ಹೊಸದಿಲ್ಲಿ: ಭಾರತದ ಒಟ್ಟಾರೆ ಆರ್ಥಿಕತೆಯ ಮುಖ್ಯ ಸ್ಥಂಭಗಳು ಸಾಕಷ್ಟು ಸಶಕ್ತವಾಗಿರುವುದರಿಂದ ದೇಶದ ಅರ್ಥವ್ಯವಸ್ಥೆ ಸದ್ಯ ಅತ್ಯಂತ ವೇಗವಾಗಿ ಬೆಳೆಯುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೊಂಡಿದ್ದಾರೆ.
‘2014ರಲ್ಲಿ ನರೇಂದ್ರ ಮೋದಿ ಸರಕಾರ ಅಧಿಕಾರಕ್ಕೆ ಮೊದಲು ಬಂದಾಗ ದೇಶದ ಅರ್ಥವ್ಯವಸ್ಥೆ ದುಸ್ಥಿತಿಯಲ್ಲಿತ್ತು” ಎಂದು ಗುಜರಾತ್ ನ ಗಾಂಧಿನಗರದ ಪಂಡಿತ್ ದೀನ್ ದಯಾಳ್ ಪೆಟ್ರೋಲಿಯಂ ವಿಶ್ವವಿದ್ಯಾಲಯದ ಘಟಿಕೋತ್ಸವ ಸಮಾರಂಭದಲ್ಲಿ ಮಾತನಾಡುತ್ತಾ ಶಾ ಹೇಳಿದರು.
‘ಆದರೆ ಇಂದು 2019ರಲ್ಲಿ ಭಾರತ ಶೇ.7ರಷ್ಟು ಪ್ರಗತಿ ಪ್ರಮಾಣದೊಂದಿಗೆ ವಿಶ್ವದಲ್ಲಿಯೇ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆಯಾಗಿದೆ” ಎಂದು ಶಾ ಹೇಳಿಕೊಂಡರು.
ಕಳೆದ ಐದು ವರ್ಷಗಳಲ್ಲಿ ಸರಕಾರ ಹಣದುಬ್ಬರ ಪ್ರಮಾಣವನ್ನು ಶೇ.3ಕ್ಕಿಂತಲೂ ಕಡಿಮೆಯಿರುವಂತೆ ನೋಡಿಕೊಳ್ಳಲು ಸಮರ್ಥವಾಗಿದ್ದು, ವಿತ್ತೀಯ ಕೊರತೆ ಶೇ. 5ರಿಂದ ಶೇ. 3.5ಗೆ ಇಳಿದಿದೆ ಎಂದು ಅವರು ಹೇಳಿದರು. ಆರ್ಥಿಕತೆಯ ಕುರಿತಂತೆ ಭಾರತ ಮೂರನೇ ಅತ್ಯಂತ ಮುಂದುವರಿದ ರಾಷ್ಟ್ರವಾಗಬೇಕೆಂದು ಪ್ರಧಾನಿ ಮೋದಿ ಹೇಳಿರುವುದುರಿಂದ ಸರಕಾರ ಈ ನಿಟ್ಟಿನಲ್ಲಿ ಮುಂದಡಿಯಿಟ್ಟಿದೆ,” ಎಂದು ಶಾ ಹೇಳಿದರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…