Featured

ಭಾರತ ವಿರುದ್ಧದ ಪಂದ್ಯದಲ್ಲಿ ಜಯ ಸಾಧಿಸಿ ತಮ್ಮ ಅಭಿಯಾನ ಅಂತ್ಯಗೊಳಿಸುವ ನಂಬಿಕೆ ನಮ್ಮದು : ಲಂಕಾ ಆಫ್ ಸ್ಪಿನ್ನರ್‌ ಡಿ’ಸಿಲ್ವ -Vishwanews24

ಲಂಡನ್‌: ಶ್ರೀಲಂಕಾ ಈಗಾಗಲೇ ವಿಶ್ವ ಕಪ್‌ನಿಂದ ಹೊರ ಬಿದ್ದಿರಬಹುದು. ಆದರೆ ಶನಿವಾರ ನಡೆಯುವ ಭಾರತ ವಿರುದ್ಧದ ಪಂದ್ಯದಲ್ಲಿ ಜಯ ಸಾಧಿಸಿ ತಮ್ಮ ಅಭಿಯಾನ ಅಂತ್ಯಗೊಳಿಸುವ ನಂಬಿಕೆ ನಮ್ಮದು ಎಂದು ತಂಡದ ಆಫ್ ಸ್ಪಿನ್ನರ್‌ ಧನಂಜಯ ಡಿ’ಸಿಲ್ವ ಹೇಳಿದ್ದಾರೆ.

ಸೋಮವಾರ ನಡೆದ ಪಂದ್ಯದಲ್ಲಿ ಶ್ರೀಲಂಕಾ ತಂಡವು ಬೃಹತ್‌ ಮೊತ್ತದ ಸೆಣಸಾಟದಲ್ಲಿ ವೆಸ್ಟ್‌ಇಂಡೀಸ್‌ ತಂಡ ವನ್ನು 23 ರನ್ನುಗಳಿಂದ ಸೋಲಿಸಿ ಸಮಾಧಾನಪಟ್ಟುಕೊಂಡಿದೆ. ಈ ಮೊದಲು ಇದೇ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಶ್ರೀಲಂಕಾವು ದಕ್ಷಿಣ ಆಫ್ರಿಕಾಕ್ಕೆ 9 ವಿಕೆಟ್‌ಗಳಿಂದ ಶರಣಾಗಿತ್ತು.

ಇದು ಈ ವಿಶ್ವಕಪ್‌ನಲ್ಲಿ ಶ್ರೀಲಂಕಾದ 3ನೇ ಗೆಲುವು ಆಗಿದೆ. ಇಂಗ್ಲೆಂಡನ್ನು ಸದೆಬಡಿದಿದ್ದ ಶ್ರೀಲಂಕಾ ತಂಡವು ಹೆಡಿಂಗ್ಲೆಯಲ್ಲಿ ವಿರಾಟ್‌ ಕೊಹ್ಲಿ ಪಡೆಯನ್ನು ಉರುಳಿಸಲು ಎದುರು ನೋಡುತ್ತಿದೆ ಎಂದು ಡಿ’ಸಿಲ್ವ ತಿಳಿಸಿದ್ದಾರೆ.

ಐಸಿಸಿಯ ಇತರ ಕೂಟಗಳಲ್ಲಿ ನಾವು ಭಾರತ ವಿರುದ್ಧ ಉತ್ತಮ ನಿರ್ವಹಣೆ ದಾಖಲಿಸಿದ್ದೇವೆ. ನಾವು ಈಗಷ್ಟೇ ವಿಂಡೀಸ್‌ ತಂಡವನ್ನು ಸೋಲಿಸಿದ್ದೇವೆ. ಅದೇ ಉತ್ಸಾಹದಲ್ಲಿ ಆಡಿದರೆ ಭಾರತವನ್ನು ಮತ್ತೆ ಸೋಲಿಸಲು ಸಾಧ್ಯ ಎಂದು ಡಿ’ಸಿಲ್ವ ತಿಳಿಸಿದರು.

ಪ್ರತಿಯೊಂದು ಪಂದ್ಯವನ್ನು ಗೆಲ್ಲಲು ನಾವು ಪ್ರಯತ್ನಿಸಿದ್ದೇವೆ. ಒಂದು ವೇಳೆ ಭಾರತ ತಂಡವನ್ನು ಸೋಲಿಸಿದರೆ ನಾವು 5ನೇ ಸ್ಥಾನದಲ್ಲಿ ಸ್ಪರ್ಧೆ ಮುಗಿಸಲಿದ್ದೇವೆ ಎಂದು ಡಿ’ಸಿಲ್ವ ವಿವರಿಸಿದರು.

Vishwa News 24

Recent Posts

ಬೆಳ್ತಂಗಡಿ : ಹೊತ್ತಿ ಉರಿದ ಸ್ಕೂಟಿ ; ಗಾಯಗೊಂಡಿದ್ದ ಬಾಲಕ ಮೃತ್ಯು – vishwanews24

ಬೆಳ್ತಂಗಡಿ : ಹೊತ್ತಿ ಉರಿದ ಸ್ಕೂಟಿ ; ಗಾಯಗೊಂಡಿದ್ದ ಬಾಲಕ ಮೃತ್ಯು ಬೆಳ್ತಂಗಡಿ: ತಾಲೂಕಿನ ಬೆಳಾಲು ಗ್ರಾಮದ ಮಿನಂದೇಲುವಿನಲ್ಲಿ ಸ್ಕೂಟಿಯೊಂದು…

7 minutes ago

ಬೆಳ್ತಂಗಡಿ: ಗಡಾಯಿಕಲ್ಲು ಪ್ರವೇಶ ಮತ್ತೆ ಆರಂಭ ; ಗುರುತಿನ ಚೀಟಿ, ಶುಲ್ಕ ಕಡ್ಡಾಯ – vishwanews24

ಬೆಳ್ತಂಗಡಿ: ಗಡಾಯಿಕಲ್ಲು ಪ್ರವೇಶ ಆರಂಭ - ಈ ನಿಯಮ ಪಾಲನೆ ಕಡ್ಡಾಯ ಅಧಿಕೃತ ವೆಬ್‌ಸೈಟ್‌ ಮೂಲಕ ಪೂರ್ವ ನೋಂದಣಿ ಮಾಡಿಸಿಕೊಳ್ಳುವುದು…

15 minutes ago

ಉಡುಪಿ: ಡಿವೈಡರ್  ಮೇಲೇರಿದ ಸ್ಕೂಲ್‌ ಬಸ್‌ ; ತಪ್ಪಿದ ಅನಾಹುತ – vishwanews24

ಉಡುಪಿ: ಡಿವೈಡರ್  ಮೇಲೇರಿದ ಸ್ಕೂಲ್‌ ಬಸ್‌ ; ತಪ್ಪಿದ ಅನಾಹುತ ಉಡುಪಿ: ಅಲ್-ಇಬಾದಾ ಇಂಡಿಯನ್ ಸ್ಕೂಲ್‌ಗೆ ಸೇರಿದ ಬಸ್‌ವೊಂದು ಗುರುವಾರ…

37 minutes ago

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

19 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

19 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

19 hours ago