ಹೈದರಾಬಾದ್: ಕೇಂದ್ರದಲ್ಲಿ ಮುಂದೆ ಹಿಂದು ಸರ್ಕಾರವನ್ನು ತರಬೇಕು ಎನ್ನುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿಕೆ, ಕೇವಲ ಚುನಾವಣಾ ತಂತ್ರವಾಗಿದೆ ಎಂದು ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ, ಕಾಂಗ್ರೆಸ್ ವಿರುದ್ಧವಾಗಿ ಟ್ವೀಟ್ ಮಾಡಿ ಕಿಡಿಕಾರಿದ್ದಾರೆ.
ಟ್ವೀಟ್ನಲ್ಲಿ ಏನಿದೆ?: ಭಾರತ ಹಿಂದುಗಳಿಗೆ ಮಾತ್ರ ಸೇರಿದ್ದಲ್ಲ, ಎಲ್ಲಾ ಭಾರತೀಯರಿಗೆ ಸೇರಿದ್ದಾಗಿದೆ. ದೇಶದಲ್ಲಿ ಎಲ್ಲಾ ಧರ್ಮದ ಜನರು ನೆಲೆಸಿದ್ದಾರೆ. ಕೇಂದ್ರದಲ್ಲಿ ಮುಂದೆ ಹಿಂದು ಸರ್ಕಾರವನ್ನು ತರಬೇಕು ಎಂಬ ರಾಹುಲ್ ಗಾಂಧಿ ಹೇಳಿಕೆ ಕೇವಲ ಚುನಾವಣಾ ತಂತ್ರವಾಗಿದೆ ಎಂದು ಟ್ವೀಟ್ ಮಡಿದ್ದಾರೆ.
ರಾಜಸ್ಥಾನದ ಜೈಪುರದಲ್ಲಿ ಬೆಲೆ ಏರಿಕೆ ವಿರುದ್ಧ ನಡೆಯುತ್ತಿದ್ದ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ದೇಶದಲ್ಲಿ ಎರಡು ಪದಗಳಾದ ಹಿಂದೂ ಮತ್ತು ಹಿಂದುತ್ವದ ಬಗ್ಗೆ ಘರ್ಷಣೆ ನಡೆಯುತ್ತಿದೆ. ಇದು ಒಂದು ಪದವಲ್ಲ. ಈ ಎರಡೂ ಪದಗಳಿಗೂ ಬೇರೆ ಬೇರೆ ಅರ್ಥವಿದೆ. ನಾನು ಹಿಂದೂ ಆದರೆ ಹಿಂದುತ್ವವಾದಿ ಅಲ್ಲ. ಹಿಂದೂ ಸತ್ಯವನ್ನು ಹುಡುಕುವ ಕೆಲಸ ಮಾಡುತ್ತದೆ ಎಂದಿದ್ದರು.
ಹಿಂದುತ್ವವಾದಿ ಅಧಿಕಾರವನ್ನು ಹುಡುಕುವ ಕಾರ್ಯವನ್ನು ಮಾಡುತ್ತದೆ. ಹಾಗಾಗಿ ನಾನೂ ಹಿಂದೂ. ದೇಶದಲ್ಲಿ ಹಿಂದುತ್ವವಾದಿಗಳ ಸರ್ಕಾರವಿದೆ ಹೊರತು ಹಿಂದುಗಳ ಸರ್ಕಾರವಲ್ಲ. ಮುಂದಿನ ಚುನಾವಣೆಯಲ್ಲಿ ಹಿಂದುತ್ವವಾದಿಗಳ ಕಿತ್ತೊಗೆದು ಹಿಂದುಗಳ ಸರ್ಕಾರ ತರಬೇಕು ಈ ಹೇಳಿಕೆ ವಿಚಾರವಾಗಿ ಓವೈಸಿ ಅವರ ಟೀಕಿಸಿ ಟ್ವೀಟ್ ಮಾಡಿದ್ದಾರೆ.
ಪಡುಬಿದ್ರಿ ಮಹಾಗಣಪತಿ ದೇವಸ್ಥಾನದ ಬ್ರಹ್ಮಕಲಶೋತ್ಸವ : ಪೂರ್ವಭಾವಿ ಸಭೆ ಪಡುಬಿದ್ರಿ: ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವರ ಬ್ರಹ್ಮಕಲಾಶೋತ್ಸವದ ಪ್ರಯುಕ್ತ…
ಯಾದಗಿರಿ: ಬಸ್- ಕಾರು ಮಧ್ಯೆ ಭೀಕರ ಅಪಘಾತ; 6 ಮಂದಿ ಸಜೀವ ದಹನ ಸುರಪುರ : ಬಸ್ ಮತ್ತು ಕಾರಿನ…
ಚಿಕನ್ ಪ್ರಿಯರೇ ಎಚ್ಚರ : ರಾಜ್ಯಕ್ಕೆ ಕಾಲಿಟ್ಟ ಹಕ್ಕಿ ಜ್ವರ ಬೆಂಗಳೂರು: ಚಿಕನ್ ಪ್ರಿಯರೇ ಎಚ್ಚರವಾಗೀರಿ. ರಾಜ್ಯಕ್ಕೆ H5N1 ವೈರಸ್…
ಕಾಪು : ಕಾರು-ಲಾರಿ ಮಧ್ಯೆ ಭೀಕರ ಸ್ತೆ ಅಪಘಾತ - ಓರ್ವ ಸಾವು, ಇಬ್ಬರು ಗಂಭೀರ ಕಾಪು: ಮಂಗಳೂರು-ಉಡುಪಿ ರಾಷ್ಟ್ರೀಯ…
ಯೋಗೀಶ್ ಗೌಡ ಕೊಲೆ ಪ್ರಕರಣ: ವಿನಯ್ ಕುಲಕರ್ಣಿಗೆ ನಾಳೆ ಶಿಕ್ಷೆ ಪ್ರಕಟ ಬೆಂಗಳೂರು: ಬಿಜೆಪಿ ಮುಖಂಡ ಯೋಗೇಶ್ ಗೌಡ ಹತ್ಯೆ…
ಕಾಂಗ್ರೆಸ್ನಲ್ಲಿ ಸಂಪುಟ ಸಚಿವ ಸ್ಥಾನಕ್ಕಾಗಿ ಕಸರತ್ತು: 12 ಶಾಸಕರಿಂದ ದೆಹಲಿಯಲ್ಲಿ ಸುರ್ಜೇವಾಲ ಭೇಟಿ ನವದೆಹಲಿ: ಸಚಿವ ಸಂಪುಟ ಪುನಾರಚನೆ ಮಾಡುವಂತೆ…