Featured

ಭಾರಿ ಮಳೆ ಪ್ರವಾಹಕ್ಕೆ ತತ್ತರಿಸಿದ ಆಂಧ್ರ ಪ್ರದೇಶ ;  ಸಾವಿನ ಸಂಖ್ಯೆ 23ಕ್ಕೆ ಏರಿಕೆ, ನೂರಾರು ಮಂದಿ  ನಾಪತ್ತೆ – Vishwanews24

ಭಾರಿ ಮಳೆ ಪ್ರವಾಹಕ್ಕೆ ತತ್ತರಿಸಿದ ಆಂಧ್ರ ಪ್ರದೇಶ ;  ಸಾವಿನ ಸಂಖ್ಯೆ 23ಕ್ಕೆ ಏರಿಕೆ, ನೂರಾರು ಮಂದಿ  ನಾಪತ್ತೆ – Vishwanews24

ಅನಂತಪುರ: ಭಾರಿ ಮಳೆಯಿಂದಾಗಿ ಭಾರಿ ಪ್ರವಾಹಕ್ಕೆ ಸಿಲುಕಿರುವ ಆಂಧ್ರ ಪ್ರದೇಶದಲ್ಲಿ ಮಳೆಯಿಂದಾಗಿ ಸಂಭವಿಸಿದ ಅವಘಡಗಳಲ್ಲಿ ಸಾವನ್ನಪ್ಪಿದವರ ಸಂಖ್ಯೆ ಯಾಗಿದ್ದು, ಇನ್ನೂ ನೂರಾರು ಮಂದಿ ನಾಪತ್ತೆಯಾಗಿದ್ದಾರೆ.

ದಕ್ಷಿಣ ಆಂಧ್ರ ಪ್ರದೇಶದ ರಾಯಲಸೀಮ ಪ್ರಾಂತ್ಯದಲ್ಲಿ ಪ್ರವಾಹ ಹೆಚ್ಚಾಗಿದ್ದು, ಅನಂತಪುರ, ತಿರುಪತಿ, ಚಿತ್ತೂರಿನಲ್ಲಿ ಭಾರಿ ಮಳೆ ಮತ್ತು ಪ್ರವಾಹ ಮುಂದುವರೆದಿದೆ. ರಾಯಲಸೀಮಾ ಪ್ರದೇಶವು ಹೆಚ್ಚು ಹಾನಿಗೊಳಗಾಗಿದೆ. ರಾಜ್ಯದ ಚಿತ್ತೂರು, ಕಡಪ, ಕರ್ನೂಲು ಮತ್ತು ಅನಂತಪುರ ಜಿಲ್ಲೆಗಳು ಹಾನಿಗೀಡಾಗಿವೆ. ಗುರುವಾರದಿಂದ ಮಳೆ ಎಡೆಬಿಡದೆ ಸುರಿಯುತ್ತಿದ್ದು ಪರಿಣಾಮ ಚೆಯ್ಯೂರು ನದಿ ತುಂಬಿ ಹರಿಯುತ್ತಿದೆ. ಅನ್ನಮಯ್ಯ ನೀರಾವರಿ ಯೋಜನೆಗೂ ಪ್ರವಾಹದಿಂದ ಹಾನಿಯಾಗಿದೆ. ಮುಂಜಾಗ್ರತಾ ಕ್ರಮವಾಗಿ ಕಡಪ ವಿಮಾನ ನಿಲ್ದಾಣವನ್ನು ನವೆಂಬರ್ 25 ರವರೆಗೆ ಮುಚ್ಚಲಾಗಿದೆ.

ತಿರುಪತಿಯಲ್ಲಿ ಪ್ರವಾಹ ಮುಂದುವರೆದಿದ್ದು, ಮುಂಜಾಗ್ರತಾ ಕ್ರಮವಾಗಿ ತಿರುಮಲಕ್ಕೆ ಸಂಪರ್ಕ ಕಲ್ಪಿಸುವ ಘಾಟ್ ರಸ್ತೆಗಳನ್ನು ಮುಚ್ಚಲಾಗಿದೆ. ಅಲ್ಲದೆ ತಿರುಮಲ ನಡಿಗೆ ಮಾರ್ಗವನ್ನೂ ಬಂದ್ ಮಾಡಲಾಗಿದ್ದು, ಯಾತ್ರಿಕರ ಪ್ರವೇಶವನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ. ಮಳೆಯಿಂದಾಗಿ ತಿರುಪತಿ ಹೊರವಲಯದ ಸ್ವರ್ಣಮುಖಿ ನದಿಗೆ ಅಪಾರ ಪ್ರಮಾಣದ ನೀರು ಹರಿದುಬರುತ್ತಿದ್ದು, ಜಲಾಶಯಗಳು ತುಂಬಿ ಹರಿಯುತ್ತಿವೆ. ಪ್ರವಾಹದಲ್ಲಿ ಸಾಕಷ್ಟು ಮಂದಿ ಸಿಲುಕಿರುವ ಬಗ್ಗೆ ವರದಿಯಾಗಿದ್ದು, ಹಲವರು ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದಾರೆ ಎನ್ನಲಾಗಿದೆ. ಅಲ್ಲದೆ ದನಕರುಗಳೂ ಕೂಡ ಪ್ರವಾಹದಲ್ಲಿ ಕೊಚ್ಚಿ ಹೋಗಿವೆ ಎನ್ನಲಾಗಿದೆ.

Vishwa News 24

Recent Posts

ಉಡುಪಿ ಜಿಲ್ಲೆಯಾದ್ಯಂತ ಎಎನ್‌ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ – vishwanews24

ಉಡುಪಿ ಜಿಲ್ಲೆಯಾದ್ಯಂತ ಎಎನ್‌ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ ಉಡುಪಿ: ಸ್ವಯಂ ಚಾಲಿತ…

9 minutes ago

ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ – vishwanews24

ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ ಹೆಬ್ರಿ: ಪುವಾಸಿ ತಾಣವಾದ ಕೂಡು ಫಾಲ್ಸ್ ಪುವೇಶಕ್ಕೆ ಅರಣ್ಯ…

25 minutes ago

ಉಡುಪಿ : ವ್ಯಕ್ತಿ ನಾಪತ್ತೆ – vishwanews24

ಉಡುಪಿ : ವ್ಯಕ್ತಿ ನಾಪತ್ತೆ      ಉಡುಪಿ : ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಕುಶಾಲ್ ಶೆಟ್ಟಿ (55) ಎಂಬ…

45 minutes ago

ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ – vishwanews24

ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ ಕೊಲ್ಕತ್ತಾ: ಪಶ್ಚಿಮ…

50 minutes ago

ಉಡುಪಿ : ಜು. 10 ರಂದು ನೇರ ಸಂದರ್ಶನ – vishwanews24

ಉಡುಪಿ : ಜು. 10 ರಂದು ನೇರ ಸಂದರ್ಶನ      ಉಡುಪಿ : ಉಡುಪಿಯ ವಿ.ಪಿ ನಗರದ ಸುಧಾ ಫರ್ನೀರ‍್ಸ್ ಬಿಲ್ಡಿಂಗ್s…

1 hour ago

ಮಳೆಯ ಅಬ್ಬರ : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜು.8 (ನಾಳೆ ) ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ -vishwanews24

ಮಳೆಯ ಅಬ್ಬರ : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜು.8 (ನಾಳೆ ) ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಜಿಲ್ಲೆ…

15 hours ago