Featured

ಭಾರತ ಹಾಗೂ ಪಾಕಿಸ್ತಾನ ಎರಡೂ ದೇಶಗಳು ಒಪ್ಪುವುದಾದರೆ ಮಾತ್ರ ನಾನು ಕಾಶ್ಮೀರದ ವಿಚಾರದಲ್ಲಿ ಮಧ್ಯಸ್ಥಿಕೆ ವಹಿಸಲು ಸಿದ್ಧ : ಟ್ರಂಪ್ -Vishwanews24

ನ್ಯೂಯಾರ್ಕ್​: ಭಾರತದ ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ಹೌಡಿ ಮೋದಿಯಲ್ಲಿ ಪಾಲ್ಗೊಂಡ ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್​ ಅವರು ಸೋಮವಾರ ಪಾಕಿಸ್ತಾನ ಪ್ರಧಾನಿ ಇಮ್ರಾನ್​ ಖಾನ್​ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

ಯುಎಸ್​ ಅಧ್ಯಕ್ಷ ಡೊನಾಲ್ಡ್​ ಟ್ರಂಪ್​ ನಿನ್ನೆ ಕೂಡ ತಾವು ಕಾಶ್ಮೀರದ ವಿಚಾರದಲ್ಲಿ ಮಧ್ಯಸ್ಥಿಕೆ ವಹಿಸುವ ಇಂಗಿತ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ಭಾರತ ಹಾಗೂ ಪಾಕಿಸ್ತಾನ ಎರಡೂ ದೇಶಗಳು ಒಪ್ಪುವುದಾದರೆ ಮಾತ್ರ ನಾನು ಕಾಶ್ಮೀರದ ವಿಚಾರದಲ್ಲಿ ಮಧ್ಯಸ್ಥಿಕೆ ವಹಿಸುವುದಾಗಿ ಪಾಕ್​ ಪ್ರಧಾನಿ ಇಮ್ರಾನ್​ ಖಾನ್​ಗೆ ತಿಳಿಸಿದ್ದಾರೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ.

ಇಮ್ರಾನ್​ ಖಾನ್​ ಜತೆಗಿನ ಮಾತುಕತೆಗೂ ಮೊದಲು ಮಾಧ್ಯಮಗಳೊಂದಿಗೆ ಮಾತನಾಡಿದ ಟ್ರಂಪ್​, ಕಾಶ್ಮೀರದ ವಿಚಾರದಲ್ಲಿ ಸಹಾಯ ಮಾಡಲು ನಾನು ಸಿದ್ಧನಿದ್ದೇನೆ. ಆದರೆ ನಾನು ಮಧ್ಯಸ್ಥಿಕೆ ವಹಿಸಬೇಕೋ ಬೇಡವೋ ಎಂಬುದು ನರೇಂದ್ರ ಮೋದಿ ಹಾಗೂ ಇಮ್ರಾನ್​ ಖಾನ್​ ಅವರ ಮೇಲೆ ಅವಲಂಬಿತವಾಗಿದೆ ಎಂದು ತಿಳಿಸಿದರು.

ನನಗೆ ಭಾರತದ ಪ್ರಧಾನಿ ಮೋದಿಯವರೊಂದಿಗೆ ಉತ್ತಮ ಬಾಂಧವ್ಯವಿದೆ. ಹಾಗೇ ಪಾಕಿಸ್ತಾನ ಪ್ರಧಾನಿ ಇಮ್ರಾನ್​ ಖಾನ್​ ಜತೆಗೂ ಉತ್ತಮ ಸ್ನೇಹವಿದೆ. ನಾನು ಮಧ್ಯಸ್ಥಿಕೆ ವಹಿಸಿದ ಯಾವುದೇ ವಿಚಾರದಲ್ಲೂ ಇದುವರೆಗೆ ವಿಫಲನಾಗಿಲ್ಲ. ಈ ಬಗ್ಗೆ ಮೊದಲೇ ಒಂದು ಬಾರಿ ತಿಳಿಸಿದ್ದೇನೆ. ಆದರೆ ಇನ್ನೊಂದು ಕಡೆಯಿಂದಲೂ ಒಪ್ಪಿಗೆ ಬೇಕು ಎಂದು  ಹೇಳಿದರು.

ಮೋದಿಯವರ ಈ ಮಾತುಗಳನ್ನು ಉಲ್ಲೇಖಿಸಿ ಪ್ರತಿಕ್ರಿಯೆ ನೀಡಿದ ಟ್ರಂಪ್​, ನಿನ್ನೆ ಭಾರತ ನನ್ನ ಸಮ್ಮುಖದಲ್ಲೇ ಆಕ್ರಮಣಕಾರಿ ಹೇಳಿಕೆಯನ್ನು ನೀಡಿದೆ. ಅಂಥ ಒಂದು ದೃಢ ನಿರ್ಧಾರದ ಮಾತುಗಳನ್ನು ಭಾರತದಿಂದ ನಿರೀಕ್ಷೆ ಮಾಡಿರಲಿಲ್ಲ. ಅದೂ ಪ್ರಧಾನಿಯೇ ಹೇಳುತ್ತಾರೆ ಎಂದುಕೊಂಡಿರಲಿಲ್ಲ. ಅದರಲ್ಲೂ ಅಲ್ಲಿ ನೆರೆದಿದ್ದ 50,000 ಜನರು ಆ ಮಾತುಗಳನ್ನು ಸಂಪೂರ್ಣವಾಗಿ ಒಪ್ಪಿಕೊಂಡರು ಎಂದು ಟ್ರಂಪ್​ ತಿಳಿಸಿದರು.

 

Vishwa News 24

Recent Posts

ಬೈಕಂಪಾಡಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ – vishwanews24

ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…

4 hours ago

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  – vishwanews24

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…

4 hours ago

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ – vishwanews24

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್​​ ಕಲಾಪ…

5 hours ago

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು – vishwanews24

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…

6 hours ago

ಹಿಂದೂ ಸಂಘಟನೆಗಳ ಮುಖಂಡರಿಗೆ ಜಿಲ್ಲೆ ಪ್ರವೇಶ ನಿಷೇಧ: ಉಡುಪಿ ಜಿಲ್ಲಾ ವಿಹಿಂಪ–ಬಜರಂಗದಳ ತೀವ್ರ ಖಂಡನೆ – vishwanews24

ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…

6 hours ago

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರ ಪ್ರವೇಶ ನಿರ್ಬಂಧ: ವಿಹಿಂಪ ಖಂಡನೆ – vishwanews24

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…

6 hours ago