ನವದೆಹಲಿ: ನ್ಯೂಜಿಲೆಂಡ್ ವಿರುದ್ಧ ಗೆಲುವು ಸಾಧಿಸಿರುವ ಹಿನ್ನಲೆಯಲ್ಲಿ ಈಗ ಪಾಕ್ ತಂಡಕ್ಕೂ ಕೂಡ ಸೆಮಿಫೈನಲ್ ತಲುಪುವ ಸಣ್ಣ ಸಾಧ್ಯತೆ ಇದೆ.
ಹಾಗಾದರೆ ಇದಕ್ಕೆ ಪಾಕಿಸ್ತಾನ ತಂಡವು ಮುಂದಿನ ಅಫ್ಘಾನಿಸ್ತಾನ ಹಾಗೂ ಬಾಂಗ್ಲಾದೇಶದ ವಿರುದ್ಧದ ಪಂದ್ಯಗಳನ್ನು ಗೆಲ್ಲಬೇಕು ಜೊತೆಗೆ ಇಂಗ್ಲೆಂಡ್ ತಂಡವು ಭಾರತ ತಂಡದ ವಿರುದ್ಧ ಸೋಲಬೇಕು ಆಗ ಪಾಕ್ ತಂಡವು 11 ಅಂಕಗಳೊಂದಿಗೆ ಸೆಮಿಫೈನಲ್ ತಲುಪಲಿದೆ ಎನ್ನಲಾಗಿದೆ. ಈ ಹಿನ್ನಲೆಯಲ್ಲಿ ಪಾಕ್ ನ ಮಾಜಿ ಆಟಗಾರ ಶೋಯಬ್ ಅಖ್ತರ್ ಭಾರತ ತಂಡವು ಪಾಕ್ ಸೆಮಿಫೈನಲ್ ತಲುಪಲು ಸಹಾಯ ಮಾಡ ಬೇಕು ಎಂದು ವಿನಂತಿಸಿಕೊಂಡಿದ್ದಾರೆ.
“ಈಗ ಭಾರತ ಸಹಾಯ ಮಾಡಿದರೆ ನಾವು ಸೆಮಿಫೈನಲ್ಗೆ ಏರಬಹುದು. ಹೇಗೆಂದರೆ, ಭಾರತ ಆತಿಥೇಯ ಇಂಗ್ಲೆಂಡ್ ವಿರುದ್ಧ ಜಯ ಸಾಧಿಸುವುದು. ಆಗ ಇಂಗ್ಲೆಂಡ್ ಹೊರಬೀಳುತ್ತದೆ. ಪಾಕ್ ಮುಂದಿನೆರಡೂ ಪಂದ್ಯಗಳನ್ನು ಗೆದ್ದರೆ ಆಗ 11 ಅಂಕವಾಗುತ್ತದೆ. 4ನೇ ಸ್ಥಾನಿಯಾಗಿ ನಾಕೌಟ್ ಪ್ರವೇಶಿಸಬಹುದು. ಹೀಗಾಗಿ ಹೇಗಾದರೂ ಇಂಗ್ಲಂಡ್ ವಿರುದ್ಧ ಗೆದ್ದು ಬನ್ನಿ…’ ಎಂದು ಭಾರತವನ್ನು ವಿನಂತಿಸಿದ್ದಾರೆ ಅಖ್ತರ್. ಯೂಟ್ಯೂಬ್ಗ ಅಪ್ಲೋಡ್ ಮಾಡಿರುವ ಈ ವೀಡಿಯೊ ಈಗ ಚರ್ಚೆಗೆ ಗ್ರಾಸವಾಗಿದೆ.
“ಪಾಕಿಸ್ಥಾನ ಕ್ಷಿಪ್ರವಾಗಿ ಚೇತರಿಸಿಕೊಂಡು ಮೇಲೆದ್ದು ಬಂದಿದೆ. ಈಗ ಭಾರತೀಯರ ಸರದಿ. ನೀವು ನಮಗೆ ಸಹಾಯ ಮಾಡಿ. ಇಂಗ್ಲಂಡನ್ನು ಸೋಲಿಸಿ. ನಾವು ನಮ್ಮ 2 ಪಂದ್ಯಗಳನ್ನು ಗೆಲ್ಲುತ್ತೇವೆ. ಸೆಮಿಫೈನಲ್ನಲ್ಲಿ ಮತ್ತೊಮ್ಮೆ ಮುಖಾಮುಖೀಯಾಗೋಣ. ಆಗ ನಿಮ್ಮನ್ನು ಸೋಲಿಸುತ್ತೇವೆ’ ಎಂದು ಅಖ್ತರ್ ಈ ವೀಡಿಯೊದಲ್ಲಿ ಹೇಳಿದ್ದಾರೆ.
ಉಡುಪಿ : ನೇರ ಸಂದರ್ಶನ ಉಡುಪಿ : ನಗರದ ಮಣಿಪಾಲದ ಮನೋಹರ್ ಭವನ್ ಹೋಟೆಲ್ ಮುಂಭಾಗದ ಮಣಿಪಾಲ್ ಪೇಮೆಂಟ್ ಐಡೆಂಟಿಟಿ…
ಚಾ.ನಗರ: ಗ್ರೈಂಡರ್ನಿಂದ ವಿದ್ಯುತ್ ಶಾಕ್ – ನಾಲ್ಕು ವರ್ಷದ ಬಾಲಕಿ ದುರ್ಮರಣ ಚಾಮರಾಜನಗರ: ಗ್ರೈಂಡರ್ನಿಂದ ವಿದ್ಯುತ್ ಶಾಕ್ ಹೊಡೆದು ನಾಲ್ಕು…
ಉಡುಪಿ : ಮತದಾರ ಪಟ್ಟಿಯ ವಿಶೇಷ ಪರಿಷ್ಕರಣೆ: ಜೂ. 23ರಿಂದ ಜಿಲ್ಲೆಯ ಮನೆಮನೆಗೆ ತೆರಳಿ ಜನಜಾಗೃತಿ: ಕೆ.ಜಯಪ್ರಕಾಶ್ ಹೆಗ್ಡೆ ಉಡುಪಿ:…
ಆರ್ಎಸ್ಎಸ್ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…
ಬೆಳ್ತಂಗಡಿ: ಎಸ್ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…
ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…