ಮಂಗಳೂರು: ಭಾರೀ ಗಾಳಿ-ಮಳೆಯ ಮುನ್ಸೂಚನೆ ಹಿನ್ನಲೆಯಲ್ಲಿ ಮಂಗಳೂರು ತಾಲೂಕಿನ ಎಲ್ಲಾ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ & ಪ್ರೌಢಶಾಲೆ, ಪದವಿ ಪೂರ್ವ ಕಾಲೇಜಿಗೆ ಜು.24 ರಂದು ರಜೆ ಘೋಷಿಸಲಾಗಿದೆ.
ಸಂಭಾವ್ಯ ಪ್ರವಾಹ, ಭೂಕುಸಿತ ಪ್ರದೇಶಗಳನ್ನು ಗುರುತಿಸಿ, ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು, ನೀರು ಇರುವ ತಗ್ಗು ಪ್ರದೇಶ. ಕೆರೆ, ನದಿ ತೀರ ಸಮುದ್ರ ತೀರಕ್ಕೆ ಸಾರ್ವಜನಿಕರು, ಪ್ರವಾಸಿಗರು ತೆರಳದಂತೆ ಜಾಗ್ರತೆ ವಹಿಸಬೇಕು. ಮೀನುಗಾರರು ಸಮುದ್ರಕ್ಕೆ ಮೀನುಗಾರಿಕೆಗೆ ತೆರಳಬಾರದೆಂದು ಸೂಚಿಸಲಾಗಿದೆ.
ತಾಲೂಕಿನಲ್ಲಿ ವಿಪರೀತ ಮಳೆ ಸುರಿಯುತ್ತಿರುವುದರಿಂದ ಸಾರ್ವಜನಿಕರು ನದಿಗಳ, ಹಳ್ಳಗಳ ಮತ್ತು ವಿದ್ಯುತ್ ಕಂಬ, ತಂತಿ ಸಮೀಪ ಹೋಗದಂತೆ ಎಚ್ಚರಿಕೆ ವಹಿಸಬೇಕು. ಸಂಭಾವ್ಯ ಹಾನಿಯ ತಡೆಗಟ್ಟುವ ಹಿನ್ನಲೆಯಲ್ಲಿ ಸಾರ್ವಜನಿಕರು ಅಪಾಯಕಾರಿ ಸನ್ನಿವೇಶಗಳಿಂದ ದೂರವಿದ್ದು, ತಾಲೂಕು ಆಡಳಿತದ ಸೂಚನೆಗಳ ಪಾಲಿಸಬೇಕು. ಪ್ರಾಕೃತಿಕ ವಿಕೋಪದಿಂದ ಯಾವುದೇ ರೀತಿಯ ಘಟನೆಗಳು ಸಂಭವಿಸಿದಲ್ಲಿ ಅಥವಾ ಸಂಭವಿಸಬಹುದಾದ ಸೂಚನೆ ಇದ್ದಲ್ಲಿ ಸಾರ್ವಜನಿಕರು ಕೂಡಲೇ ಸಂಬಂಧಪಟ್ಟ ಪಂಚಾಯತ್, ನಗರ ಸ್ಥಳೀಯ ಸಂಸ್ಥೆಗಳಿಗೆ ಮಾಹಿತಿ ನೀಡಬೇಕು ಎಂದು ತಹಸೀಲ್ದಾರರು ತಿಳಿಸಿದ್ದಾರೆ.
ಕಾಪು : ಟೈಮಿಂಗ್ಸ್ ವಿಚಾರದಲ್ಲಿ ಉದ್ದೇಶಪೂರ್ವಕ ಬಸ್ ನಿಲ್ದಾಣದಲ್ಲಿ ಬಸ್ಗಳ ಗುದ್ದಾಟ - ನಾಲ್ವರ ಬಂಧನ ಕಾಪು : ಕಾಪು…
ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! ಬೆಂಗಳೂರು: ಯುವ ಜನರಲ್ಲಿ ಹೆಚ್ಐವಿ ಸೋಂಕಿನ…
ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ…
ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ :…
ಮಂಗಳೂರು: ಡಿವೈಡರ್ಗೆ ಬಸ್ ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು ಮಂಗಳೂರು : ಖಾಸಗಿ ಎಕ್ಸ್ಪ್ರೆಸ್ ಬಸ್ಸೊಂದು ಮಂಗಳೂರು-ಮೂಡುಬಿದಿರೆ ರಾಷ್ಟ್ರೀಯ…
ಕಾಪು : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಎಕ್ಸ್ಪ್ರೆಸ್ ಬಸ್ ನಿಲ್ದಾಣದಲ್ಲಿ ಬಸ್ಗಳ ಗುದ್ದಾಟ ಕಾಪು: ಎರಡು ಎಕ್ಸ್ಪ್ರೆಸ್ ಬಸ್ಸುಗಳು ಪ್ರಯಾಣಿಕರು…