ಲಂಡನ್: ಶ್ರೀಲಂಕಾ ಈಗಾಗಲೇ ವಿಶ್ವ ಕಪ್ನಿಂದ ಹೊರ ಬಿದ್ದಿರಬಹುದು. ಆದರೆ ಶನಿವಾರ ನಡೆಯುವ ಭಾರತ ವಿರುದ್ಧದ ಪಂದ್ಯದಲ್ಲಿ ಜಯ ಸಾಧಿಸಿ ತಮ್ಮ ಅಭಿಯಾನ ಅಂತ್ಯಗೊಳಿಸುವ ನಂಬಿಕೆ ನಮ್ಮದು ಎಂದು ತಂಡದ ಆಫ್ ಸ್ಪಿನ್ನರ್ ಧನಂಜಯ ಡಿ’ಸಿಲ್ವ ಹೇಳಿದ್ದಾರೆ.
ಸೋಮವಾರ ನಡೆದ ಪಂದ್ಯದಲ್ಲಿ ಶ್ರೀಲಂಕಾ ತಂಡವು ಬೃಹತ್ ಮೊತ್ತದ ಸೆಣಸಾಟದಲ್ಲಿ ವೆಸ್ಟ್ಇಂಡೀಸ್ ತಂಡ ವನ್ನು 23 ರನ್ನುಗಳಿಂದ ಸೋಲಿಸಿ ಸಮಾಧಾನಪಟ್ಟುಕೊಂಡಿದೆ. ಈ ಮೊದಲು ಇದೇ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಶ್ರೀಲಂಕಾವು ದಕ್ಷಿಣ ಆಫ್ರಿಕಾಕ್ಕೆ 9 ವಿಕೆಟ್ಗಳಿಂದ ಶರಣಾಗಿತ್ತು.
ಇದು ಈ ವಿಶ್ವಕಪ್ನಲ್ಲಿ ಶ್ರೀಲಂಕಾದ 3ನೇ ಗೆಲುವು ಆಗಿದೆ. ಇಂಗ್ಲೆಂಡನ್ನು ಸದೆಬಡಿದಿದ್ದ ಶ್ರೀಲಂಕಾ ತಂಡವು ಹೆಡಿಂಗ್ಲೆಯಲ್ಲಿ ವಿರಾಟ್ ಕೊಹ್ಲಿ ಪಡೆಯನ್ನು ಉರುಳಿಸಲು ಎದುರು ನೋಡುತ್ತಿದೆ ಎಂದು ಡಿ’ಸಿಲ್ವ ತಿಳಿಸಿದ್ದಾರೆ.
ಐಸಿಸಿಯ ಇತರ ಕೂಟಗಳಲ್ಲಿ ನಾವು ಭಾರತ ವಿರುದ್ಧ ಉತ್ತಮ ನಿರ್ವಹಣೆ ದಾಖಲಿಸಿದ್ದೇವೆ. ನಾವು ಈಗಷ್ಟೇ ವಿಂಡೀಸ್ ತಂಡವನ್ನು ಸೋಲಿಸಿದ್ದೇವೆ. ಅದೇ ಉತ್ಸಾಹದಲ್ಲಿ ಆಡಿದರೆ ಭಾರತವನ್ನು ಮತ್ತೆ ಸೋಲಿಸಲು ಸಾಧ್ಯ ಎಂದು ಡಿ’ಸಿಲ್ವ ತಿಳಿಸಿದರು.
ಪ್ರತಿಯೊಂದು ಪಂದ್ಯವನ್ನು ಗೆಲ್ಲಲು ನಾವು ಪ್ರಯತ್ನಿಸಿದ್ದೇವೆ. ಒಂದು ವೇಳೆ ಭಾರತ ತಂಡವನ್ನು ಸೋಲಿಸಿದರೆ ನಾವು 5ನೇ ಸ್ಥಾನದಲ್ಲಿ ಸ್ಪರ್ಧೆ ಮುಗಿಸಲಿದ್ದೇವೆ ಎಂದು ಡಿ’ಸಿಲ್ವ ವಿವರಿಸಿದರು.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…