Featured

ಭಾರತ-ವಿಂಡೀಸ್ 2ನೇ ಏಕದಿನ ಪಂದ್ಯ ಟೈನಲ್ಲಿ ಅಂತ್ಯ ; ದಾಖಲೆ ಬರೆದ ಕೊಹ್ಲಿ

ವಿಶಾಖಪಟ್ಟಣಪ್ರವಾಸಿ ವೆಸ್ಟ್ ಇಂಡೀಸ್ ಮತ್ತು ಭಾರತ ತಂಡದ ನಡುವೆ ನಡೆದ 2ನೇ ಏಕದಿನ ಪಂದ್ಯ ರೋಚಕ ಟೈನಲ್ಲಿ ಅಂತ್ಯವಾಗಿದೆ.

ಆಂಧ್ರ ಪ್ರದೇಶದ ವಿಶಾಖಪಟ್ಟಣಂನಲ್ಲಿ ಇಂದು ನಡೆದ 2ನೇ ಏಕದಿನ ಪಂದ್ಯದಲ್ಲಿ ಭಾರತ ನೀಡಿದ 322 ರನ್ ಗಳ ಗುರಿಯನ್ನು ಬೆನ್ನು ಹತ್ತಿದ ವಿಂಡೀಸ್ ತಂಡ ನಿಗದಿತ 50 ಓವರ್ ಗಳಲ್ಲಿ  ವಿಕೆಟ್ ನಷ್ಟಕ್ಕೆ 321 ರನ್ ಗಳ ಬೃಹತ್ ಮೊತ್ತ ಪೇರಿಸಿತು. ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಅಜೇಯ 1 ರನ್ ಪೇರಿಸಿದರೆ, ಮಧ್ಯಮ ಕ್ರಮಾಂಕದ ಆಟಗಾರ ಅಂಬಾಟಿ ರಾಯುಡು ಸಮಯೋಚಿತ 3 ರನ್ ಗಳಿಸಿ ತಂಡದ ಬೃಹತ್ ಮೊತ್ತಕ್ಕೆ ಕಾರಣರಾದರು.
ಪಂದ್ಯದ ಅಂತಿಮ ಓವರ್ ನಲ್ಲಿ ವೆಸ್ಟ್ ಇಂಡೀಸ್ ತಂಡಕ್ಕೆ ಗೆಲ್ಲಲು 14 ರನ್ ಗಳ ಅವಶ್ಯಕತೆ ಇತ್ತು. ಆದರೆ ವಿಂಡೀಸ್ ತಂಡ 13 ರನ್ ಗಳನ್ನಷ್ಟೇ ಗಳಿಸಲು ಶಕ್ತವಾಯಿತು. ಅಂತಿಮ ಎಸೆತದಲ್ಲಿ  ರನ್ ಗಳ ಅವಶ್ಯಕತೆ ಇದ್ದಾಗ ಶಾಯ್ ಹೋಪ್ ಭರ್ಜರಿ ಸಿಕ್ಸರ್ ಎತ್ತಲು ಮುಂದಾದರು. ಆದರೆ ಚೆಂಡಿನ ಮೇಲೆ ನಿಯಂತ್ರಣ ಸಾಧಿಸಲಾಗದೇ ಪಾಯಿಂಟ್ ನತ್ತ ಭಾರಿಸಿದರು. ಈ ಚೆಂಡನ್ನು ಹಿಡಿಯಲು ಅಂಬಾಟಿ ರಾಯುಡು ಪ್ರಯತ್ನಿಸಿದರಾದರೂ ಸಾಧ್ಯವಾಗಲಿಲ್ಲ, ಪರಿಣಾಮ ಚೆಂಡು ಬೌಂಡರಿ ಗೆರೆ ದಾಟಿತ್ತು. ಪಂದ್ಯ ರೋಚಕ ಟೈನಲ್ಲಿ ಅಂತ್ಯವಾಯಿತು.

ವಿಶ್ವ ಕ್ರಿಕೆಟಿನಲ್ಲಿ ಹೊಸ ದಾಖಲೆ ಬರೆದ ಕೊಹ್ಲಿ

ವೆಸ್ಟ್ ಇಂಡೀಸ್ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಕಪ್ತಾನ ವಿರಾಟ್ ಕೊಹ್ಲಿ ಅವರು ಹೊಸ ದಾಖಲೆಯೊಂದನ್ನು ಬರೆದಿದ್ದಾರೆ.

ವಿಶ್ವ ಕ್ರಿಕೆಟಿನಲ್ಲಿ ಏಕದಿನಗಳಲ್ಲಿ ಅತಿ ವೇಗವಾಗಿ ಹತ್ತು ಸಾವಿರ ರನ್ ಪೂರೈಸಿದ ಆಟಗಾರನೆಂಬ ಹೆಗ್ಗಳಿಕೆಗೆ ಕೊಹ್ಲಿ ಪಾತ್ರರಾಗಿದ್ದಾರೆ. ಹತ್ತು ಸಾವಿರ ರನ್ ಕ್ಲಬ್ ನಲ್ಲಿರುವ ಸಚಿನ್ ತೆಂಡೂಲ್ಕರ್, ಸೌರವ್ ಗಂಗೂಲಿ ಮತ್ತು ರಿಕಿ ಪಾಂಟಿಂಗ್ ಅವರನ್ನು ಕೊಹ್ಲಿ ಹಿಂದಿಕ್ಕಿದ್ದಾರೆ.

ಎರಡನೇ ಏಕದಿನದಲ್ಲಿ ಮೊದಲು ಬ್ಯಾಟಿಂಗ್ ಆಯ್ದುಕೊಂಡ ಕೊಹ್ಲಿ 89 ರನ್ ಮಾಡಿ ಬ್ಯಾಟಿಂಗ್ ಮಾಡುತ್ತಿದ್ದಾರೆ.

10 ಸಹಸ್ರ ರನ್ ದಾಖಲೆ ಅಲ್ಲದೆ, ಸಚಿನ್​ರ ಇನ್ನೊಂದು ದಾಖಲೆಯನ್ನೂ ವಿರಾಟ್ ಕೊಹ್ಲಿ ಮುರಿದರು. ವೆಸ್ಟ್ ಇಂಡೀಸ್ ವಿರುದ್ಧ ಏಕದಿನದಲ್ಲಿ ಗರಿಷ್ಠ ರನ್ ಬಾರಿಸಿದ ಆಟಗಾರ ಎನ್ನುವ ಗೌರವವನ್ನು ವಿರಾಟ್ ಪಡೆದರು. ಸದ್ಯ ಕೊಹ್ಲಿ ವಿಂಡೀಸ್ ವಿರುದ್ಧ 29 ಏಕದಿನ ಇನಿಂಗ್ಸ್​ಗಳಲ್ಲಿ 1688 ರನ್ ಬಾರಿಸಿದ್ದಾರೆ. ಸಚಿನ್ 39 ಇನಿಂಗ್ಸ್​ಗಳಿಂದ 1573 ರನ್ ಬಾರಿಸಿದ ಸಾಧನೆ 2ನೇ ಸ್ಥಾನಕ್ಕೆ ಕುಸಿಯಿತು.

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

12 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

12 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

12 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

12 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

13 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

13 hours ago