Featured

ಭಾರತ ವಿಶ್ವದಲ್ಲಿ ಅತ್ಯಂತ ವೇಗವಾಗಿ ಆರ್ಥಿಕಾಭಿವೃದ್ಧಿ ಹೊಂದುತ್ತಿರುವ ದೇಶ : ನಿರ್ಮಲಾ ಸೀತಾರಾಮನ್ -Vishwanews24

ವಾಷಿಂಗ್ಟನ್; ವಿಶ್ವದಲ್ಲಿ ಅತ್ಯಂತ ವೇಗವಾಗಿ ಆರ್ಥಿಕಾಭಿವೃದ್ಧಿ ಹೊಂದುತ್ತಿರುವ ದೇಶ ಭಾರತವಾಗಿದ್ದು, ಇನ್ನಷ್ಟು ವೇಗವಾಗಿ ಬೆಳೆಯುವಂತೆ ಮಾಡಲು ಪ್ರಯತ್ನಗಳು ನಡೆಯುತ್ತಿವೆ ಎಂದು ಕೇಂದ್ರ ಹಣಕಾಸು ಖಾತೆ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

ಅಂತಾರಾಷ್ಟ್ರೀಯ ಹಣಕಾಸು ನಿಧಿ ಭಾರತದಲ್ಲಿ ಆರ್ಥಿಕಾಭಿವೃದ್ಧಿ ದರ ಕಡಿಮೆಯಾಗಿದೆ ಎಂದು ಹೇಳಿದೆ, ಆದರೆ ನಮ್ಮ ದೇಶದ ಆರ್ಥಿಕತೆ ವೇಗವಾಗಿ ಅಭಿವೃದ್ಧಿ ಹೊಂದುತ್ತಿದೆ ಎಂದು ನಿನ್ನೆ ವಾಷಿಂಗ್ಟನ್ ನಲ್ಲಿ ಭಾರತೀಯ ಪತ್ರಕರ್ತರೊಂದಿಗೆ ಮಾತನಾಡುವಾಗ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

ಅವರು ವಾಷಿಂಗ್ಟನ್ ನಲ್ಲಿ ಐಎಎಂ ಮತ್ತು ವಿಶ್ವಬ್ಯಾಂಕಿನ ವಾರ್ಷಿಕ ಸಭೆಯಲ್ಲಿ ಭಾಗವಹಿಸುತ್ತಿದ್ದು ಈ ಸಂದರ್ಭದಲ್ಲಿ ಸಹಜವಾಗಿ ಭಾರತದ ಆರ್ಥಿಕ ಕುಸಿತ ವಿಚಾರ ಚರ್ಚೆಗೆ ಬಂದಿದೆ. ಭಾರತ ಮತ್ತು ಚೀನಾ ದೇಶಗಳ ಆರ್ಥಿಕ ಬೆಳವಣಿಗೆ ಶೇಕಡಾ 6.1ರಷ್ಟಿದೆ ಎಂದು ಹೇಳಿದರೂ ನಾನು ಭಾರತವನ್ನು ಚೀನಾ ಜೊತೆ ಹೋಲಿಕೆ ಮಾಡಲು ಹೋಗುವುದಿಲ್ಲ. ಎಲ್ಲಾ ಜಾಗತಿಕ ಆರ್ಥಿಕತೆಯ ಅಭಿವೃದ್ಧಿ ದರವನ್ನು ಐಎಂಎಫ್ ಕಡಿಮೆ ಮಾಡಿ ಹೇಳಿದೆ. ಭಾರತಕ್ಕೆ ಕೂಡ ಅದೇ ರೀತಿ ಹೇಳಿದೆ. ಆದರೂ ಭಾರತದ ಆರ್ಥಿಕ ದರ ವೇಗವಾಗಿ ಬೆಳವಣಿಗೆ ಹೊಂದುತ್ತಿದೆ ಎಂದು ನಾನು ಹೇಳುತ್ತೇನೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

ಕಳೆದ ವರ್ಷ ಭಾರತದ ಆರ್ಥಿಕಾಭಿವೃದ್ಧಿ ದರ ಶೇಕಡಾ 6.8ರಷ್ಟಾಗಿತ್ತು. ಐಎಂಎಫ್ ಇತ್ತೀಚೆಗೆ ಬಿಡುಗಡೆ ಮಾಡಿದ ‘ಎಕನಾಮಿಕ್ ಔಟ್ ಲುಕ್’ ಪುಸ್ತಕದಲ್ಲಿ ಈ ವರ್ಷ ಭಾರತದ ಆರ್ಥಿಕಾಭಿವೃದ್ಧಿ ಶೇಕಡಾ 6.1ರಷ್ಟಾಗಿದೆ ಎಂದು ಹೇಳಿದ್ದು ಮುಂದಿನ ವರ್ಷ ಶೇಕಡಾ 7ಕ್ಕೆ ಏರಿಕೆಯಾಗುವ ನಿರೀಕ್ಷೆಯಿದೆ ಎಂದು ಅಂದಾಜು ಮಾಡಿದೆ.

Vishwa News 24

Recent Posts

ಕುದುರೆಮುಖ ಆಫ್ ರೋಡಿಂಗ್ ಚಟುವಟಿಕೆ ವಿರುದ್ಧ ತೀವ್ರ ಆಕ್ರೋಶ – vishwanews24

ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…

1 hour ago

ಕುಂದಾಪುರ: ಮನೆಯ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು; ಚಿನ್ನಾಭರಣ, ನಗದು ಕಳವು – vishwanews24

ಕುಂದಾಪುರ: ಮನೆಯ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು; ಚಿನ್ನಾಭರಣ, ನಗದು ಕಳವು ಕುಂದಾಪುರ: ಕುಂದಾಪುರದ ಬೊಬ್ಬರ್ಯನಕಟ್ಟೆಯ ಮನೆಯಲ್ಲಿ ಯಾರೂ ಇಲ್ಲದ…

1 hour ago

ಕರ್ನಾಟಕ ವಿಧಾನಸಭೆ ನೂತನ ಸ್ಪೀಕರ್​ ಆಗಿ ಜಿ.ಎಸ್. ಪಾಟೀಲ್ ಅವಿರೋಧ ಆಯ್ಕೆ – vishwanews24

ಕರ್ನಾಟಕ ವಿಧಾನಸಭೆ ಸ್ಪೀಕರ್​ ಆಗಿ ಜಿ.ಎಸ್. ಪಾಟೀಲ್ ಅವಿರೋಧ ಆಯ್ಕೆ ಬೆಂಗಳೂರು: ಕರ್ನಾಟಕ ವಿಧಾನಸಭಾಧ್ಯಕ್ಷರಾಗಿ ಗುರುಪಾದಗೌಡ ಸಂಗನಗೌಡ ಪಾಟೀಲ (ಜಿ.ಎಸ್.ಪಾಟೀಲ್)…

2 hours ago

ನಿರ್ಮಾಣ ಹಂತದಲ್ಲಿದ್ದ ಸುರಂಗದ ಒಳಗೆ ನುಗ್ಗಿದ ನೀರು : 7 ಕಾರ್ಮಿಕರ ದಾರುಣ ಸಾವು ; 14ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ – vishwanews24

ನಿರ್ಮಾಣ ಹಂತದಲ್ಲಿದ್ದ ಸುರಂಗದ ಒಳಗೆ ನುಗ್ಗಿದ ನೀರು .. 7 ಕಾರ್ಮಿಕರ ದಾರುಣ ಸಾವು ; 14ಕ್ಕೂ ಹೆಚ್ಚು ಮಂದಿಗೆ…

2 hours ago

ಧ್ವಜಾರೋಹಣಕ್ಕೆ ವಿನಾಯಿತಿ ಕೋರಿ ಸಿಎಂಗೆ ಸಚಿವ ಜಮೀರ್ ಪತ್ರ ; ಮನವಿಗೆ  ಸ್ಪಂದಿಸಿದ ಸಿಎಂ  – vishwanews24

ಧ್ವಜಾರೋಹಣಕ್ಕೆ ವಿನಾಯಿತಿ ಕೋರಿ ಸಿಎಂಗೆ ಸಚಿವ ಜಮೀರ್ ಪತ್ರ ; ಮನವಿಗೆ  ಸ್ಪಂದಿಸಿದ ಸಿಎಂ  ಚುನಾವಣೆ, ಪಕ್ಷ ಸಂಘಟನೆ ಕಾರಣ…

2 hours ago

ಮನೆ ತೆರಿಗೆ ಲಕ್ಷಾಂತರ ಹಣ ದುರುಪಯೋಗ: ಶಿವಪುರ ಗ್ರಾ.ಪಂ ಸಿಬ್ಬಂದಿ ವಜಾ – vishwanews24

ಮನೆ ತೆರಿಗೆ ಲಕ್ಷಾಂತರ ಹಣ ದುರುಪಯೋಗ: ಶಿವಪುರ ಗ್ರಾಪಂ ಸಿಬ್ಬಂದಿ ವಜಾ ಉಡುಪಿ: ಹೆಬ್ರಿ ತಾಲ್ಲೂಕಿನ ಶಿವಪುರ ಗ್ರಾಮ ಪಂಚಾಯಿತಿಯಲ್ಲಿ…

2 hours ago