Featured

ಭಾರತ-ಪಾಕ್​ ಪಂದ್ಯದ ವೇಳೆ ಭಾರತದ ರಾಷ್ಟ್ರಗೀತೆ ಹಾಡಿದ ಪಾಕಿಸ್ತಾನಿ ಯುವಕ! ವೈರಲ್ ಆದ ವೀಡಿಯೋ

ಅಬುದಾಬಿ: ದುಬೈನಲ್ಲಿ ನಡೆದ ಭಾರತ ಮತ್ತು ಪಾಕಿಸ್ತಾನದ ಏಕದಿನ ಪಂದ್ಯದಲ್ಲಿ ಪಾಕಿಸ್ತಾನದ ಯುವಕನೊಬ್ಬ ಭಾರತದ ರಾಷ್ಟ್ರಗೀತೆಯನ್ನು ಹಾಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ವೈರಲ್ ಆಗಿದ್ದು, ಜಾಲತಾಣಿಗರಿಂದ ಮೆಚ್ಚುಗೆಯ ಸುರಮಳೆಯೇ ಹರಿದಿದೆ.

ಪಾಕಿಸ್ತಾನದ ಆದಿಲ್ ತಾಜ್ ಭಾರತದ ರಾಷ್ಟ್ರಗೀತೆಯನ್ನು ಹಾಡಿದ ಯುವಕ. ಸೆಪ್ಟೆಂಬರ್ 19 ರಂದು ದುಬೈನಲ್ಲಿ ನಡೆದ ಏಷ್ಯಾಕಪ್ ಪಂದ್ಯದ ಲೀಗ್ ಪಂದ್ಯದಲ್ಲಿ ಬದ್ಧ ವೈರಿಗಳಾದ ಭಾರತ ಮತ್ತು ಪಾಕಿಸ್ತಾನ ಬರೋಬ್ಬರಿ 15 ತಿಂಗಳ ಬಳಿಕ ಎದುರಾಗಿದ್ದವು. ಈ ವೇಳೆ ಪಂದ್ಯಕ್ಕೂ ಮುನ್ನ ಎರಡು ರಾಷ್ಟ್ರಗಳ ರಾಷ್ಟ್ರಗೀತೆಯನ್ನು ಹಾಕಿದ್ದರು. ಈ ವೇಳೆ ಭಾರತದ ರಾಷ್ಟ್ರಗೀತೆಯನ್ನು ಆದಿಲ್ ತಾಜ್ ರವರು ಹಾಡುವ ಮೂಲಕ ಮೆಚ್ಚುಗೆಗೆ ಪಾತ್ರರಾಗಿದ್ದರು.

ಈ ಕುರಿತು ಮಾಧ್ಯಮಗಳಿಗೆ ಹೇಳಿಕೆ ನೀಡಿರುವ ಆದಿಲ್ ತಾಜ್, ನಾನು ಭಾರತದ ರಾಷ್ಟ್ರಗೀತೆಯನ್ನು ಮೊದಲ ಬಾರಿ ಕೇಳಿದ್ದು, ಬಾಲಿವುಡ್‍ನ `ಕಬಿ ಖುಷಿ ಕಬಿ ಗಂ’ ಚಿತ್ರದಲ್ಲಿ. ನನಗೆ ರಾಷ್ಟ್ರಗೀತೆಯನ್ನು ಕೇಳುತ್ತಲೇ ರೋಮಾಂಚನವಾಗಿತ್ತು. ಅಲ್ಲದೇ ಭಾರತ ಮತ್ತು ಪಾಕಿಸ್ತಾನದ ನಡುವಿನ ಶಾಂತಿಗಾಗಿ ನನ್ನ ಕಡೆಯಿಂದ ಸಣ್ಣ ಪ್ರಯತ್ನ ಎನ್ನುವಂತೆ ನಾನು ಭಾರತದ ರಾಷ್ಟ್ರಗೀತೆಯನ್ನು ಹಾಡಿದೆ ಎಂದು ಹೇಳಿದ್ದಾರೆ.

ಉಭಯ ದೇಶಗಳ ನಡುವೆ ಶಾಂತಿಗಾಗಿ ಇದು ನನ್ನ ಸಣ್ಣ ಪ್ರಯತ್ನವಾಗಿದೆ. ಹೀಗೆ ಮಾಡುವುದಕ್ಕೆ ಪಾಕಿಸ್ತಾನ ನೂತನ ಪ್ರಧಾನಿ ಇಮ್ರಾನ್ ಖಾನ್ ರವರ ಪ್ರೇರಣೆಯೂ ಇದೆ. ಅವರು ಪ್ರಧಾನಿಯಾದ ಸಂದರ್ಭದಲ್ಲಿ ಶಾಂತಿ ಸ್ಥಾಪನೆ ವಿಚಾರದಲ್ಲಿ ಭಾರತ ಒಂದು ಹೆಜ್ಜೆ ಮುಂದೆ ಬಂದರೆ, ನಾವು ಎರಡು ಹೆಜ್ಜೆ ಮುಂದೆ ಹೋಗುತ್ತೇನೆ ಎಂದು ಹೇಳಿದ್ದರು. ಪಂದ್ಯಕ್ಕೂ ಮುನ್ನ ಭಾರತದ ರಾಷ್ಟ್ರಗೀತೆ ಮೊಳಗಿದಾಗ ಇಮ್ರಾನ್ ಖಾನ್‍ರ ಮಾತು ನೆನೆಪಾಗಿ, ಶಾಂತಿ ಸ್ಥಾಪನೆಗೆ ನನ್ನದು ಸಹ ಪಾತ್ರವಿರಬೇಕು ಎನ್ನುವ ನಿಟ್ಟಿನಲ್ಲಿ ನಾನು ಹಾಡಿದೆ ಎಂದು ತಿಳಿಸಿದರು.

ಅಲ್ಲದೇ ಪಾಕಿಸ್ತಾನದ ರಾಷ್ಟ್ರಗೀತೆ ಮೊಳಗಿದಾಗ ಭಾರತೀಯರು ಗೌರವ ಸಮರ್ಪಿಸಿದ್ದನ್ನು ಗಮನಿಸಿದ್ದೆ. ಮತ್ತೊಮ್ಮೆ ಭಾನುವಾರ(ಇಂದು) ನಡೆಯುವ ಭಾರತ ಮತ್ತು ಪಾಕಿಸ್ತಾನ ಪಂದ್ಯಕ್ಕೆ ಎರಡು ರಾಷ್ಟ್ರಗಳ ಧ್ವಜವನ್ನು ಹಿಡಿದು ಹೋಗುತ್ತೇನೆ ಎಂದು ಹೇಳಿದ್ದಾರೆ..

Vishwa News 24

Recent Posts

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ 4 ತಿಂಗಳ ಕಾಲ ನಿಷೇಧ – vishwanews24

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…

2 hours ago

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ – vishwanews24

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್‌ 21 ರಂದು ನೀಟ್‌–ಯುಜಿ  ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…

3 hours ago

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ – vishwanews24

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್…

23 hours ago

ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು ಹೊರತು ಕೇಸರಿ ಶಾಲಿಗೆ ಅವಕಾಶ ಇಲ್ಲ : ಸಿಎಂ ಸ್ಪಷ್ಟನೆ – vishwanews24

ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…

1 day ago

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ತಮಿಳುನಾಡು ಸರ್ಕಾರ ಆದೇಶ – vishwanews24

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ :  ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…

1 day ago

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ – vishwanews24

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…

1 day ago