ಅಬುದಾಬಿ: ದುಬೈನಲ್ಲಿ ನಡೆದ ಭಾರತ ಮತ್ತು ಪಾಕಿಸ್ತಾನದ ಏಕದಿನ ಪಂದ್ಯದಲ್ಲಿ ಪಾಕಿಸ್ತಾನದ ಯುವಕನೊಬ್ಬ ಭಾರತದ ರಾಷ್ಟ್ರಗೀತೆಯನ್ನು ಹಾಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ವೈರಲ್ ಆಗಿದ್ದು, ಜಾಲತಾಣಿಗರಿಂದ ಮೆಚ್ಚುಗೆಯ ಸುರಮಳೆಯೇ ಹರಿದಿದೆ.
ಪಾಕಿಸ್ತಾನದ ಆದಿಲ್ ತಾಜ್ ಭಾರತದ ರಾಷ್ಟ್ರಗೀತೆಯನ್ನು ಹಾಡಿದ ಯುವಕ. ಸೆಪ್ಟೆಂಬರ್ 19 ರಂದು ದುಬೈನಲ್ಲಿ ನಡೆದ ಏಷ್ಯಾಕಪ್ ಪಂದ್ಯದ ಲೀಗ್ ಪಂದ್ಯದಲ್ಲಿ ಬದ್ಧ ವೈರಿಗಳಾದ ಭಾರತ ಮತ್ತು ಪಾಕಿಸ್ತಾನ ಬರೋಬ್ಬರಿ 15 ತಿಂಗಳ ಬಳಿಕ ಎದುರಾಗಿದ್ದವು. ಈ ವೇಳೆ ಪಂದ್ಯಕ್ಕೂ ಮುನ್ನ ಎರಡು ರಾಷ್ಟ್ರಗಳ ರಾಷ್ಟ್ರಗೀತೆಯನ್ನು ಹಾಕಿದ್ದರು. ಈ ವೇಳೆ ಭಾರತದ ರಾಷ್ಟ್ರಗೀತೆಯನ್ನು ಆದಿಲ್ ತಾಜ್ ರವರು ಹಾಡುವ ಮೂಲಕ ಮೆಚ್ಚುಗೆಗೆ ಪಾತ್ರರಾಗಿದ್ದರು.
ಈ ಕುರಿತು ಮಾಧ್ಯಮಗಳಿಗೆ ಹೇಳಿಕೆ ನೀಡಿರುವ ಆದಿಲ್ ತಾಜ್, ನಾನು ಭಾರತದ ರಾಷ್ಟ್ರಗೀತೆಯನ್ನು ಮೊದಲ ಬಾರಿ ಕೇಳಿದ್ದು, ಬಾಲಿವುಡ್ನ `ಕಬಿ ಖುಷಿ ಕಬಿ ಗಂ’ ಚಿತ್ರದಲ್ಲಿ. ನನಗೆ ರಾಷ್ಟ್ರಗೀತೆಯನ್ನು ಕೇಳುತ್ತಲೇ ರೋಮಾಂಚನವಾಗಿತ್ತು. ಅಲ್ಲದೇ ಭಾರತ ಮತ್ತು ಪಾಕಿಸ್ತಾನದ ನಡುವಿನ ಶಾಂತಿಗಾಗಿ ನನ್ನ ಕಡೆಯಿಂದ ಸಣ್ಣ ಪ್ರಯತ್ನ ಎನ್ನುವಂತೆ ನಾನು ಭಾರತದ ರಾಷ್ಟ್ರಗೀತೆಯನ್ನು ಹಾಡಿದೆ ಎಂದು ಹೇಳಿದ್ದಾರೆ.
ಉಭಯ ದೇಶಗಳ ನಡುವೆ ಶಾಂತಿಗಾಗಿ ಇದು ನನ್ನ ಸಣ್ಣ ಪ್ರಯತ್ನವಾಗಿದೆ. ಹೀಗೆ ಮಾಡುವುದಕ್ಕೆ ಪಾಕಿಸ್ತಾನ ನೂತನ ಪ್ರಧಾನಿ ಇಮ್ರಾನ್ ಖಾನ್ ರವರ ಪ್ರೇರಣೆಯೂ ಇದೆ. ಅವರು ಪ್ರಧಾನಿಯಾದ ಸಂದರ್ಭದಲ್ಲಿ ಶಾಂತಿ ಸ್ಥಾಪನೆ ವಿಚಾರದಲ್ಲಿ ಭಾರತ ಒಂದು ಹೆಜ್ಜೆ ಮುಂದೆ ಬಂದರೆ, ನಾವು ಎರಡು ಹೆಜ್ಜೆ ಮುಂದೆ ಹೋಗುತ್ತೇನೆ ಎಂದು ಹೇಳಿದ್ದರು. ಪಂದ್ಯಕ್ಕೂ ಮುನ್ನ ಭಾರತದ ರಾಷ್ಟ್ರಗೀತೆ ಮೊಳಗಿದಾಗ ಇಮ್ರಾನ್ ಖಾನ್ರ ಮಾತು ನೆನೆಪಾಗಿ, ಶಾಂತಿ ಸ್ಥಾಪನೆಗೆ ನನ್ನದು ಸಹ ಪಾತ್ರವಿರಬೇಕು ಎನ್ನುವ ನಿಟ್ಟಿನಲ್ಲಿ ನಾನು ಹಾಡಿದೆ ಎಂದು ತಿಳಿಸಿದರು.
ಅಲ್ಲದೇ ಪಾಕಿಸ್ತಾನದ ರಾಷ್ಟ್ರಗೀತೆ ಮೊಳಗಿದಾಗ ಭಾರತೀಯರು ಗೌರವ ಸಮರ್ಪಿಸಿದ್ದನ್ನು ಗಮನಿಸಿದ್ದೆ. ಮತ್ತೊಮ್ಮೆ ಭಾನುವಾರ(ಇಂದು) ನಡೆಯುವ ಭಾರತ ಮತ್ತು ಪಾಕಿಸ್ತಾನ ಪಂದ್ಯಕ್ಕೆ ಎರಡು ರಾಷ್ಟ್ರಗಳ ಧ್ವಜವನ್ನು ಹಿಡಿದು ಹೋಗುತ್ತೇನೆ ಎಂದು ಹೇಳಿದ್ದಾರೆ..
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…