ಲಂಡನ್: ಶ್ರೀಲಂಕಾ ಈಗಾಗಲೇ ವಿಶ್ವ ಕಪ್ನಿಂದ ಹೊರ ಬಿದ್ದಿರಬಹುದು. ಆದರೆ ಶನಿವಾರ ನಡೆಯುವ ಭಾರತ ವಿರುದ್ಧದ ಪಂದ್ಯದಲ್ಲಿ ಜಯ ಸಾಧಿಸಿ ತಮ್ಮ ಅಭಿಯಾನ ಅಂತ್ಯಗೊಳಿಸುವ ನಂಬಿಕೆ ನಮ್ಮದು ಎಂದು ತಂಡದ ಆಫ್ ಸ್ಪಿನ್ನರ್ ಧನಂಜಯ ಡಿ’ಸಿಲ್ವ ಹೇಳಿದ್ದಾರೆ.
ಸೋಮವಾರ ನಡೆದ ಪಂದ್ಯದಲ್ಲಿ ಶ್ರೀಲಂಕಾ ತಂಡವು ಬೃಹತ್ ಮೊತ್ತದ ಸೆಣಸಾಟದಲ್ಲಿ ವೆಸ್ಟ್ಇಂಡೀಸ್ ತಂಡ ವನ್ನು 23 ರನ್ನುಗಳಿಂದ ಸೋಲಿಸಿ ಸಮಾಧಾನಪಟ್ಟುಕೊಂಡಿದೆ. ಈ ಮೊದಲು ಇದೇ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಶ್ರೀಲಂಕಾವು ದಕ್ಷಿಣ ಆಫ್ರಿಕಾಕ್ಕೆ 9 ವಿಕೆಟ್ಗಳಿಂದ ಶರಣಾಗಿತ್ತು.
ಇದು ಈ ವಿಶ್ವಕಪ್ನಲ್ಲಿ ಶ್ರೀಲಂಕಾದ 3ನೇ ಗೆಲುವು ಆಗಿದೆ. ಇಂಗ್ಲೆಂಡನ್ನು ಸದೆಬಡಿದಿದ್ದ ಶ್ರೀಲಂಕಾ ತಂಡವು ಹೆಡಿಂಗ್ಲೆಯಲ್ಲಿ ವಿರಾಟ್ ಕೊಹ್ಲಿ ಪಡೆಯನ್ನು ಉರುಳಿಸಲು ಎದುರು ನೋಡುತ್ತಿದೆ ಎಂದು ಡಿ’ಸಿಲ್ವ ತಿಳಿಸಿದ್ದಾರೆ.
ಐಸಿಸಿಯ ಇತರ ಕೂಟಗಳಲ್ಲಿ ನಾವು ಭಾರತ ವಿರುದ್ಧ ಉತ್ತಮ ನಿರ್ವಹಣೆ ದಾಖಲಿಸಿದ್ದೇವೆ. ನಾವು ಈಗಷ್ಟೇ ವಿಂಡೀಸ್ ತಂಡವನ್ನು ಸೋಲಿಸಿದ್ದೇವೆ. ಅದೇ ಉತ್ಸಾಹದಲ್ಲಿ ಆಡಿದರೆ ಭಾರತವನ್ನು ಮತ್ತೆ ಸೋಲಿಸಲು ಸಾಧ್ಯ ಎಂದು ಡಿ’ಸಿಲ್ವ ತಿಳಿಸಿದರು.
ಪ್ರತಿಯೊಂದು ಪಂದ್ಯವನ್ನು ಗೆಲ್ಲಲು ನಾವು ಪ್ರಯತ್ನಿಸಿದ್ದೇವೆ. ಒಂದು ವೇಳೆ ಭಾರತ ತಂಡವನ್ನು ಸೋಲಿಸಿದರೆ ನಾವು 5ನೇ ಸ್ಥಾನದಲ್ಲಿ ಸ್ಪರ್ಧೆ ಮುಗಿಸಲಿದ್ದೇವೆ ಎಂದು ಡಿ’ಸಿಲ್ವ ವಿವರಿಸಿದರು.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…