು ವಿದ್ಯಾರ್ಥಿಗಳು; ಮತ್ತಿಬ್ಬರ ರಕ್ಷಣೆ ಕಾಸರಗೋಡು: ಬೇಕಲ ಕೋಟೆಯ ಸಮೀಪವಿರುವ ಪಳ್ಳಿಕೆರೆ ಕಡಲತೀರದಲ್ಲಿ…

5 hours ago

ಹಿಂದಿ ಕಿರುತೆರೆ ಜನಪ್ರಿಯ ನಟಿ ಸಂಚಿತಾ ಉಗಲೆ ನೇಣು ಬಿಗಿದುಕೊಂಡು ಆತ್ಮಹತ್ಯೆ – vishwanews24

ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮುಂಬೈ: ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ…

5 hours ago