ಅನಂತಪುರ: ಭಾರಿ ಮಳೆಯಿಂದಾಗಿ ಭಾರಿ ಪ್ರವಾಹಕ್ಕೆ ಸಿಲುಕಿರುವ ಆಂಧ್ರ ಪ್ರದೇಶದಲ್ಲಿ ಮಳೆಯಿಂದಾಗಿ ಸಂಭವಿಸಿದ ಅವಘಡಗಳಲ್ಲಿ ಸಾವನ್ನಪ್ಪಿದವರ ಸಂಖ್ಯೆ ಯಾಗಿದ್ದು, ಇನ್ನೂ ನೂರಾರು ಮಂದಿ ನಾಪತ್ತೆಯಾಗಿದ್ದಾರೆ.
ದಕ್ಷಿಣ ಆಂಧ್ರ ಪ್ರದೇಶದ ರಾಯಲಸೀಮ ಪ್ರಾಂತ್ಯದಲ್ಲಿ ಪ್ರವಾಹ ಹೆಚ್ಚಾಗಿದ್ದು, ಅನಂತಪುರ, ತಿರುಪತಿ, ಚಿತ್ತೂರಿನಲ್ಲಿ ಭಾರಿ ಮಳೆ ಮತ್ತು ಪ್ರವಾಹ ಮುಂದುವರೆದಿದೆ. ರಾಯಲಸೀಮಾ ಪ್ರದೇಶವು ಹೆಚ್ಚು ಹಾನಿಗೊಳಗಾಗಿದೆ. ರಾಜ್ಯದ ಚಿತ್ತೂರು, ಕಡಪ, ಕರ್ನೂಲು ಮತ್ತು ಅನಂತಪುರ ಜಿಲ್ಲೆಗಳು ಹಾನಿಗೀಡಾಗಿವೆ. ಗುರುವಾರದಿಂದ ಮಳೆ ಎಡೆಬಿಡದೆ ಸುರಿಯುತ್ತಿದ್ದು ಪರಿಣಾಮ ಚೆಯ್ಯೂರು ನದಿ ತುಂಬಿ ಹರಿಯುತ್ತಿದೆ. ಅನ್ನಮಯ್ಯ ನೀರಾವರಿ ಯೋಜನೆಗೂ ಪ್ರವಾಹದಿಂದ ಹಾನಿಯಾಗಿದೆ. ಮುಂಜಾಗ್ರತಾ ಕ್ರಮವಾಗಿ ಕಡಪ ವಿಮಾನ ನಿಲ್ದಾಣವನ್ನು ನವೆಂಬರ್ 25 ರವರೆಗೆ ಮುಚ್ಚಲಾಗಿದೆ.
ತಿರುಪತಿಯಲ್ಲಿ ಪ್ರವಾಹ ಮುಂದುವರೆದಿದ್ದು, ಮುಂಜಾಗ್ರತಾ ಕ್ರಮವಾಗಿ ತಿರುಮಲಕ್ಕೆ ಸಂಪರ್ಕ ಕಲ್ಪಿಸುವ ಘಾಟ್ ರಸ್ತೆಗಳನ್ನು ಮುಚ್ಚಲಾಗಿದೆ. ಅಲ್ಲದೆ ತಿರುಮಲ ನಡಿಗೆ ಮಾರ್ಗವನ್ನೂ ಬಂದ್ ಮಾಡಲಾಗಿದ್ದು, ಯಾತ್ರಿಕರ ಪ್ರವೇಶವನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ. ಮಳೆಯಿಂದಾಗಿ ತಿರುಪತಿ ಹೊರವಲಯದ ಸ್ವರ್ಣಮುಖಿ ನದಿಗೆ ಅಪಾರ ಪ್ರಮಾಣದ ನೀರು ಹರಿದುಬರುತ್ತಿದ್ದು, ಜಲಾಶಯಗಳು ತುಂಬಿ ಹರಿಯುತ್ತಿವೆ. ಪ್ರವಾಹದಲ್ಲಿ ಸಾಕಷ್ಟು ಮಂದಿ ಸಿಲುಕಿರುವ ಬಗ್ಗೆ ವರದಿಯಾಗಿದ್ದು, ಹಲವರು ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದಾರೆ ಎನ್ನಲಾಗಿದೆ. ಅಲ್ಲದೆ ದನಕರುಗಳೂ ಕೂಡ ಪ್ರವಾಹದಲ್ಲಿ ಕೊಚ್ಚಿ ಹೋಗಿವೆ ಎನ್ನಲಾಗಿದೆ.
ಕಾರವಾರ : ವೀರ ಯೋಧ ಹುತಾತ್ಮ ವಿನೋದ ನಾಯಕ್ ಅವರ 21ನೇ ಪುಣ್ಯತಿಥಿ ಹಾಗೂ ಸ್ಮಾರಕಕ್ಕೆ ನೂತನ ಕಾಂಪೌಂಡ್ ಗೋಡೆ…
ಕಾನ್ಪುರದಲ್ಲಿ ಖಾಸಗಿ ತರಬೇತಿ ವಿಮಾನ ಅಪಘಾತ: ಉಡುಪಿ ಮೂಲದ ಪೈಲಟ್ ಸಾವು ಉಡುಪಿ: ಉತ್ತರ ಪ್ರದೇಶದ ಕಾನ್ಪುರದಲ್ಲಿ ಆಗಸ್ಟ್ 27ರಂದು…
ಅಮೆರಿಕದ ಪ್ರತಿಷ್ಠಿತ ಗ್ರ್ಯಾಂಡ್ ಚೆಸ್ ಟೂರ್ ಗೆದ್ದು ಇತಿಹಾಸ ನಿರ್ಮಿಸಿದ ಪ್ರಜ್ಞಾನಂದ ವಾಷಿಂಗ್ಟನ್: ಭಾರತದ ಯುವ ಗ್ರ್ಯಾಂಡ್ಮಾಸ್ಟರ್ ಆರ್. ಪ್ರಜ್ಞಾನಂದ…
ಮೈಸೂರು ದಸರಾಕ್ಕೆ ಅದ್ದೂರಿ ಸಿದ್ಧತೆ : ಅರಮನೆ ಪ್ರವೇಶಿಸಿದ ಗಜಪಡೆಗೆ ಭರ್ಜರಿ ಸ್ವಾಗತ ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ…
ಕುಂದಾಪುರ : ಗಂಗೊಳ್ಳಿ ಸಮುದ್ರದಲ್ಲಿ ಮುಳುಗಿದ್ದ ದೋಣಿಯ ಅವಶೇಷ ಪತ್ತೆ ಕುಂದಾಪುರ : ಗಂಗೊಳ್ಳಿ ನದೀಮುಖದ ಬಳಿ ಬುಧವಾರ ಸಮುದ್ರದಲ್ಲಿ…
2019 – 2023ರ ವರೆಗೆ ಮುಡಾದಿಂದ ಹಂಚಿಕೆಯಾದ ಎಲ್ಲಾ 50:50 ಸೈಟುಗಳು ರದ್ದು .. ಅಕ್ರಮ ನಡೆದಿದ್ದರೆ 2018ರ ಹಿಂದೆ…