Featured

ಭಾರತ ವಿಶ್ವದಲ್ಲಿ ಅತ್ಯಂತ ವೇಗವಾಗಿ ಆರ್ಥಿಕಾಭಿವೃದ್ಧಿ ಹೊಂದುತ್ತಿರುವ ದೇಶ : ನಿರ್ಮಲಾ ಸೀತಾರಾಮನ್ -Vishwanews24

ವಾಷಿಂಗ್ಟನ್; ವಿಶ್ವದಲ್ಲಿ ಅತ್ಯಂತ ವೇಗವಾಗಿ ಆರ್ಥಿಕಾಭಿವೃದ್ಧಿ ಹೊಂದುತ್ತಿರುವ ದೇಶ ಭಾರತವಾಗಿದ್ದು, ಇನ್ನಷ್ಟು ವೇಗವಾಗಿ ಬೆಳೆಯುವಂತೆ ಮಾಡಲು ಪ್ರಯತ್ನಗಳು ನಡೆಯುತ್ತಿವೆ ಎಂದು ಕೇಂದ್ರ ಹಣಕಾಸು ಖಾತೆ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

ಅಂತಾರಾಷ್ಟ್ರೀಯ ಹಣಕಾಸು ನಿಧಿ ಭಾರತದಲ್ಲಿ ಆರ್ಥಿಕಾಭಿವೃದ್ಧಿ ದರ ಕಡಿಮೆಯಾಗಿದೆ ಎಂದು ಹೇಳಿದೆ, ಆದರೆ ನಮ್ಮ ದೇಶದ ಆರ್ಥಿಕತೆ ವೇಗವಾಗಿ ಅಭಿವೃದ್ಧಿ ಹೊಂದುತ್ತಿದೆ ಎಂದು ನಿನ್ನೆ ವಾಷಿಂಗ್ಟನ್ ನಲ್ಲಿ ಭಾರತೀಯ ಪತ್ರಕರ್ತರೊಂದಿಗೆ ಮಾತನಾಡುವಾಗ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

ಅವರು ವಾಷಿಂಗ್ಟನ್ ನಲ್ಲಿ ಐಎಎಂ ಮತ್ತು ವಿಶ್ವಬ್ಯಾಂಕಿನ ವಾರ್ಷಿಕ ಸಭೆಯಲ್ಲಿ ಭಾಗವಹಿಸುತ್ತಿದ್ದು ಈ ಸಂದರ್ಭದಲ್ಲಿ ಸಹಜವಾಗಿ ಭಾರತದ ಆರ್ಥಿಕ ಕುಸಿತ ವಿಚಾರ ಚರ್ಚೆಗೆ ಬಂದಿದೆ. ಭಾರತ ಮತ್ತು ಚೀನಾ ದೇಶಗಳ ಆರ್ಥಿಕ ಬೆಳವಣಿಗೆ ಶೇಕಡಾ 6.1ರಷ್ಟಿದೆ ಎಂದು ಹೇಳಿದರೂ ನಾನು ಭಾರತವನ್ನು ಚೀನಾ ಜೊತೆ ಹೋಲಿಕೆ ಮಾಡಲು ಹೋಗುವುದಿಲ್ಲ. ಎಲ್ಲಾ ಜಾಗತಿಕ ಆರ್ಥಿಕತೆಯ ಅಭಿವೃದ್ಧಿ ದರವನ್ನು ಐಎಂಎಫ್ ಕಡಿಮೆ ಮಾಡಿ ಹೇಳಿದೆ. ಭಾರತಕ್ಕೆ ಕೂಡ ಅದೇ ರೀತಿ ಹೇಳಿದೆ. ಆದರೂ ಭಾರತದ ಆರ್ಥಿಕ ದರ ವೇಗವಾಗಿ ಬೆಳವಣಿಗೆ ಹೊಂದುತ್ತಿದೆ ಎಂದು ನಾನು ಹೇಳುತ್ತೇನೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

ಕಳೆದ ವರ್ಷ ಭಾರತದ ಆರ್ಥಿಕಾಭಿವೃದ್ಧಿ ದರ ಶೇಕಡಾ 6.8ರಷ್ಟಾಗಿತ್ತು. ಐಎಂಎಫ್ ಇತ್ತೀಚೆಗೆ ಬಿಡುಗಡೆ ಮಾಡಿದ ‘ಎಕನಾಮಿಕ್ ಔಟ್ ಲುಕ್’ ಪುಸ್ತಕದಲ್ಲಿ ಈ ವರ್ಷ ಭಾರತದ ಆರ್ಥಿಕಾಭಿವೃದ್ಧಿ ಶೇಕಡಾ 6.1ರಷ್ಟಾಗಿದೆ ಎಂದು ಹೇಳಿದ್ದು ಮುಂದಿನ ವರ್ಷ ಶೇಕಡಾ 7ಕ್ಕೆ ಏರಿಕೆಯಾಗುವ ನಿರೀಕ್ಷೆಯಿದೆ ಎಂದು ಅಂದಾಜು ಮಾಡಿದೆ.

Vishwa News 24

Recent Posts

ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ – vishwanews24

ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ ಬೆಂಗಳೂರು,: ಕರ್ನಾಟಕದ ಕಾಂಗ್ರೆಸ್ ಪಕ್ಷದ ಉಸ್ತುವಾರಿ ಸುರ್ಜೇವಾಲ…

13 hours ago

ಕಾರವಾರ – ಮಡಗಾಂವ್ ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ – vishwanews24

ಕಾರವಾರ - ಮಡಗಾಂವ್  ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ ಶಿರಸಿ: ಕಾರವಾರ ಮತ್ತು ಮಡಗಾಂವ್ ನಡುವೆ ಸಂಚರಿಸುತ್ತಿದ್ದ ವಿಶೇಷ…

14 hours ago

ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ: ರಾಜಣ್ಣ ಖಡಕ್ ಹೇಳಿಕೆ – vishwanews24

ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ, ಸ್ಪರ್ಧೆಯಲ್ಲೂ ಇಲ್ಲ: ರಾಜಣ್ಣ ಖಡಕ್ ಹೇಳಿಕೆ ಬೆಂಗಳೂರು: ನೂತನ ಮುಖ್ಯಮಂತ್ರಿ ಡಿ.…

14 hours ago

ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ;  ₹23.67 ಲಕ್ಷ ಮೌಲ್ಯದ ಸೊತ್ತು ವಶ – vishwanews24

ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ;  ₹23.67 ಲಕ್ಷ ಮೌಲ್ಯದ ಸೊತ್ತು ವಶ…

16 hours ago

ಉಡುಪಿ : ಯುವಕ ನಾಪತ್ತೆ – vishwanews24

ಉಡುಪಿ : ಯುವಕ ನಾಪತ್ತೆ ಉಡುಪಿ : ಮೂಲತಃ ನೇಪಾಳ ದೇಶದವರಾದ, ಪ್ರಸ್ತುತ ಮಣಿಪಾಲದ ಲಕ್ಷಿö್ಮÃಶ ನಗರದಲ್ಲಿರುವ ಹೋಟೆಲ್ ಒಂದರಲ್ಲಿ…

16 hours ago

ಉಡುಪಿ: ಜೂನ್ 9 ರಿಂದ ಕರ್ನಾಟಕದಾದ್ಯಂತ ಖಾಸಗಿ ಬಸ್ ಪ್ರಯಾಣ ದರ  ಏರಿಕೆ : ಕುಯಿಲಾಡಿ ಸುರೇಶ್ ನಾಯಕ್ – vishwanews24

ಉಡುಪಿ: ಜೂನ್ 9 ರಿಂದ ಕರ್ನಾಟಕದಾದ್ಯಂತ ಖಾಸಗಿ ಬಸ್ ಪ್ರಯಾಣ ದರ  ಏರಿಕೆ : ಕುಯಿಲಾಡಿ ಸುರೇಶ್ ನಾಯಕ್ ಉಡುಪಿ…

17 hours ago