ಭಾರತ ಸಹಾಯ ಮಾಡಿದರೆ ನಾವು ಸೆಮಿಫೈನಲ್‌ಗೆ ತಲುಪಬಹುದು : ಅಖ್ತರ್‌ -Vishwanews24

Featured, ರಾಷ್ಟ್ರ ನ್ಯೂಸ್

ನವದೆಹಲಿ: ನ್ಯೂಜಿಲೆಂಡ್ ವಿರುದ್ಧ ಗೆಲುವು ಸಾಧಿಸಿರುವ ಹಿನ್ನಲೆಯಲ್ಲಿ ಈಗ ಪಾಕ್ ತಂಡಕ್ಕೂ ಕೂಡ ಸೆಮಿಫೈನಲ್ ತಲುಪುವ ಸಣ್ಣ ಸಾಧ್ಯತೆ ಇದೆ.

ಹಾಗಾದರೆ ಇದಕ್ಕೆ ಪಾಕಿಸ್ತಾನ ತಂಡವು ಮುಂದಿನ ಅಫ್ಘಾನಿಸ್ತಾನ ಹಾಗೂ ಬಾಂಗ್ಲಾದೇಶದ ವಿರುದ್ಧದ ಪಂದ್ಯಗಳನ್ನು ಗೆಲ್ಲಬೇಕು ಜೊತೆಗೆ ಇಂಗ್ಲೆಂಡ್ ತಂಡವು ಭಾರತ ತಂಡದ ವಿರುದ್ಧ ಸೋಲಬೇಕು ಆಗ ಪಾಕ್ ತಂಡವು 11 ಅಂಕಗಳೊಂದಿಗೆ ಸೆಮಿಫೈನಲ್ ತಲುಪಲಿದೆ ಎನ್ನಲಾಗಿದೆ. ಈ ಹಿನ್ನಲೆಯಲ್ಲಿ ಪಾಕ್ ನ ಮಾಜಿ ಆಟಗಾರ ಶೋಯಬ್ ಅಖ್ತರ್ ಭಾರತ ತಂಡವು  ಪಾಕ್  ಸೆಮಿಫೈನಲ್ ತಲುಪಲು ಸಹಾಯ ಮಾಡ ಬೇಕು ಎಂದು ವಿನಂತಿಸಿಕೊಂಡಿದ್ದಾರೆ.

“ಈಗ ಭಾರತ ಸಹಾಯ ಮಾಡಿದರೆ ನಾವು ಸೆಮಿಫೈನಲ್‌ಗೆ ಏರಬಹುದು. ಹೇಗೆಂದರೆ, ಭಾರತ ಆತಿಥೇಯ ಇಂಗ್ಲೆಂಡ್‌ ವಿರುದ್ಧ ಜಯ ಸಾಧಿಸುವುದು. ಆಗ ಇಂಗ್ಲೆಂಡ್‌ ಹೊರಬೀಳುತ್ತದೆ. ಪಾಕ್‌ ಮುಂದಿನೆರಡೂ ಪಂದ್ಯಗಳನ್ನು ಗೆದ್ದರೆ ಆಗ 11 ಅಂಕವಾಗುತ್ತದೆ. 4ನೇ ಸ್ಥಾನಿಯಾಗಿ ನಾಕೌಟ್‌ ಪ್ರವೇಶಿಸಬಹುದು. ಹೀಗಾಗಿ ಹೇಗಾದರೂ ಇಂಗ್ಲಂಡ್‌ ವಿರುದ್ಧ ಗೆದ್ದು ಬನ್ನಿ…’ ಎಂದು ಭಾರತವನ್ನು ವಿನಂತಿಸಿದ್ದಾರೆ ಅಖ್ತರ್‌. ಯೂಟ್ಯೂಬ್‌ಗ ಅಪ್‌ಲೋಡ್‌ ಮಾಡಿರುವ ಈ ವೀಡಿಯೊ ಈಗ ಚರ್ಚೆಗೆ ಗ್ರಾಸವಾಗಿದೆ.

“ಪಾಕಿಸ್ಥಾನ ಕ್ಷಿಪ್ರವಾಗಿ ಚೇತರಿಸಿಕೊಂಡು ಮೇಲೆದ್ದು ಬಂದಿದೆ. ಈಗ ಭಾರತೀಯರ ಸರದಿ. ನೀವು ನಮಗೆ ಸಹಾಯ ಮಾಡಿ. ಇಂಗ್ಲಂಡನ್ನು ಸೋಲಿಸಿ. ನಾವು ನಮ್ಮ 2 ಪಂದ್ಯಗಳನ್ನು ಗೆಲ್ಲುತ್ತೇವೆ. ಸೆಮಿಫೈನಲ್‌ನಲ್ಲಿ ಮತ್ತೊಮ್ಮೆ ಮುಖಾಮುಖೀಯಾಗೋಣ. ಆಗ ನಿಮ್ಮನ್ನು ಸೋಲಿಸುತ್ತೇವೆ’ ಎಂದು ಅಖ್ತರ್‌ ಈ ವೀಡಿಯೊದಲ್ಲಿ ಹೇಳಿದ್ದಾರೆ.