Featured

ಭಾರತ ಬಂದ್‌ ವಿಫ‌ಲ : ಅಲ್ಲಲ್ಲಿ ಪ್ರತಿಭಟನೆ, ಬಲವಂತದ ಅಂಗಡಿ ಬಂದ್‌

ಬೆಂಗಳೂರು: ಕೇಂದ್ರದಲ್ಲಿರುವ ನರೇಂದ್ರ ಮೋದಿ ನೇತೃತ್ವದ ಸರಕಾರದ ನೀತಿ ಖಂಡಿಸಿ 10 ಕಾರ್ಮಿಕ ಸಂಘಟನೆಗಳು ಕರೆ ನೀಡಿದ್ದ ಭಾರತ ಬಂದ್‌ ವಿಫ‌ಲವಾಗಿದೆ.

ಕರ್ನಾಟಕದ ರಾಜದಾನಿ ಬೆಂಗಳೂರು ಸಹಿತ ಹಲವೆಡೆ ನಿರೀಕ್ಷಿತ ಪ್ರತಿಕ್ರಿಯೆ ವ್ಯಕ್ತವಾಗಲಿಲ್ಲ. ರಕ್ಷಣೆಯ ಹೊರತಾಗಿಯೂ ರಸ್ತೆಗಿಳಿದ ಬಸ್‌ಗಳಿಗೆ ಕಲ್ಲು, ಪ್ರತಿಭಟನನಿರತ  ಅಲ್ಲಲ್ಲಿ ಒತ್ತಾಯ ಪೂರ್ವಕವಾಗಿ ಅಂಗಡಿ-ಮುಂಗಟ್ಟುಗಳಿಗೆ ಬೀಗ ಮತ್ತಿತರ ಅಹಿತಕರ ಘಟನೆಗಳ ನಡುವೆ ಸಾರ್ವತ್ರಿಕ ಮುಷ್ಕರಕ್ಕೆ ನಿರೀಕ್ಷಿತ ಬೆಂಬಲ ವ್ಯಕ್ತವಾಗಲಿಲ್ಲ.

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರೆ ನೀಡಿದ್ದ 2 ದಿನಗಳ ಮುಷ್ಕರಕ್ಕೆ ಸಾರಿಗೆ ನೌಕರರು ಕೈಜೋಡಿಸಿದ್ದರಿಂದ ಜನರ ‘ಸಂಚಾರ ನಾಡಿ’ ಭಾಗಶಃ ಸ್ತಬ್ಧಗೊಂಡಿತ್ತು. ಆಟೋಗಳ ಓಡಾಟ ವಿರಳವಾಗಿತ್ತು. ಅಂಗಡಿ-ಮುಂಗಟ್ಟುಗಳಲ್ಲಿ ವ್ಯಾಪಾರ ಮಂಕಾಗಿತ್ತು. ಶಾಲಾ-ಕಾಲೇಜುಗಳಿಗೆ ಮುಂಚಿತವಾಗಿಯೇ ರಜೆ ಘೋಷಿಸಲಾಗಿತ್ತು. ವಿಶ್ವವಿದ್ಯಾಲಯಗಳು ಕೂಡ ಪರೀಕ್ಷೆ ಮುಂದೂಡಿದ್ದವು. ಇವೆಲ್ಲದರಿಂದ ಭಾಗಶಃ ಜನಜೀವನ ಅಸ್ತವ್ಯಸ್ತಗೊಂಡಿತು.

ಬಂದ್‌ ವಿಫ‌ಲ ; ಎಡಪಕ್ಷಗಳಿಗೆ ಜನರೇ ಉತ್ತರ :ಸಿ.ಟಿ. ರವಿ

ಪ್ರಧಾನಿ ನರೇಂದ್ರಮೋದಿ ವಿರುದ್ಧ ಜನರನ್ನು ಎತ್ತಿಕಟ್ಟುವ ಷಡ್ಯಂತ್ರಗಳು ನಡೆಯುತ್ತಿದ್ದು, ಅದರ ಭಾಗವಾಗಿ ಕರೆ ನೀಡಿದ್ದ ಇಂದಿನ ಭಾರತ್ ಬಂದ್ ವಿಫಲವಾಗಿದೆ. ಜನ ಮೋದಿ ಸರ್ಕಾರವನ್ನು ಬೆಂಬಲಿಸಿದ್ದಕ್ಕೆ ರಾಜ್ಯ ಬಿಜೆಪಿ ಧನ್ಯವಾದ ಹೇಳಿದೆ.

ಬಿಜೆಪಿ ಕಛೇರಿಯಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪಕ್ಷದ ಪ್ರಧಾನ ಕಾರ್ಯದರ್ಶಿ ಹಾಗೂ ಶಾಸಕ ಸಿ.ಟಿ. ರವಿ, ಎಡ ಪಕ್ಷಗಳು ಕರೆ ನೀಡಿದ್ದ ಭಾರತ್ ಬಂದ್ ವಿಫಲವಾಗಿದೆ. ಮೋದಿ ಅವರ ವಿರುದ್ಧ ಷಡ್ಯಂತ್ರ ಮಾಡಿದ್ದ ಎಡ ಪಕ್ಷಗಳಿಗೆ ದೇಶದ ಜನ ಬಂದ್ ವಿಫಲಗೊಳಿಸುವ ಮೂಲಕ ತಕ್ಕ ಉತ್ತರ ನೀಡಿದ್ದಾರೆ ಎಂದರು.

ಎಡಪಕ್ಷಗಳ ಜತೆ ಕೈಜೋಡಿಸಿದ್ದ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳಿಗೂ ಜನ ಈ ಮೂಲಕ ಪಾಠ ಕಲಿಸಿದ್ದಾರೆ ಎಂದು ಅವರು ವ್ಯಂಗ್ಯವಾಡಿದರು.
ರಾಜ್ಯದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಎಡ ಪಕ್ಷಗಳಿಗೆ ಪರಾವಂಭಿಯಾಗಿದೆ ಎಂಬುದು ಸಾಬೀತಾಗಿದೆ ಎಂದು ಅವರು ಹೇಳಿದರು.
ಒಂದು ಕಡೆ ಜಾತಿಯನ್ನೇ ಎತ್ತಿಕಟ್ಟಿ ಹೋರಾಟ ಮಾಡಿಸುವವರೆ ಈ ಮೀಸಲಾತಿಯನ್ನು ವಿರೋಧಿಸುತ್ತಿದ್ದಾರೆ ಎಂದು ಅವರು ಪರೋಕ್ಷವಾಗಿ ಕಾಂಗ್ರೆಸ್ ಸೇರಿದಂತೆ ದೇಶದ ವಿರೋಧ ಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದರು.

ಜಾತಿ ಜಾತಿಗಳನ್ನೇ ಎತ್ತಿಕಟ್ಟಿ ಮೀಸಲಾತಿ ಹೋರಾಟ ಮಾಡುತ್ತಿದ್ದವರಿಗೆ ಈಗ ಪ್ರಧಾನಿ ಮೋದಿ ಉತ್ತರ ಕೊಟ್ಟಿದ್ದಾರೆ. ಯಾರದೇ ಮೀಸಲಾತಿ ಕಸಿದುಕೊಳ್ಳದೆ ಎಲ್ಲ ವರ್ಗದ ಬಡವರಿಗೆ ಮೀಸಲಾತಿ ಕಲ್ಪಿಸುವ ಡಾ.ಬಿ. ಆರ್. ಅಂಬೇಡ್ಕರ್ ಆಶಯದಂತೆ ಮೋದಿ ಐತಿಹಾಸಿಕ ನಿರ್ಧಾರ ಕೈಗೊಂಡಿದ್ದಾರೆ ಎಂದು ಶಾಸಕ ಸಿ.ಟಿ. ರವಿ ಹೇಳಿದರು.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

6 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

6 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

6 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

6 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

6 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

6 days ago