ನ್ಯೂಯಾರ್ಕ್: ಭಾರತದ ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ಹೌಡಿ ಮೋದಿಯಲ್ಲಿ ಪಾಲ್ಗೊಂಡ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಸೋಮವಾರ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.
ಯುಎಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನಿನ್ನೆ ಕೂಡ ತಾವು ಕಾಶ್ಮೀರದ ವಿಚಾರದಲ್ಲಿ ಮಧ್ಯಸ್ಥಿಕೆ ವಹಿಸುವ ಇಂಗಿತ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ಭಾರತ ಹಾಗೂ ಪಾಕಿಸ್ತಾನ ಎರಡೂ ದೇಶಗಳು ಒಪ್ಪುವುದಾದರೆ ಮಾತ್ರ ನಾನು ಕಾಶ್ಮೀರದ ವಿಚಾರದಲ್ಲಿ ಮಧ್ಯಸ್ಥಿಕೆ ವಹಿಸುವುದಾಗಿ ಪಾಕ್ ಪ್ರಧಾನಿ ಇಮ್ರಾನ್ ಖಾನ್ಗೆ ತಿಳಿಸಿದ್ದಾರೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ.
ಇಮ್ರಾನ್ ಖಾನ್ ಜತೆಗಿನ ಮಾತುಕತೆಗೂ ಮೊದಲು ಮಾಧ್ಯಮಗಳೊಂದಿಗೆ ಮಾತನಾಡಿದ ಟ್ರಂಪ್, ಕಾಶ್ಮೀರದ ವಿಚಾರದಲ್ಲಿ ಸಹಾಯ ಮಾಡಲು ನಾನು ಸಿದ್ಧನಿದ್ದೇನೆ. ಆದರೆ ನಾನು ಮಧ್ಯಸ್ಥಿಕೆ ವಹಿಸಬೇಕೋ ಬೇಡವೋ ಎಂಬುದು ನರೇಂದ್ರ ಮೋದಿ ಹಾಗೂ ಇಮ್ರಾನ್ ಖಾನ್ ಅವರ ಮೇಲೆ ಅವಲಂಬಿತವಾಗಿದೆ ಎಂದು ತಿಳಿಸಿದರು.
ನನಗೆ ಭಾರತದ ಪ್ರಧಾನಿ ಮೋದಿಯವರೊಂದಿಗೆ ಉತ್ತಮ ಬಾಂಧವ್ಯವಿದೆ. ಹಾಗೇ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಜತೆಗೂ ಉತ್ತಮ ಸ್ನೇಹವಿದೆ. ನಾನು ಮಧ್ಯಸ್ಥಿಕೆ ವಹಿಸಿದ ಯಾವುದೇ ವಿಚಾರದಲ್ಲೂ ಇದುವರೆಗೆ ವಿಫಲನಾಗಿಲ್ಲ. ಈ ಬಗ್ಗೆ ಮೊದಲೇ ಒಂದು ಬಾರಿ ತಿಳಿಸಿದ್ದೇನೆ. ಆದರೆ ಇನ್ನೊಂದು ಕಡೆಯಿಂದಲೂ ಒಪ್ಪಿಗೆ ಬೇಕು ಎಂದು ಹೇಳಿದರು.
ಮೋದಿಯವರ ಈ ಮಾತುಗಳನ್ನು ಉಲ್ಲೇಖಿಸಿ ಪ್ರತಿಕ್ರಿಯೆ ನೀಡಿದ ಟ್ರಂಪ್, ನಿನ್ನೆ ಭಾರತ ನನ್ನ ಸಮ್ಮುಖದಲ್ಲೇ ಆಕ್ರಮಣಕಾರಿ ಹೇಳಿಕೆಯನ್ನು ನೀಡಿದೆ. ಅಂಥ ಒಂದು ದೃಢ ನಿರ್ಧಾರದ ಮಾತುಗಳನ್ನು ಭಾರತದಿಂದ ನಿರೀಕ್ಷೆ ಮಾಡಿರಲಿಲ್ಲ. ಅದೂ ಪ್ರಧಾನಿಯೇ ಹೇಳುತ್ತಾರೆ ಎಂದುಕೊಂಡಿರಲಿಲ್ಲ. ಅದರಲ್ಲೂ ಅಲ್ಲಿ ನೆರೆದಿದ್ದ 50,000 ಜನರು ಆ ಮಾತುಗಳನ್ನು ಸಂಪೂರ್ಣವಾಗಿ ಒಪ್ಪಿಕೊಂಡರು ಎಂದು ಟ್ರಂಪ್ ತಿಳಿಸಿದರು.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…