Featured

ಭಾರಿ ಬಹುಮತದಿಂದ ಬಿಜೆಪಿ ಮರಳಿ ಅಧಿಕಾರಕ್ಕೆ ; ಇನ್ನೂ50 ವರ್ಷ ಭಾರತವನ್ನು ಆಳಲಿದೆ; ಅದನ್ನು ತಡೆಯುವ ಶಕ್ತಿ ಯಾರಿಗೂ ಇಲ್ಲ : ಅಮಿತ್‌ ಶಾ

ನವದೆಹಲಿ: ಬಿಜೆಪಿ ಇನ್ನೂ 50 ವರ್ಷ ಭಾರತವನ್ನು ಆಳಲಿದೆ. ಅದನ್ನು ತಡೆಯುವ ಶಕ್ತಿ ಯಾರಿಗೂ ಇಲ್ಲ ಎಂದು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಅವರು ಹೇಳಿದ್ದಾರೆ. 2019ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸುವುದು ಹಗಲುಗನಸು. ಭಾರಿ ಬಹುಮತದೊಂದಿಗೆ ಪಕ್ಷವು ಮರಳಿ ಅಧಿಕಾರಕ್ಕೆ ಬರಲಿದೆ. ಅದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

2022ರ ವೇಳೆಗೆ ನವ ಭಾರತ ನಿರ್ಮಾಣ ಮಾಡುವ ತನ್ನ ವಚನಕ್ಕೆ ಪಕ್ಷ ಬದ್ಧವಾಗಿರುವುದಾಗಿ ರಾಷ್ಟ್ರೀಯ ಕಾರ್ಯಕಾರಿಣಿ ರಾಜಕೀಯ ನಿರ್ಣಯ ಕೈಗೊಂಡಿದೆ. ಬಡತನ, ಹಸಿವು, ಭ್ರಷ್ಟಾಚಾರ, ಜಾತೀಯತೆ, ಕೋಮುವಾದ ಮತ್ತು ಭಯೋತ್ಪಾದನೆ ಮುಕ್ತವಾದ ‘ನವ ಭಾರತ ನಿರ್ಮಾಣ’ ನಮ್ಮ ಗುರಿ ಎಂದು ಹೇಳಿದ್ದಾರೆ.

ಅಜೇಯ ಭಾರತ, ಅಟಲ್‌ ಭಾಜಪ : ಮುಂಬರುವ ಲೋಕಸಭಾ ಚುನಾವಣೆಗಾಗಿ ಬಿಜೆಪಿ ‘ಅಜೇಯ ಭಾರತ, ಅಟಲ್‌ ಭಾಜಪ’ ಎಂಬ ಹೊಸ ಮಂತ್ರ ಜಪಿಸಿದೆ. ಎರಡನೇ ದಿನದ ಕಾರ್ಯಕಾರಿಣಿಯಲ್ಲಿ ಪ್ರಧಾನಿ ಮೋದಿ ಅವರು ಈ ಹೊಸ ಘೋಷಣೆ ಹುಟ್ಟು ಹಾಕಿದ್ದಾರೆ.

ಮೊದಲ ದಿನದ ಕಾರ್ಯಕಾರಿಣಿಯಲ್ಲಿ ‘ಅಜೇಯ ಬಿಜೆಪಿ’ ಎಂಬ ಧ್ಯೇಯವಾಕ್ಯವನ್ನು ಘೋಷಿಸಲಾಗಿತ್ತು. ಅದಕ್ಕೆ ಮಾಜಿ ಪ್ರಧಾನಿ ಅಟಲ್‌ ಬಿಹಾರಿ ವಾಜಪೇಯಿ ಅವರ ಹೆಸರು ಸೇರಿಸುವ ಮೂಲಕ ಮೋದಿ ಅವರು ಧ್ಯೇಯವಾಕ್ಯವನ್ನು ಸ್ವಲ್ಪ ಮಾರ್ಪಾಡು ಮಾಡಿದ್ದಾರೆ. ಮುಂದಿನ ಚುನಾವಣೆಯಲ್ಲಿ ಮತ್ತೆ ವಾಜಪೇಯಿ ಅವರ ಹೆಸರಿಗೆ ಮೊರೆ ಹೊಗುವ ಸುಳಿವನ್ನು ಬಿಜೆಪಿ ನೀಡಿದೆ.

ನವ ಭಾರತ ನಿರ್ಮಾಣ: 2022ರ ವೇಳೆಗೆ ನವ ಭಾರತ ನಿರ್ಮಾಣ ಮಾಡುವ ತನ್ನ ವಚನಕ್ಕೆ ಬದ್ಧವಾಗಿರುವುದಾಗಿ ರಾಷ್ಟ್ರೀಯ ಕಾರ್ಯಕಾರಿಣಿ ರಾಜಕೀಯ ನಿರ್ಣಯ ಕೈಗೊಂಡಿದೆ.ಬಡತನ, ಹಸಿವು, ಭ್ರಷ್ಟಾಚಾರ, ಜಾತೀಯತೆ, ಕೋಮುವಾದ ಮತ್ತು ಭಯೋತ್ಪಾದನೆ ಮುಕ್ತವಾದ ‘ನವ ಭಾರತ ನಿರ್ಮಾಣ’ ತನ್ನ ಕನಸು ಎಂದು ಬಿಜೆಪಿ ಪುನರುಚ್ಚರಿಸಿದೆ.

ಪೆಟ್ರೋಲ್‌, ಡೀಸೆಲ್‌ ದರ ಹೆಚ್ಚಳ, ಕುಸಿಯುತ್ತಿರುವ ರೂಪಾಯಿ ಮೌಲ್ಯ, ಹೆಚ್ಚುತ್ತಿರುವ ನಿರುದ್ಯೋಗ, ರಫೇಲ್‌ ಯುದ್ಧ ವಿಮಾನ ಹಗರಣದಂತಹ ಜ್ವಲಂತ ಸಮಸ್ಯೆಗಳ ಬಗ್ಗೆ ಬಿಜೆಪಿ ಕಾರ್ಯಕಾರಿಣಿಯಲ್ಲಿ ಪ್ರಸ್ತಾಪವಾಗದಿರುವುದು ಆಶ್ಚರ್ಯ ಮೂಡಿಸಿದೆ ಎಂದು ಕಾಂಗ್ರೆಸ್‌ ಪ್ರತಿಕ್ರಿಯಿಸಿದೆ. ಬಿಜೆಪಿ ಕಾರ್ಯಕಾರಿಣಿಯಲ್ಲಿ ಒಣ ಘೋಷಣೆಗಳು ಮಾತ್ರ ಕೇಳಿ ಬರುತ್ತಿವೆ.

ದೇಶ ಮತ್ತು ಜನರನ್ನು ಬಾಧಿಸುತ್ತಿರುವ ಸಮಸ್ಯೆಗಳ ಬಗ್ಗೆ ಚರ್ಚೆಯಾಗದಿರುವುದು ವಿಷಾದನೀಯ ಎಂದು ಕಾಂಗ್ರೆಸ್‌ ವಕ್ತಾರ ಅಜಯ್‌ ಮಾಕನ್‌ ವಾಗ್ದಾಳಿ ನಡೆಸಿದ್ದಾರೆ. ಪೆಟ್ರೋಲ್‌, ಡೀಸೆಲ್‌ ದರ ಏರಿಕೆ, ರಫೇಲ್‌ ಯುದ್ಧ ವಿಮಾನ ಖರೀದಿ ಹಗರಣಗಳ ಕುರಿತು ಕೇಳಿದ ಪ್ರಶ್ನೆಗೆ ಸಚಿವರಾದ ಜಾವಡೇಕರ್‌, ರವಿಶಂಕರ್‌ ಪ್ರಸಾದ್‌ ಅವರು ಉತ್ತರಿಸದೆ ನುಣುಚಿಕೊಂಡಿದ್ದಾರೆ ಎಂದು ಅವರು ಲೇವಡಿ ಮಾಡಿದ್ದಾರೆ.

ನಮಗೆ ಅಧಿಕಾರ ಆಸೆಯಾಗಲಿ, ದಾಹವಾಗಲಿ ಇಲ್ಲ. ಕುರ್ಚಿಯ ವ್ಯಾಮೋಹ ಕೂಡ ಇಲ್ಲ. ದೇಶ ಮತ್ತು ಜನರಿಗಾಗಿ ಕೆಲಸ ಮಾಡಲು ಅಧಿಕಾರ ಬೇಕು. ಅದಕ್ಕೆ ನಮಗೆ ಜನ ಅವಕಾಶ ನೀಡಿದ್ದಾರೆ. ಆ ನಂಬಿಕೆಯಿಂದ ಕೊಟ್ಟ ಅಧಿಕಾರವನ್ನ ಹುಸಿಗೊಳಿಸಬಾರದು  :  ನರೇಂದ್ರ ಮೋದಿ, ಪ್ರಧಾನಿ 

 

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

11 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

11 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

12 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

12 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

13 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

13 hours ago