Featured

ಭಾರತ-ವಿಂಡೀಸ್ 2ನೇ ಏಕದಿನ ಪಂದ್ಯ ಟೈನಲ್ಲಿ ಅಂತ್ಯ ; ದಾಖಲೆ ಬರೆದ ಕೊಹ್ಲಿ

ವಿಶಾಖಪಟ್ಟಣಪ್ರವಾಸಿ ವೆಸ್ಟ್ ಇಂಡೀಸ್ ಮತ್ತು ಭಾರತ ತಂಡದ ನಡುವೆ ನಡೆದ 2ನೇ ಏಕದಿನ ಪಂದ್ಯ ರೋಚಕ ಟೈನಲ್ಲಿ ಅಂತ್ಯವಾಗಿದೆ.

ಆಂಧ್ರ ಪ್ರದೇಶದ ವಿಶಾಖಪಟ್ಟಣಂನಲ್ಲಿ ಇಂದು ನಡೆದ 2ನೇ ಏಕದಿನ ಪಂದ್ಯದಲ್ಲಿ ಭಾರತ ನೀಡಿದ 322 ರನ್ ಗಳ ಗುರಿಯನ್ನು ಬೆನ್ನು ಹತ್ತಿದ ವಿಂಡೀಸ್ ತಂಡ ನಿಗದಿತ 50 ಓವರ್ ಗಳಲ್ಲಿ  ವಿಕೆಟ್ ನಷ್ಟಕ್ಕೆ 321 ರನ್ ಗಳ ಬೃಹತ್ ಮೊತ್ತ ಪೇರಿಸಿತು. ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಅಜೇಯ 1 ರನ್ ಪೇರಿಸಿದರೆ, ಮಧ್ಯಮ ಕ್ರಮಾಂಕದ ಆಟಗಾರ ಅಂಬಾಟಿ ರಾಯುಡು ಸಮಯೋಚಿತ 3 ರನ್ ಗಳಿಸಿ ತಂಡದ ಬೃಹತ್ ಮೊತ್ತಕ್ಕೆ ಕಾರಣರಾದರು.
ಪಂದ್ಯದ ಅಂತಿಮ ಓವರ್ ನಲ್ಲಿ ವೆಸ್ಟ್ ಇಂಡೀಸ್ ತಂಡಕ್ಕೆ ಗೆಲ್ಲಲು 14 ರನ್ ಗಳ ಅವಶ್ಯಕತೆ ಇತ್ತು. ಆದರೆ ವಿಂಡೀಸ್ ತಂಡ 13 ರನ್ ಗಳನ್ನಷ್ಟೇ ಗಳಿಸಲು ಶಕ್ತವಾಯಿತು. ಅಂತಿಮ ಎಸೆತದಲ್ಲಿ  ರನ್ ಗಳ ಅವಶ್ಯಕತೆ ಇದ್ದಾಗ ಶಾಯ್ ಹೋಪ್ ಭರ್ಜರಿ ಸಿಕ್ಸರ್ ಎತ್ತಲು ಮುಂದಾದರು. ಆದರೆ ಚೆಂಡಿನ ಮೇಲೆ ನಿಯಂತ್ರಣ ಸಾಧಿಸಲಾಗದೇ ಪಾಯಿಂಟ್ ನತ್ತ ಭಾರಿಸಿದರು. ಈ ಚೆಂಡನ್ನು ಹಿಡಿಯಲು ಅಂಬಾಟಿ ರಾಯುಡು ಪ್ರಯತ್ನಿಸಿದರಾದರೂ ಸಾಧ್ಯವಾಗಲಿಲ್ಲ, ಪರಿಣಾಮ ಚೆಂಡು ಬೌಂಡರಿ ಗೆರೆ ದಾಟಿತ್ತು. ಪಂದ್ಯ ರೋಚಕ ಟೈನಲ್ಲಿ ಅಂತ್ಯವಾಯಿತು.

ವಿಶ್ವ ಕ್ರಿಕೆಟಿನಲ್ಲಿ ಹೊಸ ದಾಖಲೆ ಬರೆದ ಕೊಹ್ಲಿ

ವೆಸ್ಟ್ ಇಂಡೀಸ್ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಕಪ್ತಾನ ವಿರಾಟ್ ಕೊಹ್ಲಿ ಅವರು ಹೊಸ ದಾಖಲೆಯೊಂದನ್ನು ಬರೆದಿದ್ದಾರೆ.

ವಿಶ್ವ ಕ್ರಿಕೆಟಿನಲ್ಲಿ ಏಕದಿನಗಳಲ್ಲಿ ಅತಿ ವೇಗವಾಗಿ ಹತ್ತು ಸಾವಿರ ರನ್ ಪೂರೈಸಿದ ಆಟಗಾರನೆಂಬ ಹೆಗ್ಗಳಿಕೆಗೆ ಕೊಹ್ಲಿ ಪಾತ್ರರಾಗಿದ್ದಾರೆ. ಹತ್ತು ಸಾವಿರ ರನ್ ಕ್ಲಬ್ ನಲ್ಲಿರುವ ಸಚಿನ್ ತೆಂಡೂಲ್ಕರ್, ಸೌರವ್ ಗಂಗೂಲಿ ಮತ್ತು ರಿಕಿ ಪಾಂಟಿಂಗ್ ಅವರನ್ನು ಕೊಹ್ಲಿ ಹಿಂದಿಕ್ಕಿದ್ದಾರೆ.

ಎರಡನೇ ಏಕದಿನದಲ್ಲಿ ಮೊದಲು ಬ್ಯಾಟಿಂಗ್ ಆಯ್ದುಕೊಂಡ ಕೊಹ್ಲಿ 89 ರನ್ ಮಾಡಿ ಬ್ಯಾಟಿಂಗ್ ಮಾಡುತ್ತಿದ್ದಾರೆ.

10 ಸಹಸ್ರ ರನ್ ದಾಖಲೆ ಅಲ್ಲದೆ, ಸಚಿನ್​ರ ಇನ್ನೊಂದು ದಾಖಲೆಯನ್ನೂ ವಿರಾಟ್ ಕೊಹ್ಲಿ ಮುರಿದರು. ವೆಸ್ಟ್ ಇಂಡೀಸ್ ವಿರುದ್ಧ ಏಕದಿನದಲ್ಲಿ ಗರಿಷ್ಠ ರನ್ ಬಾರಿಸಿದ ಆಟಗಾರ ಎನ್ನುವ ಗೌರವವನ್ನು ವಿರಾಟ್ ಪಡೆದರು. ಸದ್ಯ ಕೊಹ್ಲಿ ವಿಂಡೀಸ್ ವಿರುದ್ಧ 29 ಏಕದಿನ ಇನಿಂಗ್ಸ್​ಗಳಲ್ಲಿ 1688 ರನ್ ಬಾರಿಸಿದ್ದಾರೆ. ಸಚಿನ್ 39 ಇನಿಂಗ್ಸ್​ಗಳಿಂದ 1573 ರನ್ ಬಾರಿಸಿದ ಸಾಧನೆ 2ನೇ ಸ್ಥಾನಕ್ಕೆ ಕುಸಿಯಿತು.

Vishwa News 24

Recent Posts

ಸುಳ್ಯ : ಕಂಬಕ್ಕೆ ಬೈಕ್ ಡಿಕ್ಕಿ; ಮೆಸ್ಕಾಂ ಸಿಬ್ಬಂದಿ ಮೃತ್ಯು – vishwanews24

ಸುಳ್ಯ : ಕಂಬಕ್ಕೆ ಬೈಕ್ ಡಿಕ್ಕಿ; ಮೆಸ್ಕಾಂ ಸಿಬ್ಬಂದಿ ಮೃತ್ಯು ಸುಳ್ಯ,: ತಾಲೂಕಿನ ನಿಂತಿಕಲ್ಲು ಬಳಿ ವಿದ್ಯುತ್ ಕಂಬಕ್ಕೆ ಬೈಕ್…

5 minutes ago

13 ವರ್ಷದ ಕೋಮಾ ಜೀವನ ಅಂತ್ಯ : ದಯಾಮರಣಕ್ಕೆ ಅನುಮತಿ ಪಡೆದಿದ್ದ ಹರೀಶ್ ರಾಣಾ ನಿಧನ – vishwanews24

13 ವರ್ಷದ ಕೋಮಾ ಜೀವನ ಅಂತ್ಯ : ದಯಾಮರಣಕ್ಕೆ ಅನುಮತಿ ಪಡೆದಿದ್ದ ಹರೀಶ್ ರಾಣಾ ನಿಧನ ಹೊಸದಿಲ್ಲಿ: 13 ವರ್ಷಗಳಿಂದ…

2 hours ago

ಕರಾವಳಿ ಜಿಲ್ಲೆಯಲ್ಲಿ ಮುಂದಿನ ಎರಡು – ಮೂರು ದಿನ ಮಳೆ ಸಾಧ್ಯತೆ : ಹವಾಮಾನ ಇಲಾಖೆ ಮುನ್ಸೂಚನೆ – vishwanews24

ಕರಾವಳಿ ಜಿಲ್ಲೆಯಲ್ಲಿ ಮುಂದಿನ ಎರಡು-ಮೂರು ದಿನ ಮಳೆ ಸಾಧ್ಯತೆ : ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು: ದಕ್ಷಿಣ ಕನ್ನಡ, ಉಡುಪಿ…

2 hours ago

ಡಿವೈಡರ್‌ಗೆ ಕಾರು ಡಿಕ್ಕಿ : ಖ್ಯಾತ ನಟಿ  ಮಾಡೆಲ್ ಹರ್ಷಿಲ್ ಕಾಲಿಯಾ ಸಾವು – vishwanews24

ಡಿವೈಡರ್‌ಗೆ ಕಾರು ಡಿಕ್ಕಿ :  ಭೀಕರ ಅಪಘಾತದಲ್ಲಿ ಖ್ಯಾತ ನಟಿ  ಮಾಡೆಲ್ ಹರ್ಷಿಲ್ ಕಾಲಿಯಾ ಸಾವು ಜೈಪುರ: ಜೈಪುರದಲ್ಲಿ ಕಾರು…

2 hours ago

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

6 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

6 days ago