Featured

ಭಾರತ ಮಾತೆ ವಿಧವೆಯಲ್ಲ :ಹಣೆಗೆಬಿಂದಿ ಧರಿಸದ ಪತ್ರಕರ್ತೆಯೊಂದಿಗೆ ಮಾತನಾಡಲು ನಿರಾಕರಿಸಿದ ಹಿಂದೂ ಕಾರ್ಯಕರ್ತ ಸಂಭಾಜಿ ಭಿಡೆ – Vishwanews24

ಭಾರತ ಮಾತೆ ವಿಧವೆಯಲ್ಲ :ಹಣೆಗೆಬಿಂದಿ ಧರಿಸದ ಪತ್ರಕರ್ತೆಯೊಂದಿಗೆ ಮಾತನಾಡಲು ನಿರಾಕರಿಸಿದ ಹಿಂದೂ ಕಾರ್ಯಕರ್ತ ಸಂಭಾಜಿ ಭಿಡೆ

ಮಹಾರಾಷ್ಟ್ರ:  ಹಣೆಗೆ ಬಿಂದಿ ಇರಿಸದ ಕಾರಣಕ್ಕೆ ಪತ್ರಕರ್ತೆಯ ಜತೆ ಮಾತನಾಡಲು ಮಹಾರಾಷ್ಟ್ರದ ಹಿಂದೂ ಕಾರ್ಯಕರ್ತ ಸಂಭಾಜಿ ಭಿಡೆ ನಿರಾಕರಿಸಿದ ಘಟನೆ ಬುಧವಾರ ನಡೆದಿದೆ. ಈ ಘಟನೆ ಕ್ಯಾಮೆರಾದಲ್ಲಿ ಸೆರೆಯಾಗಿದೆ. ದಕ್ಷಿಣ ಮುಂಬಯಿಯ ರಾಜ್ಯ ಕಾರ್ಯಾಲಯದಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರನ್ನು ಭೇಟಿ ಮಾಡಿದ ಬಳಿಕ ಭಿಡೆ ಈ ನಡೆ ಅನುಸರಿಸಿದ್ದಾರೆ.

ತಮ್ಮ ಹೇಳಿಕೆ ಪಡೆದುಕೊಳ್ಳಲು ಮುನ್ನ ಹಣೆಗೆ ಬಿಂದಿ ಇರಿಸಬೇಕು ಎಂದು ಟೆಲಿವಿಷನ್ ವರದಿಗಾರ್ತಿಗೆ ಭಿಡೆ ಮರಾಠಿಯಲ್ಲಿ ಹೇಳುವುದು ಕೇಳಿಸಿದೆ. ಬಳಿಕ ಅವರು ಆಕೆ ಜತೆ ಮಾತನಾಡಲು ನಿರಾಕರಿಸಿದ್ದಾರೆ.

ಹೆಣ್ಣು ಭಾರತ ಮಾತೆ ಇದ್ದಂತೆ. ಆಕೆ ಹಣೆಗೆ ಕುಂಕುಮ ಇರಿಸದೆ ‘ವಿಧವೆ’ ರೀತಿ ಕಾಣಿಸಬಾರದು ಎಂದು ಸಂಭಾಜಿ ಭಿಡೆ ಹೇಳಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತಮ್ಮ ಹೇಳಿಕೆಗೆ ವಿವರಣೆ ನೀಡುವಂತೆ ಭಿಡೆ ಅವರಿಗೆ ಮಹಾರಾಷ್ಟ್ರ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ರೂಪಾಲಿ ಚಕಾಂಕರ್ ಅವರು ನೋಟಿಸ್ ಜಾರಿ ಮಾಡಿದ್ದಾರೆ.

ನವೆಂಬರ್ 7 ರಂದು ಕಾಪು -ಬೈಂದೂರಿಗೆ ಮಾಜಿ ಹಾಗೂ ಹಾಲಿ ಮುಖ್ಯಮಂತ್ರಿಗಳ‌ ಆಗಮನ..

ಶಿಂಧೆ ಅವರನ್ನು ಭೇಟಿ ಮಾಡಿದ ಬಳಿಕ ಭಿಡೆ ಅವರು ನಿರ್ಗಮಿಸುತ್ತಿದ್ದಾಗ ಸಾಮ್ ಟಿವಿ ವಾಹಿನಿಯ ಪತ್ರಕರ್ತೆ ಅವರನ್ನು ಎದುರಾಗಿದ್ದರು. ತಮಗೆ ಪ್ರಶ್ನೆ ಕೇಳಲು ಮೈಕ್ ಹಿಡಿದ ವರದಿಗಾರ್ತಿ ಜತೆ ಮಾತನಾಡಲು ಭಿಡೆ ನಿರಾಕರಿಸಿದ್ದಾರೆ. ಈ ಘಟನೆಯ ವಿಡಿಯೋವನ್ನು ಪತ್ರಕರ್ತೆ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಹಣೆಗೆ ಬಿಂದಿ ಇಡುವುದು ಅಥವಾ ಬಿಡುವುದು ತಮ್ಮ ವೈಯಕ್ತಿಕ ಆಯ್ಕೆ ಎಂದು ಅವರು ಹೇಳಿದ್ದಾರೆ. “ನಾವು ಜನರನ್ನು ಅವರ ವಯಸ್ಸು ಕಂಡು ಗೌರವಿಸುತ್ತೇವೆ. ಆದರೆ ಕೆಲವು ಜನರು ಗೌರವಕ್ಕೂ ಅರ್ಹರಾಗಿರುವುದಿಲ್ಲ. ಬಿಂದಿ ಇರಿಸುವುದು ಅಥವಾ ಬಿಡುವುದು ನನ್ನ ವೈಯಕ್ತಿಕ ಆಯ್ಕೆ. ಇದು ಪ್ರಜಾಪ್ರಭುತ್ವ” ಎಂದು ಹೇಳಿದ್ದಾರೆ.

ಕಾಪುವಿಗೆ ಲಾಲಾಜಿ‌ ಮಾತ್ರವಲ್ಲ ನಾನು ಕೂಡ ಟಿಕೆಟ್ ಆಕಾಂಕ್ಷಿ : ಕುಯಿಲಾಡಿ ಸುರೇಶ್ ನಾಯಕ್ : vishwanews24

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

1 day ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

1 day ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago