ಹೈದರಾಬಾದ್: ಕೇಂದ್ರದಲ್ಲಿ ಮುಂದೆ ಹಿಂದು ಸರ್ಕಾರವನ್ನು ತರಬೇಕು ಎನ್ನುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿಕೆ, ಕೇವಲ ಚುನಾವಣಾ ತಂತ್ರವಾಗಿದೆ ಎಂದು ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ, ಕಾಂಗ್ರೆಸ್ ವಿರುದ್ಧವಾಗಿ ಟ್ವೀಟ್ ಮಾಡಿ ಕಿಡಿಕಾರಿದ್ದಾರೆ.
ಟ್ವೀಟ್ನಲ್ಲಿ ಏನಿದೆ?: ಭಾರತ ಹಿಂದುಗಳಿಗೆ ಮಾತ್ರ ಸೇರಿದ್ದಲ್ಲ, ಎಲ್ಲಾ ಭಾರತೀಯರಿಗೆ ಸೇರಿದ್ದಾಗಿದೆ. ದೇಶದಲ್ಲಿ ಎಲ್ಲಾ ಧರ್ಮದ ಜನರು ನೆಲೆಸಿದ್ದಾರೆ. ಕೇಂದ್ರದಲ್ಲಿ ಮುಂದೆ ಹಿಂದು ಸರ್ಕಾರವನ್ನು ತರಬೇಕು ಎಂಬ ರಾಹುಲ್ ಗಾಂಧಿ ಹೇಳಿಕೆ ಕೇವಲ ಚುನಾವಣಾ ತಂತ್ರವಾಗಿದೆ ಎಂದು ಟ್ವೀಟ್ ಮಡಿದ್ದಾರೆ.
ರಾಜಸ್ಥಾನದ ಜೈಪುರದಲ್ಲಿ ಬೆಲೆ ಏರಿಕೆ ವಿರುದ್ಧ ನಡೆಯುತ್ತಿದ್ದ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ದೇಶದಲ್ಲಿ ಎರಡು ಪದಗಳಾದ ಹಿಂದೂ ಮತ್ತು ಹಿಂದುತ್ವದ ಬಗ್ಗೆ ಘರ್ಷಣೆ ನಡೆಯುತ್ತಿದೆ. ಇದು ಒಂದು ಪದವಲ್ಲ. ಈ ಎರಡೂ ಪದಗಳಿಗೂ ಬೇರೆ ಬೇರೆ ಅರ್ಥವಿದೆ. ನಾನು ಹಿಂದೂ ಆದರೆ ಹಿಂದುತ್ವವಾದಿ ಅಲ್ಲ. ಹಿಂದೂ ಸತ್ಯವನ್ನು ಹುಡುಕುವ ಕೆಲಸ ಮಾಡುತ್ತದೆ ಎಂದಿದ್ದರು.
ಹಿಂದುತ್ವವಾದಿ ಅಧಿಕಾರವನ್ನು ಹುಡುಕುವ ಕಾರ್ಯವನ್ನು ಮಾಡುತ್ತದೆ. ಹಾಗಾಗಿ ನಾನೂ ಹಿಂದೂ. ದೇಶದಲ್ಲಿ ಹಿಂದುತ್ವವಾದಿಗಳ ಸರ್ಕಾರವಿದೆ ಹೊರತು ಹಿಂದುಗಳ ಸರ್ಕಾರವಲ್ಲ. ಮುಂದಿನ ಚುನಾವಣೆಯಲ್ಲಿ ಹಿಂದುತ್ವವಾದಿಗಳ ಕಿತ್ತೊಗೆದು ಹಿಂದುಗಳ ಸರ್ಕಾರ ತರಬೇಕು ಈ ಹೇಳಿಕೆ ವಿಚಾರವಾಗಿ ಓವೈಸಿ ಅವರ ಟೀಕಿಸಿ ಟ್ವೀಟ್ ಮಾಡಿದ್ದಾರೆ.
ಉಡುಪಿ : ಹಣಕಾಸಿನ ವಿಚಾರದಲ್ಲಿ ವೈಮನಸ್ಸು ಡೇವಿಡ್ ಡಿಸೋಜ ಹತ್ಯೆಗೆ ಕಾರಣ; ತನಿಖೆಯಿಂದ ಬಯಲು ಉಡುಪಿ: ಮುದರಂಗಡಿ ಗ್ರಾ.ಪಂ ಮಾಜಿ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ: ಮೂವರು ಆರೋಪಿಗಳ ಬಂಧನ ಉಡುಪಿ: ಮುದರಂಗಡಿಯಲ್ಲಿ ಉದ್ಯಮಿ ಹಾಗೂ ಕಾಂಗ್ರೆಸ್ ಮುಖಂಡ ಡೇವಿಡ್…
ಹಿಮಾಚಲ ಪ್ರದೇಶದಲ್ಲಿ ಭೀಕರ ರಸ್ತೆ ದುರಂತ ; ಕಂದಕಕ್ಕೆ ಉರುಳಿದ ಖಾಸಗಿ ಬಸ್, 7 ಮಂದಿ ಮೃತ್ಯು ಶಿಮ್ಲಾ :…
ಗೃಹಲಕ್ಷ್ಮಿ 32ನೇ ಕಂತಿನ ಹಣ 2443 ಕೋಟಿ ರೂ. ಬಿಡುಗಡೆ ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಡಿ 32ನೇ ಕಂತಿನ ಹಣ ಬಿಡುಗಡೆಯಾಗಿದೆ.…
ನನ್ನ ಅವಶ್ಯಕತೆ ಇರಲಿಲ್ಲವೇನೋ ಅದಕ್ಕೆ ಕೊನೆ ಕ್ಷಣದಲ್ಲಿ ಕೈಬಿಟ್ಟರು: ಮಂಕಾಳ ವೈದ್ಯ ಅಸಮಾಧಾನ ಮೈಸೂರು: ನನ್ನ ಅವಶ್ಯಕತೆ ಇರಲಿಲ್ಲವೇನೋ ?…
ಶಿರ್ವ: ರಸ್ತೆ ದಾಟಲು ನಿಂತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ; ಸವಾರ ಸಾವು ಶಿರ್ವ : ರಸ್ತೆ ದಾಟಲು ನಿಂತಿದ್ದ…