Featured

ಭಾರತ ಹಾಗೂ ಪಾಕಿಸ್ತಾನ ಎರಡೂ ದೇಶಗಳು ಒಪ್ಪುವುದಾದರೆ ಮಾತ್ರ ನಾನು ಕಾಶ್ಮೀರದ ವಿಚಾರದಲ್ಲಿ ಮಧ್ಯಸ್ಥಿಕೆ ವಹಿಸಲು ಸಿದ್ಧ : ಟ್ರಂಪ್ -Vishwanews24

ನ್ಯೂಯಾರ್ಕ್​: ಭಾರತದ ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ಹೌಡಿ ಮೋದಿಯಲ್ಲಿ ಪಾಲ್ಗೊಂಡ ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್​ ಅವರು ಸೋಮವಾರ ಪಾಕಿಸ್ತಾನ ಪ್ರಧಾನಿ ಇಮ್ರಾನ್​ ಖಾನ್​ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

ಯುಎಸ್​ ಅಧ್ಯಕ್ಷ ಡೊನಾಲ್ಡ್​ ಟ್ರಂಪ್​ ನಿನ್ನೆ ಕೂಡ ತಾವು ಕಾಶ್ಮೀರದ ವಿಚಾರದಲ್ಲಿ ಮಧ್ಯಸ್ಥಿಕೆ ವಹಿಸುವ ಇಂಗಿತ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ಭಾರತ ಹಾಗೂ ಪಾಕಿಸ್ತಾನ ಎರಡೂ ದೇಶಗಳು ಒಪ್ಪುವುದಾದರೆ ಮಾತ್ರ ನಾನು ಕಾಶ್ಮೀರದ ವಿಚಾರದಲ್ಲಿ ಮಧ್ಯಸ್ಥಿಕೆ ವಹಿಸುವುದಾಗಿ ಪಾಕ್​ ಪ್ರಧಾನಿ ಇಮ್ರಾನ್​ ಖಾನ್​ಗೆ ತಿಳಿಸಿದ್ದಾರೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ.

ಇಮ್ರಾನ್​ ಖಾನ್​ ಜತೆಗಿನ ಮಾತುಕತೆಗೂ ಮೊದಲು ಮಾಧ್ಯಮಗಳೊಂದಿಗೆ ಮಾತನಾಡಿದ ಟ್ರಂಪ್​, ಕಾಶ್ಮೀರದ ವಿಚಾರದಲ್ಲಿ ಸಹಾಯ ಮಾಡಲು ನಾನು ಸಿದ್ಧನಿದ್ದೇನೆ. ಆದರೆ ನಾನು ಮಧ್ಯಸ್ಥಿಕೆ ವಹಿಸಬೇಕೋ ಬೇಡವೋ ಎಂಬುದು ನರೇಂದ್ರ ಮೋದಿ ಹಾಗೂ ಇಮ್ರಾನ್​ ಖಾನ್​ ಅವರ ಮೇಲೆ ಅವಲಂಬಿತವಾಗಿದೆ ಎಂದು ತಿಳಿಸಿದರು.

ನನಗೆ ಭಾರತದ ಪ್ರಧಾನಿ ಮೋದಿಯವರೊಂದಿಗೆ ಉತ್ತಮ ಬಾಂಧವ್ಯವಿದೆ. ಹಾಗೇ ಪಾಕಿಸ್ತಾನ ಪ್ರಧಾನಿ ಇಮ್ರಾನ್​ ಖಾನ್​ ಜತೆಗೂ ಉತ್ತಮ ಸ್ನೇಹವಿದೆ. ನಾನು ಮಧ್ಯಸ್ಥಿಕೆ ವಹಿಸಿದ ಯಾವುದೇ ವಿಚಾರದಲ್ಲೂ ಇದುವರೆಗೆ ವಿಫಲನಾಗಿಲ್ಲ. ಈ ಬಗ್ಗೆ ಮೊದಲೇ ಒಂದು ಬಾರಿ ತಿಳಿಸಿದ್ದೇನೆ. ಆದರೆ ಇನ್ನೊಂದು ಕಡೆಯಿಂದಲೂ ಒಪ್ಪಿಗೆ ಬೇಕು ಎಂದು  ಹೇಳಿದರು.

ಮೋದಿಯವರ ಈ ಮಾತುಗಳನ್ನು ಉಲ್ಲೇಖಿಸಿ ಪ್ರತಿಕ್ರಿಯೆ ನೀಡಿದ ಟ್ರಂಪ್​, ನಿನ್ನೆ ಭಾರತ ನನ್ನ ಸಮ್ಮುಖದಲ್ಲೇ ಆಕ್ರಮಣಕಾರಿ ಹೇಳಿಕೆಯನ್ನು ನೀಡಿದೆ. ಅಂಥ ಒಂದು ದೃಢ ನಿರ್ಧಾರದ ಮಾತುಗಳನ್ನು ಭಾರತದಿಂದ ನಿರೀಕ್ಷೆ ಮಾಡಿರಲಿಲ್ಲ. ಅದೂ ಪ್ರಧಾನಿಯೇ ಹೇಳುತ್ತಾರೆ ಎಂದುಕೊಂಡಿರಲಿಲ್ಲ. ಅದರಲ್ಲೂ ಅಲ್ಲಿ ನೆರೆದಿದ್ದ 50,000 ಜನರು ಆ ಮಾತುಗಳನ್ನು ಸಂಪೂರ್ಣವಾಗಿ ಒಪ್ಪಿಕೊಂಡರು ಎಂದು ಟ್ರಂಪ್​ ತಿಳಿಸಿದರು.

 

Vishwa News 24

Recent Posts

ಉಡುಪಿ: ಮಹಾವೀರ ಜಯಂತಿ – ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ  – vishwanews24

ಉಡುಪಿ: ಮಹಾವೀರ ಜಯಂತಿ ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ  ಮಾ.31ರ ಮಂಗಳವಾರ ಬದಲಾಗಿ ಮಾ. 30ರ ಸೋಮವಾರ ರಜೆ ಘೋಷಣೆ ಉಡುಪಿ:…

21 hours ago

ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ – vishwanews24

ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ ಬೆಂಗಳೂರು: ಮಾ.30ಕ್ಕೆ ನಡೆಯಬೇಕಿದ್ದ ಎಸ್‌ಎಸ್‌ಎಲ್‌ಸಿ ಹಿಂದಿ ಪರೀಕ್ಷೆ  ಮಾ.31ಕ್ಕೆ ಮುಂದೂಡಿಕೆ…

21 hours ago

1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮದಲ್ಲಿಈ ವರ್ಷವೂ 60 ದಿನಗಳ ವಿನಾಯಿತಿ : ಮಧು ಬಂಗಾರಪ್ಪ – vishwanews24

1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮದಲ್ಲಿಈ ವರ್ಷವೂ 60 ದಿನಗಳ ವಿನಾಯಿತಿ : ಮಧು ಬಂಗಾರಪ್ಪ ಬೆಂಗಳೂರು:…

21 hours ago

ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಆಹ್ವಾನ – vishwanews24

ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಆಹ್ವಾನ ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವರ ಸನ್ನಿಧಿಯಲ್ಲಿ…

22 hours ago

ಬಂಟ್ವಾಳ: ಯುವತಿ ನಾಪತ್ತೆ ; ಪ್ರಕರಣ ದಾಖಲು – vishwanews24

ಬಂಟ್ವಾಳ: ಯುವತಿ ನಾಪತ್ತೆ; ಪ್ರಕರಣ ದಾಖಲು ಬಂಟ್ವಾಳ: ಕೆಲಸಕ್ಕೆಂದು ಹೊರಟ ಯುವತಿ ಮನೆಗೆ ಮರಳದೇ ನಾಪತ್ತೆಯಾಗಿರುವ ಘಟನೆ ಬಂಟ್ವಾಳ ತಾಲೂಕಿನ…

22 hours ago

ಉಡುಪಿ : ಗ್ಯಾರಂಟಿ ಯೋಜನೆಗಳಿಂದ ಜನ ಸಾಮಾನ್ಯರಿಗೆ ಸಾಕಷ್ಟು ಅನುಕೂಲ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ – vishwanews24

 ಎರಡು ಕ್ಷೇತ್ರಗಳಲ್ಲೂ ಕಾಂಗ್ರೆಸ್‌ ಅಭ್ಯರ್ಥಿಗಳಿಗೆ ಜಯ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಉಡುಪಿ: ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಎರಡೂ…

23 hours ago