ಪಣಜಿ : ಭಾರತ ಮತ್ತು ಹಿಂದೂ ಧರ್ಮದ ಮೇಲೆ ಆಕ್ರಣ ಮಾಡಲು ಬಾಲಿವುಡ್ ಜಿಹಾದ್ನ ಷಡ್ಯಂತ್ರವಿದೆ ಎಂದು ಕನ್ನಡ ಚಲನಚಿತ್ರ ವಿತರಕ, ಉದ್ಯಮಿ ಪ್ರಶಾಂತ್ ಸಂಬರಗಿ ಗಂಭೀರ ಆರೋಪ ಮಾಡಿದ್ದಾರೆ.
ಗೋವಾದ ಪೊಂಡಾದ ಶ್ರೀ ರಾಮನಾಥಿಯಲ್ಲಿ ಆಯೋಜಿಸಿರುವ ಅಖಿಲ ಭಾರತೀಯ ಹಿಂದೂ ರಾಷ್ಟ್ರ ಅಧಿವೇಶನದಲ್ಲಿ “ಬಾಲಿವುಡ್ನ ಡ್ರಗ್ಸ್ ಜಿಹಾದ್” ಕುರಿತು ಮಾತನಾಡಿ, 18 ರಿಂದ 24 ವರ್ಷ ವಯೋ ಗುಂಪಿನ ಯುವಕರನ್ನು ಅವರು ಹಿಂದೂಗಳಾಗಿದ್ದಾರೆ ಎಂದು ಮರೆತು ಅವರ ಮೇಲೆ ಪಾಶ್ಚಾತ್ಯ, ಮುಸಲ್ಮಾನ ವಿಚಾರಸರಣಿಯ ಪ್ರಭಾವ ಹೇಗೆ ಬೆಳೆಸಬಹುದು ಎಂಬ ಪ್ರಯತ್ನವನ್ನು ಬಾಲಿವುಡ್ನ ಚಲನಚಿತ್ರಗಳ ಮಾಧ್ಯಮದಿಂದ ಮಾಡಲಾಗುತ್ತಿದೆ ಎಂದರು.
2019 ರಲ್ಲಿ ಗುಜರಾತ್ನಲ್ಲಿ 250 ಚಲನಚಿತ್ರಗಳ ಒಂದು ಸಮೀಕ್ಷೆಯನ್ನು ಮಾಡಲಾಗಿತ್ತು. ಇದಕ್ಕನುಸಾರ ಮುಸಲ್ಮಾನರ ಶೃದ್ಧಾಸ್ಥಾನಗಳು ಶಕ್ತಿಶಾಲಿಯಾಗಿವೆ, ಮುಸಲ್ಮಾನರು ಮಾನವತಾವಾಧಿಗಳಾಗಿದ್ದಾರೆ, ಬದಲಾಗಿ ಬ್ರಾಹ್ಮಣರು ಭ್ರಷ್ಟಾಚಾರಿ ಮತ್ತು ಕೆಟ್ಟವರಿದ್ದಾರೆ ಎಂದು ತೋರಿಸಲಾಗಿದೆ ಎಂದರು.
ಬಾಲಿವುಡ್ನಲ್ಲಿ ಪ್ರತಿ ವರ್ಷ ಸುಮಾರು 3000 ಹಾಡುಗಳು ಪ್ರಸಾರವಾಗುತ್ತದೆ. ಇದರಲ್ಲಿ ಶೇ 30 ರಷ್ಟು ಹಾಡುಗಳಲ್ಲಿ ಅಲ್ಲಾನ ಗುಣಗಾನ ಮಾಡುವದು ಕಂಡುಬರುತ್ತದೆ. ತದ್ವಿರುದ್ಧ ಶೇ 4 ರಷ್ಟು ಹಾಡುಗಳಲ್ಲಿ ಹಿಂದೂ ದೇವತೆಗಳ ಸ್ತುತಿ ಇರುತ್ತದೆ. ಇದರ ಹಿಂದೆ ದುಬೈ ಫಂಡಿಂಗ್ ಮತ್ತು ಕರಾಚಿ ವಿತರಕರ ಕೈವಾಡವಿದೆ ಎಂದರು.
ಕುಖ್ಯಾತ ಅಪರಾಧಿಗಳ ಕಪ್ಪುಹಣ ಬಾಲಿವುಡ್ ಚಲನಚಿತ್ರಗಳ ನಿರ್ಮಾಣಕ್ಕಾಗಿ ಬಳಸಲಾಗುತ್ತದೆ. ಇದರಿಂದ ಲವ್ ಜಿಹಾದ್ಗೆ ಪ್ರೋತ್ಸಾಹ ನೀಡಲಾಗುತ್ತದೆ. ಅಫ್ಘಾನಿಸ್ತಾನ ಮತ್ತು ಪಾಕಿಸ್ತಾನದಿಂದ ಅಮಲು ಪದಾರ್ಥಗಳು ಪಂಜಾಬ್ ಮಾರ್ಗವಾಗಿ ಭಾರತದಾದ್ಯಂತ ವಿತರಿಸಲಾಗುತ್ತದೆ ಎಂದರು.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…