ನವದೆಹಲಿ: ನ್ಯೂಜಿಲೆಂಡ್ ವಿರುದ್ಧ ಗೆಲುವು ಸಾಧಿಸಿರುವ ಹಿನ್ನಲೆಯಲ್ಲಿ ಈಗ ಪಾಕ್ ತಂಡಕ್ಕೂ ಕೂಡ ಸೆಮಿಫೈನಲ್ ತಲುಪುವ ಸಣ್ಣ ಸಾಧ್ಯತೆ ಇದೆ.
ಹಾಗಾದರೆ ಇದಕ್ಕೆ ಪಾಕಿಸ್ತಾನ ತಂಡವು ಮುಂದಿನ ಅಫ್ಘಾನಿಸ್ತಾನ ಹಾಗೂ ಬಾಂಗ್ಲಾದೇಶದ ವಿರುದ್ಧದ ಪಂದ್ಯಗಳನ್ನು ಗೆಲ್ಲಬೇಕು ಜೊತೆಗೆ ಇಂಗ್ಲೆಂಡ್ ತಂಡವು ಭಾರತ ತಂಡದ ವಿರುದ್ಧ ಸೋಲಬೇಕು ಆಗ ಪಾಕ್ ತಂಡವು 11 ಅಂಕಗಳೊಂದಿಗೆ ಸೆಮಿಫೈನಲ್ ತಲುಪಲಿದೆ ಎನ್ನಲಾಗಿದೆ. ಈ ಹಿನ್ನಲೆಯಲ್ಲಿ ಪಾಕ್ ನ ಮಾಜಿ ಆಟಗಾರ ಶೋಯಬ್ ಅಖ್ತರ್ ಭಾರತ ತಂಡವು ಪಾಕ್ ಸೆಮಿಫೈನಲ್ ತಲುಪಲು ಸಹಾಯ ಮಾಡ ಬೇಕು ಎಂದು ವಿನಂತಿಸಿಕೊಂಡಿದ್ದಾರೆ.
“ಈಗ ಭಾರತ ಸಹಾಯ ಮಾಡಿದರೆ ನಾವು ಸೆಮಿಫೈನಲ್ಗೆ ಏರಬಹುದು. ಹೇಗೆಂದರೆ, ಭಾರತ ಆತಿಥೇಯ ಇಂಗ್ಲೆಂಡ್ ವಿರುದ್ಧ ಜಯ ಸಾಧಿಸುವುದು. ಆಗ ಇಂಗ್ಲೆಂಡ್ ಹೊರಬೀಳುತ್ತದೆ. ಪಾಕ್ ಮುಂದಿನೆರಡೂ ಪಂದ್ಯಗಳನ್ನು ಗೆದ್ದರೆ ಆಗ 11 ಅಂಕವಾಗುತ್ತದೆ. 4ನೇ ಸ್ಥಾನಿಯಾಗಿ ನಾಕೌಟ್ ಪ್ರವೇಶಿಸಬಹುದು. ಹೀಗಾಗಿ ಹೇಗಾದರೂ ಇಂಗ್ಲಂಡ್ ವಿರುದ್ಧ ಗೆದ್ದು ಬನ್ನಿ…’ ಎಂದು ಭಾರತವನ್ನು ವಿನಂತಿಸಿದ್ದಾರೆ ಅಖ್ತರ್. ಯೂಟ್ಯೂಬ್ಗ ಅಪ್ಲೋಡ್ ಮಾಡಿರುವ ಈ ವೀಡಿಯೊ ಈಗ ಚರ್ಚೆಗೆ ಗ್ರಾಸವಾಗಿದೆ.
“ಪಾಕಿಸ್ಥಾನ ಕ್ಷಿಪ್ರವಾಗಿ ಚೇತರಿಸಿಕೊಂಡು ಮೇಲೆದ್ದು ಬಂದಿದೆ. ಈಗ ಭಾರತೀಯರ ಸರದಿ. ನೀವು ನಮಗೆ ಸಹಾಯ ಮಾಡಿ. ಇಂಗ್ಲಂಡನ್ನು ಸೋಲಿಸಿ. ನಾವು ನಮ್ಮ 2 ಪಂದ್ಯಗಳನ್ನು ಗೆಲ್ಲುತ್ತೇವೆ. ಸೆಮಿಫೈನಲ್ನಲ್ಲಿ ಮತ್ತೊಮ್ಮೆ ಮುಖಾಮುಖೀಯಾಗೋಣ. ಆಗ ನಿಮ್ಮನ್ನು ಸೋಲಿಸುತ್ತೇವೆ’ ಎಂದು ಅಖ್ತರ್ ಈ ವೀಡಿಯೊದಲ್ಲಿ ಹೇಳಿದ್ದಾರೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…