Featured

ಭಾರತ ವಿರುದ್ಧದ ಪಂದ್ಯದಲ್ಲಿ ಜಯ ಸಾಧಿಸಿ ತಮ್ಮ ಅಭಿಯಾನ ಅಂತ್ಯಗೊಳಿಸುವ ನಂಬಿಕೆ ನಮ್ಮದು : ಲಂಕಾ ಆಫ್ ಸ್ಪಿನ್ನರ್‌ ಡಿ’ಸಿಲ್ವ -Vishwanews24

ಲಂಡನ್‌: ಶ್ರೀಲಂಕಾ ಈಗಾಗಲೇ ವಿಶ್ವ ಕಪ್‌ನಿಂದ ಹೊರ ಬಿದ್ದಿರಬಹುದು. ಆದರೆ ಶನಿವಾರ ನಡೆಯುವ ಭಾರತ ವಿರುದ್ಧದ ಪಂದ್ಯದಲ್ಲಿ ಜಯ ಸಾಧಿಸಿ ತಮ್ಮ ಅಭಿಯಾನ ಅಂತ್ಯಗೊಳಿಸುವ ನಂಬಿಕೆ ನಮ್ಮದು ಎಂದು ತಂಡದ ಆಫ್ ಸ್ಪಿನ್ನರ್‌ ಧನಂಜಯ ಡಿ’ಸಿಲ್ವ ಹೇಳಿದ್ದಾರೆ.

ಸೋಮವಾರ ನಡೆದ ಪಂದ್ಯದಲ್ಲಿ ಶ್ರೀಲಂಕಾ ತಂಡವು ಬೃಹತ್‌ ಮೊತ್ತದ ಸೆಣಸಾಟದಲ್ಲಿ ವೆಸ್ಟ್‌ಇಂಡೀಸ್‌ ತಂಡ ವನ್ನು 23 ರನ್ನುಗಳಿಂದ ಸೋಲಿಸಿ ಸಮಾಧಾನಪಟ್ಟುಕೊಂಡಿದೆ. ಈ ಮೊದಲು ಇದೇ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಶ್ರೀಲಂಕಾವು ದಕ್ಷಿಣ ಆಫ್ರಿಕಾಕ್ಕೆ 9 ವಿಕೆಟ್‌ಗಳಿಂದ ಶರಣಾಗಿತ್ತು.

ಇದು ಈ ವಿಶ್ವಕಪ್‌ನಲ್ಲಿ ಶ್ರೀಲಂಕಾದ 3ನೇ ಗೆಲುವು ಆಗಿದೆ. ಇಂಗ್ಲೆಂಡನ್ನು ಸದೆಬಡಿದಿದ್ದ ಶ್ರೀಲಂಕಾ ತಂಡವು ಹೆಡಿಂಗ್ಲೆಯಲ್ಲಿ ವಿರಾಟ್‌ ಕೊಹ್ಲಿ ಪಡೆಯನ್ನು ಉರುಳಿಸಲು ಎದುರು ನೋಡುತ್ತಿದೆ ಎಂದು ಡಿ’ಸಿಲ್ವ ತಿಳಿಸಿದ್ದಾರೆ.

ಐಸಿಸಿಯ ಇತರ ಕೂಟಗಳಲ್ಲಿ ನಾವು ಭಾರತ ವಿರುದ್ಧ ಉತ್ತಮ ನಿರ್ವಹಣೆ ದಾಖಲಿಸಿದ್ದೇವೆ. ನಾವು ಈಗಷ್ಟೇ ವಿಂಡೀಸ್‌ ತಂಡವನ್ನು ಸೋಲಿಸಿದ್ದೇವೆ. ಅದೇ ಉತ್ಸಾಹದಲ್ಲಿ ಆಡಿದರೆ ಭಾರತವನ್ನು ಮತ್ತೆ ಸೋಲಿಸಲು ಸಾಧ್ಯ ಎಂದು ಡಿ’ಸಿಲ್ವ ತಿಳಿಸಿದರು.

ಪ್ರತಿಯೊಂದು ಪಂದ್ಯವನ್ನು ಗೆಲ್ಲಲು ನಾವು ಪ್ರಯತ್ನಿಸಿದ್ದೇವೆ. ಒಂದು ವೇಳೆ ಭಾರತ ತಂಡವನ್ನು ಸೋಲಿಸಿದರೆ ನಾವು 5ನೇ ಸ್ಥಾನದಲ್ಲಿ ಸ್ಪರ್ಧೆ ಮುಗಿಸಲಿದ್ದೇವೆ ಎಂದು ಡಿ’ಸಿಲ್ವ ವಿವರಿಸಿದರು.

Vishwa News 24

Recent Posts

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ – vishwanews24

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…

11 hours ago

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ – vishwanews24

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…

11 hours ago

ದೇಣಿಗೆ ಕಳ್ಳತನ ವಿವಾದ: ರಾಮಮಂದಿರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ – vishwanews24

ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…

11 hours ago

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್‌ ಖರ್ಗೆ – vishwanews24

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ  ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…

11 hours ago

ರಾಮ ಮಂದಿರ ದೇಣಿಗೆ ಹಣದಲ್ಲಿ ಅಕ್ರಮ ಎಸಗುವವರನ್ನು ಬಿಡುವುದಿಲ್ಲ: ಯೋಗಿ ಆದಿತ್ಯನಾಥ್‌ ಎಚ್ಚರಿಕೆ – vishwanews24

ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್‌ ಲಕ್ನೋ: ರಾಮಭಕ್ತರ…

11 hours ago

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ – vishwanews24

ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…

13 hours ago