ಅನಂತಪುರ: ಭಾರಿ ಮಳೆಯಿಂದಾಗಿ ಭಾರಿ ಪ್ರವಾಹಕ್ಕೆ ಸಿಲುಕಿರುವ ಆಂಧ್ರ ಪ್ರದೇಶದಲ್ಲಿ ಮಳೆಯಿಂದಾಗಿ ಸಂಭವಿಸಿದ ಅವಘಡಗಳಲ್ಲಿ ಸಾವನ್ನಪ್ಪಿದವರ ಸಂಖ್ಯೆ ಯಾಗಿದ್ದು, ಇನ್ನೂ ನೂರಾರು ಮಂದಿ ನಾಪತ್ತೆಯಾಗಿದ್ದಾರೆ.
ದಕ್ಷಿಣ ಆಂಧ್ರ ಪ್ರದೇಶದ ರಾಯಲಸೀಮ ಪ್ರಾಂತ್ಯದಲ್ಲಿ ಪ್ರವಾಹ ಹೆಚ್ಚಾಗಿದ್ದು, ಅನಂತಪುರ, ತಿರುಪತಿ, ಚಿತ್ತೂರಿನಲ್ಲಿ ಭಾರಿ ಮಳೆ ಮತ್ತು ಪ್ರವಾಹ ಮುಂದುವರೆದಿದೆ. ರಾಯಲಸೀಮಾ ಪ್ರದೇಶವು ಹೆಚ್ಚು ಹಾನಿಗೊಳಗಾಗಿದೆ. ರಾಜ್ಯದ ಚಿತ್ತೂರು, ಕಡಪ, ಕರ್ನೂಲು ಮತ್ತು ಅನಂತಪುರ ಜಿಲ್ಲೆಗಳು ಹಾನಿಗೀಡಾಗಿವೆ. ಗುರುವಾರದಿಂದ ಮಳೆ ಎಡೆಬಿಡದೆ ಸುರಿಯುತ್ತಿದ್ದು ಪರಿಣಾಮ ಚೆಯ್ಯೂರು ನದಿ ತುಂಬಿ ಹರಿಯುತ್ತಿದೆ. ಅನ್ನಮಯ್ಯ ನೀರಾವರಿ ಯೋಜನೆಗೂ ಪ್ರವಾಹದಿಂದ ಹಾನಿಯಾಗಿದೆ. ಮುಂಜಾಗ್ರತಾ ಕ್ರಮವಾಗಿ ಕಡಪ ವಿಮಾನ ನಿಲ್ದಾಣವನ್ನು ನವೆಂಬರ್ 25 ರವರೆಗೆ ಮುಚ್ಚಲಾಗಿದೆ.
ತಿರುಪತಿಯಲ್ಲಿ ಪ್ರವಾಹ ಮುಂದುವರೆದಿದ್ದು, ಮುಂಜಾಗ್ರತಾ ಕ್ರಮವಾಗಿ ತಿರುಮಲಕ್ಕೆ ಸಂಪರ್ಕ ಕಲ್ಪಿಸುವ ಘಾಟ್ ರಸ್ತೆಗಳನ್ನು ಮುಚ್ಚಲಾಗಿದೆ. ಅಲ್ಲದೆ ತಿರುಮಲ ನಡಿಗೆ ಮಾರ್ಗವನ್ನೂ ಬಂದ್ ಮಾಡಲಾಗಿದ್ದು, ಯಾತ್ರಿಕರ ಪ್ರವೇಶವನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ. ಮಳೆಯಿಂದಾಗಿ ತಿರುಪತಿ ಹೊರವಲಯದ ಸ್ವರ್ಣಮುಖಿ ನದಿಗೆ ಅಪಾರ ಪ್ರಮಾಣದ ನೀರು ಹರಿದುಬರುತ್ತಿದ್ದು, ಜಲಾಶಯಗಳು ತುಂಬಿ ಹರಿಯುತ್ತಿವೆ. ಪ್ರವಾಹದಲ್ಲಿ ಸಾಕಷ್ಟು ಮಂದಿ ಸಿಲುಕಿರುವ ಬಗ್ಗೆ ವರದಿಯಾಗಿದ್ದು, ಹಲವರು ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದಾರೆ ಎನ್ನಲಾಗಿದೆ. ಅಲ್ಲದೆ ದನಕರುಗಳೂ ಕೂಡ ಪ್ರವಾಹದಲ್ಲಿ ಕೊಚ್ಚಿ ಹೋಗಿವೆ ಎನ್ನಲಾಗಿದೆ.
ಏರ್ ಕಂಡಿಷನರ್ ಸ್ಪೋಟಗೊಳ್ಳುತ್ತದೆ ಎಂಬುದು ತಪ್ಪು ಕಲ್ಪನೆ.. ಏಸಿಯಲ್ಲಿ ಇರುವ ಗ್ಯಾಸ್ಗೆ ಯಾವುದೇ ರೀತಿಯಲ್ಲೂ ಬೆಂಕಿ ಹಿಡಿಯಲ್ಲ.. ಕರಾವಳಿಗೆ ಕೂಲರ್ಗಿಂದ…
ಕೌಟುಂಬಿಕ ಕಲಹ : ಕೊಲೆಯಲ್ಲಿ ಅಂತ್ಯ - ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ ಮೈಸೂರು: ಸಣ್ಣ…
ಲಡಾಖ್ನಲ್ಲಿ 4.1 ತೀವ್ರತೆಯ ಭೂಕಂಪ ಲೇಹ್: ಗುರುವಾರ ಮುಂಜಾನೆ ಲಡಾಖ್ನಲ್ಲಿ4.1 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ…
ಬೆಂಗಳೂರಲ್ಲಿ ವರುಣನ ಆರ್ಭಟ : ಮೇ 1ರವರೆಗೂ ಮಳೆ ಮುನ್ಸೂಚನೆ ಬೆಂಗಳೂರು: ಬುಧವಾರ ಬೆಂಗಳೂರಿನಾದ್ಯಂತ ಸುರಿದ ಆಲಿಕಲ್ಲು ಮಳೆಗೆ 10…
ಹಾಸನ: ಪ್ರೀ ವೆಡ್ಡಿಂಗ್ ಫೋಟೋ ಶೂಟ್ಗೆ ವಧು ಕರೆತರಲು ತೆರಳುತ್ತಿದ್ದ ವೇಳೆ ಅಪಘಾತ ; ವರ ಸಾವು ಹಾಸನ: ಕೆಲವೇ…
ಪುತ್ತೂರು: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸವಾರ ಸಾವು, ಯುವತಿಗೆ ಗಂಭೀರ ಗಾಯ ಪುತ್ತೂರು: ಉಪ್ಪಿನಂಗಡಿಯ ಬಜತ್ತೂರು ಗ್ರಾಮದ ನೀರಕಟ್ಟೆ…